ಡಂಬಳ: ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಬಾಲಕ ಚನ್ನವೀರಗೌಡ ಮೃತ ಬಾಲಕ. ಗೆಳೆಯರೊಂದಿಗೆ ಬುಧವಾರ ಈಜಲ ಹೋದಾಗ ಇಲ್ಲಿನ ಹಿರೇಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಈತನ ಜೊತೆಗೆ ಈಜಲು ಹೋದ ಗೆಳೆಯರು ಗ್ರಾಮದಲ್ಲಿ ಮಾಹಿತಿ ನೀಡಿದ ಹಿನ್ನೆಲೆ ಗ್ರಾಮಸ್ಥರು ಹಾಗು ಮೃತ ಬಾಲಕನ ಕುಟುಂಬಸ್ಥರು ಹಿರೇಹಳ್ಳದ ಬಳಿ ಜಮಾವಣೆಗೊಂಡರು. ಬುಧವಾರ ಬೆಳಿಗ್ಗೆ 11 ಗಂಟೆಯಿಂದಲೇ ಮೃತ ದೇಹ ಪತ್ತೆಗಾಗಿ ಶೋಧ ಕಾರ್ಯ ನಡೆದಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಮೀನುಗಾರರು ಹಾಗು ಸ್ಥಳೀಯರ ಸಹಕಾರದಿಂದ ಇಂದು ಮೃತದೇಹ ಹೊರತೆಗೆದರು. ಸ್ಥಳಕ್ಕೆ ಮುಂಡರಗಿ ಪೊಲೀಸ್ ಠಾಣೆಯ ಸಿಪಿಐ ಸುಧೀರ್ ಬೆಂಕಿ ಭೇಟಿ ನೀಡಿದ್ದರು

Leave a Reply

Your email address will not be published. Required fields are marked *

You May Also Like

ಶಾರ್ಟ್ ಸರ್ಕ್ಯೂಟ್: ಭಾರತ್ ಗ್ಯಾಸ್ ವಿತರಣಾ ಕಚೇರಿಯಲ್ಲಿ ಬೆಂಕಿ!

ಶಾರ್ಟ್ ಸರ್ಕ್ಯೂಟ್ ನಿಂದ ಗ್ಯಾಸ್ ಕಚೇರಿಗೆ ಬೆಂಕಿ ಬಿದ್ದ ಘಟನೆ ಗದಗ ನಗರದಲ್ಲಿ ನಡೆದಿದೆ. ಇಲ್ಲಿನ ಭಾರತ್ ಗ್ಯಾಸ್ ಆಫೀಸಿಗೆ ಬೆಂಕಿ ಬಿದ್ದಿದ್ದು,ಯಾವುದೇ ಪ್ರಾಣ ಹಾನಿ ಸಂಭವಿಸದೇ ಭಾರಿ ಅನಾಹುತ ತಪ್ಪಿದಂತಾಗಿದೆ.

ಮಹಾಮಾರಿಗೆ ತತ್ತರಿಸಿದ ಮಹಾರಾಷ್ಟ್ರ- ನಿನ್ನೆ ಒಂದೇ ದಿನ ಎಷ್ಟು ಕೇಸ್ ಗಳು ಗೊತ್ತಾ?

ಮುಂಬಯಿ : ಕೊರೊನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ…

ಮುಂಬೈನ 800 ಚದರ ಅಡಿ ಜಾಗಕ್ಕೆ ತಿಂಗಳಿಗೆ 1 ರೂಪಾಯಿ!: ಪತ್ನಿಗೆ ಲೀಸ್ ಕೊಟ್ಟ ಬ್ಯಾಂಕ್ ಚೇರ್ಮನ್

ಖಾಸಗಿ ಬ್ಯಾಂಕಿನ ಮುಖ್ಯಸ್ಥರೊಬ್ಬರು ತಮ್ಮ ಪತ್ನಿಯ ಎನ್.ಜಿ.ಒ.ಗೆ ತಮ್ಮ ಬ್ಯಾಂಕಿನ ಪಕ್ಕದ ಜಾಗವನ್ನು ಬಳಸಿಕೊಳ್ಳಲು ನೀಡಿದ್ದ ವಿಷಯ ಈಗ ಬೆಳಕಿಗೆ ಬಂದಿದೆ. ತಿಂಗಳಿಗೆ ನಾಮಕಾವಸ್ಥೆ ಒಂದೇ ಒಂದು ರೂಪಾಯಿ ಬಾಡಿಗೆಯಷ್ಟೇ ಎಂದು ಎನ್.ಡಿ.ಟಿ.ವಿ ವರದಿ ಮಾಡಿದೆ. ಯೆಸ್ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕ್ ಗಳು ದಿವಾಳಿ ಹೊಂದಿದ್ದರ ಹಿಂದೆ ಬ್ಯಾಂಕ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರ ಸ್ವಾರ್ಥವಿತ್ತು ಎನ್ನುವುದನ್ನು ನೋಡಿದ್ದೇವೆ.

24 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಯಾವ ಶಾಸಕರಿಗೆ ಯಾವ ನಿಗಮ?

ರಾಜ್ಯ ಬಿಜೆಪಿ ಸರ್ಕಾರಕ್ಕೆ ಈಗ ಒಂದು ವರ್ಷ. ವರ್ಷ ತುಂಬಿದ ಈ ಸಂದರ್ಭದಲ್ಲಿ ಸರ್ಕಾರ ವಿವಿಧ 24 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿ ಆದೇಶಿಸಿದೆ.