ಮಸ್ಕಿ: ಕನಕಗಿರಿ ಕ್ಷೇತ್ರದ ಕುರುಬ ಸಮಾಜದ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ನಾಗಪ್ಪ ಸಾಲೋಣಿಗೆ ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನ ನೀಡಬೇಕೆಂದು ಇಲ್ಲಿನ ಕುರುಬ ಸಮಾಜದ ಯುವ ಮುಖಂಡ ಬೀರಪ್ಪ ವೆಂಕಟಾಪೂರ ಒತ್ತಾಯಿಸಿದ್ದಾರೆ.

ಹತ್ತಾರು ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ತಮ್ಮದೇ ಆದ ಪ್ರಾಭಲ್ಯ ಹೊಂದಿದ್ದಾರೆ. ಕ್ಷೇತ್ರದ ಶಾಸಕ ದಡೇಸಗೂರು ಹಾಗೂ ಸಂಸದ ಕರಡಿ ಸಂಗಣ್ಣ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಲು ಟೊಂಕ ಕಟ್ಟಿಕೊಂಡು ಕ್ಷೇತ್ರದಲ್ಲಿ ಸಂಚಿಸಿ ಕೆಲಸ ಮಾಡಿದ್ದಾರೆ. ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ.

ಅವರ ಶ್ರಮಕ್ಕೆ ಪ್ರತಿಫಲ ಸಿಗಲು ಬಿಜೆಪಿ ಸರ್ಕಾರ ಗುರುತಿಸಿ ನಿಗಮ ಮಂಡಳಿಯ ಕಾಡಾ ಅಧ್ಯಕ್ಷ ಸ್ಥಾನ ನೀಡಬೇಕು. ನಿಗಮ ಮಂಡಳಿಯಲ್ಲಿ ಸ್ಥಾನ ನೀಡಿದರೆ ಹಿಂದುಳಿದ ವರ್ಗಗಳ ಬೆಂಬಲ ಬಿಜೆಪಿ ಪಕ್ಷಕ್ಕೆ ಹೆಚ್ಚಿನದಾಗಿ ಸಿಗುತ್ತದೆ. ಹಾಗೂ ಕುರುಬ ಸಮಾಜಕ್ಕೆ ನ್ಯಾಯ ದೊರಕಿದಂತಾಗುತ್ತದೆ ಕೂಡಲೇ ರಾಜ್ಯದ ಮುಖ್ಯಮಂತ್ರಿಗಳು ನಾಗಪ್ಪ ಸಾಲೋಣಿ ಅವರಿಗೆ ಕಾಡಾ ಅಧ್ಯಕ್ಷ ಸ್ಥಾನ ನೀಡಬೇಕೆಂದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ತಾ.ಪಂ ಇಒ ಲಂಚ ಪಡೆಯುವ ವೇಳೆ ಎಸಿಬಿ ದಾಳಿ

ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ತಾ.ಪಂ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ತಾ.ಪಂ ಇಒ ಜನರಿಂದ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ಮಾಡಿದ್ದು, ಇಒ ಸಿಕ್ಕಿಬಿದ್ದಿದ್ದಾನೆ.

ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲಿಸಿ

ಗದಗ:ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಹಾಗೂ ಸೋಂಕಿತ ಚಿಕಿತ್ಸೆ ನೀಡುವಲ್ಲಿ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನ…

ಕೊರ್ಲಹಳ್ಳಿಯಲ್ಲಿ ನೀರಿನ ಗೋಳು: ತುಂಗೆಯ ಪಾತ್ರದಲ್ಲೂ ನೀರಿಗೆ ತಾಪತ್ರಯ!

ನದಿ ನೀರಿನ ಪಾತ್ರದ ಗ್ರಾಮಗಳಲ್ಲೂ ನೀರಿನ ಸಮಸ್ಯೆ ಇದೆ ಎಂದರೆ ನಿಜಕ್ಕೂ ಆಶ್ಚರ್ಯ. ಹೌದು ನೀರಿನ ಸಮಸ್ಯೆ ಎಂದರೆ ಒಂದೆಡೆ ಆಳುವವರ ನಿರ್ಲಕ್ಷ್ಯ, ಮತ್ತೊಂದೆಡೆ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಹೆಚ್ಚಿನ ಹಣದ ವಸೂಲಿ. ಇದರಿಂದ ಗ್ರಾಮಸ್ಥರು ತತ್ತಿರಿಸುವಂತಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.