ಗದಗ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ಸೆಕ್ಯೂರಿಟಿ ಗಾರ್ಡ್ ನನ್ನು ಕೊಲೆ ಮಾಡಿದ ಘಟನೆ ತಡರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಗಂಗಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ‌. ಗಂಗಾಪೂರದ ವಿಜಯ ನಗರ ಸಕ್ಕರೆ ಕಾರ್ಖಾನೆ ಹಿಂಬದಿಯ ರಸಗೊಬ್ಬರ ಗೊದಾಮಿನಲ್ಲಿ ಘಟನೆ ನಡೆದಿದ್ದು, ಫಕ್ಕಿರೇಶ್ ತಳವಾರ‌ (32) ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಆದರೆ ಘಟನೆ ಮಾತ್ರ ಹಲವು ಸಂಶಯಗಳಿಗೆ ಎಡೆಮಾಡಿ ಕೊಟ್ಟಿದೆ‌. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾಸನಾಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು‌. ಫಕ್ಕೀರೇಶ್ ಪತ್ನಿ ದೂರು ಹಿನ್ನೆಲೆ ಮುಂಡರಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಾರ್ಮಿಕರನ್ನು ಗಮ್ಯ ಸ್ಥಾನಕ್ಕೆ ತಲುಪಿಸುತ್ತಿರುವ ರೈಲ್ವೆ ಇಲಾಖೆ!

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಲುಕಿದ್ದ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಯಾತ್ರಾರ್ಥಿಗಳನ್ನು ಸಾಗಿಸುವ ಕಾರ್ಯ ನಡೆದಿದೆ. ವಿಶೇಷ ರೈಲಿನಲ್ಲಿ ಸುಮಾರು 1200 ವಲಸಿಗರನ್ನು ಹೊತ್ತ ರೈಲು ತನ್ನ ಪ್ರಯಾಣ ಪ್ರಾರಂಭಿಸಿದೆ.

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು?

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು? ಬೆಂಗಳೂರು : ತಬ್ಲಿಘಿ ಪರ…

ಕೊರೋನಾ ಸೋಂಕು ತಪಾಸಣೆಗೆ ಒಳಪಡುವವರು ಬೇರೆಯವರ ಮೊಬೈಲ್ ನಮೂದಿಸಬೇಡಿ: ಸುಧಾಕರ್

ಕೊರೋನಾ ಸೋಂಕು ತಪಾಸಣೆಗೆ ಒಳಪಡುವ ಸಾರ್ವಜನಿಕರು ತಾವು ಬಳಸುವ ತಮ್ಮದೇ ಮೊಬೈಲ್ ಸಂಖ್ಯೆಯನ್ನು ಅಧಿಕೃತ ನಮೂನೆಯಲ್ಲಿ ದಾಖಲಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಕೆ.ಸುಧಾಕರ್ ಮನವಿ ಮಾಡಿದ್ದಾರೆ .

ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ರೆ ಚುನಾವಣೆಗೆ ಸಿದ್ಧ: ಸಿದ್ದರಾಮಯ್ಯ

ಬಿಜೆಪಿಯ ಆಂತರಿಕ ವಿಚಾರಕ್ಕೆ ನಾವು ಹೋಗುವದಿಲ್ಲ. ಆದರೆ ತಾವೇ ಹೊಡೆದಾಡಿಕೊಂಡು ಸರ್ಕಾರ ಬಿದ್ದರೆ, ಚುನಾವಣೆ ಎದುರಿಸಲು ನಾವು ಸಿದ್ಧ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.