ಗದಗ: ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಅಕ್ಕಿ ವಶಕ್ಕೆ ಪಡೆದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣ್ಣದಿಂದ ಕೊಪ್ಪಳ ಜಿಲ್ಲೆಯ ಗಂಗಾವತಿಗೆ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸಲಾಗುತ್ತಿತ್ತು. 50 ಕೆಜಿಯ ,600 ಪಾಕೆಟ್, ಸೇರಿದಂತೆ ಲಾರಿ ವಶಕ್ಕೆ ಪಡೆಯಲಾಗಿದೆ. ಅಂದಾಜು 5 ಲಕ್ಷ ಹೆಚ್ಚು ಮೌಲ್ಯದ ಅನ್ನ ಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರೆನ್ನಲಾಗಿದ್ದು, ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆಹಾರ ಇಲಾಖೆ ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *

You May Also Like

ಮದ್ಯಸೇವನೆ: ಯುವಕ ಸಾವು

ಕೊರೊನೊ ಸೋಂಕು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಲಾಗಿದ್ದ ವೈನ್ ಶಾಪ್ ಗಳು ತೆರೆಯುತ್ತಿದ್ದಂತೆ ಕುಡುಕರು ಬೇಕಾ‌ಬಿಟ್ಟಿ ಸಾರಾಯಿ ಕುಡಿದು ನಶೆ ಎರಿಸಿಕೊಂಡಿದ್ದಾರೆ. ಇದರ ಪರಿಣಾಮ ಸಾರಾಯಿ ಬಲಿ ಪಡೆದುಕೊಂಡಿದೆ.

ಸಾಲಬಾಧೆ ತಾಳಲಾಗದೆ ಅನ್ನದಾತ ಆತ್ಮಹತ್ಯೆ

ವರದಿ: ವಿಠಲ‌ ಕೆಳೂತ್ ಮಸ್ಕಿ: ಸಾಲಭಾದೆ ತಾಳಲಾರದೆ‌ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತುರ್ವಿಹಾಳ…

ಭಾರತ ಮನು ಕುಲದ ಒಳಿತಿಗಾಗಿ ಶ್ರಮಿಸುತ್ತಿದೆ – ಮೋದಿ

ಇಂದು ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ.

ಕೊರೋನಾ ಸೊಂಕು: ಪೊಲೀಸರಲ್ಲೂ ಆತಂಕ

ಕೊರೋನಾ ಸೊಂಕು: ಪೊಲೀಸರಲ್ಲೂ ಆತಂಕ ಬೆಂಗಳೂರು : ಬೇಗೂರು ಪೊಲೀಸ್ ಠಾಣೆಯ ಪೇದೆಯೊಬ್ಬರಿಗೆ ಕೊರೊನಾ ಸೋಂಕು…