ಬೆಂಗಳೂರು : ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ಸನಿಹಕ್ಕೆ ಬಂದು ನಿಂತಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಹಾಗೂ ಜೆಡಿಎಸ್ ಪಕ್ಷದ ಕೃಷ್ಣಮೂರ್ತಿ ವಿರುದ್ಧ ಹೆಚ್ಚಿನ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಹ್ಯಾಟ್ರಿಕ್ ಗೆಲುವು ಸಾಧಿಸುವುದು ಬಹುತೇಕ ಖಚಿತವಾದಂತಾಗಿದೆ.

ಈ ಕ್ಷೇತ್ರದ 20ನೇ ಸುತ್ತಿನ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು 1,03,291 ಮತಗಳನ್ನು ಪಡೆದು ಮುನ್ನಡೆ ಕಾಯ್ದು ಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು 58,743 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಅವರು 7,772 ಮತಗಳನ್ನು ಪಡೆದಿದ್ದಾರೆ. ಮುನಿರತ್ನ ಅವರು 44,548 ಮತಗಳ ಅಂತರಿಂದ ಮುನ್ನಡೆ ಸಾಧಿಸಿದ್ದಾರೆ.

ಮುನಿರತ್ನ ಅವರ ಅಂತರ 44 ಸಾವಿರ ದಾಟಿದ್ದು, ಇನ್ನು 5 ಸುತ್ತುಗಳ ಮತ ಎಣಿಕೆ ಮಾತ್ರ ಬಾಕಿ ಇದೆ. ಆದರೆ, ಮುನಿರತ್ನ ಅವರು ಸಾಧಿಸಿರುವ ಮುನ್ನಡೆಯನ್ನು ಇನ್ನು ಉಳಿದಿರುವ 5 ಸುತ್ತುಗಳಲ್ಲಿ ದಾಟಲು ಕಾಂಗ್ರೆಸ್ ಅಭ್ಯರ್ಥಿಗೆ ಆಗುವುದಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ಎಲ್ಲಾ ಸುತ್ತುಗಳ ಮತ ಎಣಿಕೆ ಪೂರ್ಣಗೊಂಡು ಬಹುಮತದ ಅಂತರವಷ್ಟೇ ನಿರ್ಧಾರವಾಗಬೇಕಿದೆ.

ಬಿಜೆಪಿ ಮತ್ತು ಕಾಂಗ್ರೆಸ್‌ನ ಅಬ್ಬರದ ಪ್ರಚಾರ, ಆರೋಪ– ಪ್ರತ್ಯಾರೋಪ, ಜಾತಿ– ಕಣ್ಣೀರ ರಾಜಕಾರಣದ ಕಾರಣದಿಂದ ರಾಜರಾಜೇಶ್ವರಿ ನಗರದ ಉಪ ಚುನಾವಣೆ ಕುತೂಹಲ ಕೆರಳಿಸಿತ್ತು.

Leave a Reply

Your email address will not be published. Required fields are marked *

You May Also Like

ಮಾ.11 ರಿಂದ ದ್ವಾದಶ ಜ್ಯೋತಿರ್ಲಿಂಗ ದರ್ಶನ

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಸಹಯೋಗದಲ್ಲಿ ಮಾ.11 ರಿಂದ 13ರ ವರೆಗೆ ಸಂಜೆ 4 ರಿಂದ ರಾತ್ರಿ 10ರ ವರೆಗೆ ನಗರದ ಮುನ್ಸಿಪಲ್ ಪದವಿ ಪೂರ್ವ ಕಾಲೇಜ ಮೈದಾನದಲ್ಲಿ ದಿನಗಳಲ್ಲಿ ವಿಶ್ವದಲ್ಲಿ ಅವತರಿಸಿದ ವಿಶ್ವೇಶ್ವರನ ದರ್ಶನ, ಸಹಸ್ರಲಿಂಗ ದರ್ಶನ ಮತ್ತು ದ್ವಾದಶ ಜ್ಯೋತಿರ್ಲಿಂಗ ದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ರಹ್ಮಕುಮಾರಿ ಬಿ.ಕೆ.ಜಯಂತಿಅಕ್ಕ ಹೇಳಿದರು.

ಜಿಪಂ, ತಾಪಂ ಸೇರಿ ರಾಜ್ಯದಲ್ಲಿ ಎಲ್ಲ ಚುನಾವಣೆ ಮುಂದೂಡಿಕೆ

ಈಗಾಗಲೇ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು ರಾಜ್ಯ ಸರ್ಕಾರ ಸೋಮವಾರ ನಡೆದ ಸಂಪುಟ ಸಭೆಯಲ್ಲಿ 14 ದಿನಗಳ ಕಾಲ ಜನತಾ ಕರ್ಪ್ಯೂಗೆ ನಿರ್ಧರಿಸಿದೆ.

ಗಜೇಂದ್ರಗಡ: ಗಾಯಕ ಎಸ್ಪಿಬಿ ಅವರಿಗೆ ಶ್ರದ್ಧಾಂಜಲಿ

ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ವಿಧಿವಶರಾದ ಹಿನ್ನಲೆಯಲ್ಲಿ ಪಟ್ಟಣದ ಅಭಿಮಾನಿಗಳು ಮತ್ತು ಸಂಘ ಸಂಸ್ಥೆಗಳು ಸಂತಾಪ ಸೂಚಿಸಿದ್ದಾರೆ.

ಮೂಲಭೂತ ಸೌಲಭ್ಯ ವಂಚಿತ ಪ್ರವಾಸಿ ಮಂದಿರ

ಅತಿಥಿ ಸತ್ಕಾರಕ್ಕಾಗಿ ಪಟ್ಟಣದಲ್ಲಿ ನಿರ್ಮಿಸಿದ್ದ ಪ್ರವಾಸಿ ಮಂದಿರದ ಸಂರಕ್ಷಣೆಗೆ ನಿರ್ಲಕ್ಷ್ಯದಿಂದ ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ವಿಶ್ರಾಂತಿಗಾಗಿ ಬಂದೀರಿ ಜೊಕೆ ಪ್ರವಾಸಿಗರೆ ಎನ್ನುವಂತಿದೆ ಗದಗ ಜಿಲ್ಲೆ ಲಕ್ಷ್ಮೆಶ್ವರ ಪಟ್ಟಣದಲ್ಲಿ ಪ್ರವಾಸಿ ಮಂದಿರ.