ಮಸ್ಕಿ: ಕನಕಗಿರಿ ಕ್ಷೇತ್ರದ ಕುರುಬ ಸಮಾಜದ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ನಾಗಪ್ಪ ಸಾಲೋಣಿಗೆ ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನ ನೀಡಬೇಕೆಂದು ಇಲ್ಲಿನ ಕುರುಬ ಸಮಾಜದ ಯುವ ಮುಖಂಡ ಬೀರಪ್ಪ ವೆಂಕಟಾಪೂರ ಒತ್ತಾಯಿಸಿದ್ದಾರೆ.

ಹತ್ತಾರು ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ತಮ್ಮದೇ ಆದ ಪ್ರಾಭಲ್ಯ ಹೊಂದಿದ್ದಾರೆ. ಕ್ಷೇತ್ರದ ಶಾಸಕ ದಡೇಸಗೂರು ಹಾಗೂ ಸಂಸದ ಕರಡಿ ಸಂಗಣ್ಣ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಲು ಟೊಂಕ ಕಟ್ಟಿಕೊಂಡು ಕ್ಷೇತ್ರದಲ್ಲಿ ಸಂಚಿಸಿ ಕೆಲಸ ಮಾಡಿದ್ದಾರೆ. ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ.

ಅವರ ಶ್ರಮಕ್ಕೆ ಪ್ರತಿಫಲ ಸಿಗಲು ಬಿಜೆಪಿ ಸರ್ಕಾರ ಗುರುತಿಸಿ ನಿಗಮ ಮಂಡಳಿಯ ಕಾಡಾ ಅಧ್ಯಕ್ಷ ಸ್ಥಾನ ನೀಡಬೇಕು. ನಿಗಮ ಮಂಡಳಿಯಲ್ಲಿ ಸ್ಥಾನ ನೀಡಿದರೆ ಹಿಂದುಳಿದ ವರ್ಗಗಳ ಬೆಂಬಲ ಬಿಜೆಪಿ ಪಕ್ಷಕ್ಕೆ ಹೆಚ್ಚಿನದಾಗಿ ಸಿಗುತ್ತದೆ. ಹಾಗೂ ಕುರುಬ ಸಮಾಜಕ್ಕೆ ನ್ಯಾಯ ದೊರಕಿದಂತಾಗುತ್ತದೆ ಕೂಡಲೇ ರಾಜ್ಯದ ಮುಖ್ಯಮಂತ್ರಿಗಳು ನಾಗಪ್ಪ ಸಾಲೋಣಿ ಅವರಿಗೆ ಕಾಡಾ ಅಧ್ಯಕ್ಷ ಸ್ಥಾನ ನೀಡಬೇಕೆಂದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10118…

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ

ಕೊರೋನಾ ಸೊಂಕಿಗೆ ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿದ್ದು, ರಾಜ್ಯ-ದೇಶ-ರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಅಪ್ಡೇಟ್ ಮಾಹಿತಿ..

ನಕಲಿ ಜಾತಿ ಪ್ರಮಾಣ ಪತ್ರ ಆರೋಪ: ಪಟ್ಟಣ ಪಂಚಾಯ್ತಿ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

ಸ್ಥಳೀಯ ಪಟ್ಟಣ ಪಂಚಾಯತಿಗೆ 2018 ರ ಚುನಾವಣೆಯಲ್ಲಿ ಎಸ್‌.ಸಿ ಮೀಸಲಿದ್ದ 11ನೇ ವಾರ್ಡನಿಂದ ಆಯ್ಕೆಯಾಗಿರುವ ಬಸವಂತಪ್ಪ ಶಿ. ಹಾರೋಗೇರಿ ಅವರ ಜಾತಿ ಪ್ರಮಾಣ ಪತ್ರ ನಕಲಿ ಇದ್ದು ತನಿಖೆ ನಡೆಸಿ ಪಪಂ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಪ್ರತಿಸ್ಪರ್ದಿ ಮರಿಯಪ್ಪ ನೀ. ನಡಗೇರಿ ಆಗ್ರಹಿಸಿದರು.

24ರಂದು ನಗರ ಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ

ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಜ. 24 ರಂದು ತೀರ್ಮಾನಿಸಲಾಗಿದೆ. ಈ…