ಲಕ್ಷ್ಮೇಶ್ವರ: ಬೆಳಗಾವಿ ಜಿಲ್ಲೆ ಪೀರಣವಾಡಿ ಗ್ರಾಮದಲ್ಲಿ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣನ ಮೂರ್ತಿಗೆ ಅವಮಾನ ಮಾಡಿರುವುದನ್ನು ಖಂಡಿಸಿ ಅಖಿಲ ಕರ್ನಾಟಕ ಸಂಗೋಳ್ಳಿ ರಾಯಣ್ಣ ಯುವಶಕ್ತಿ ವೇದಿಕೆ ಲಕ್ಷ್ಮೇಶ್ವರ ತಾಲೂಕ ಘಟಕದ ವತಿಯಿಂದ ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ತಾಲೂಕು ಅಧ್ಯಕ್ಷ ಸುರೇಶ ಹಟ್ಟಿ ಮಾತನಾಡಿ, ಬೆಳಗಾವಿ ಜಿಲ್ಲೆ ಪೀರಣವಾಡಿ ಗ್ರಾಮದಲ್ಲಿ ಪ್ರಥಮ ಸ್ವಾತಂತ್ರ್ಯ ಸೇನಾನಿ ಅಪ್ಪಟ ದೇಶ ಪ್ರೇಮಿ, ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಮೂರ್ತಿಗೆ ಕೆಲ ದುಷ್ಕರ್ಮಿಗಳು ಉದ್ದೇಶ ಪೂರ್ವಕವಾಗಿ ಅವಮಾನಿಸಿ ಭಾವಚಿತ್ರ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಮುದಾಯಗಳ ನಡುವೆ ಗೊಂದಲ ಸೃಷ್ಠಿಸಿದ್ದಾರೆ. ಹೀಗಾಗಿ ಮೂರ್ತಿಗೆ ಅವಮಾನ ಮಾಡಿದ ವ್ಯಕ್ತಿಗಳ ಮೇಲೆ ಸೂಕ್ತವಾದ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಮಾನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ನೀಲಪ್ಪ ಪಡಗೇರಿ, ಮಂಜು ಮುಳಗುಂದ, ಗೋಳಪ್ಪ ಪೂಜಾರ, ಮಂಜುನಾಥ ಕಲ್ಲೂರ, ಸಿದ್ದಪ್ಪ ಕರಿಗಾರ, ಮಾಂತೇಶ ಆನಂದ ಗಡದವರ, ಗಂಗಾಧರ ಹಳ್ಳಿಕೇರಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು!

ಬೀದರ್: ಕ್ವಾರಂಟೈನ್ ನಲ್ಲಿದ್ದ ಯುವಕನೊಬ್ಬ ಇಂದು ಬೆಳಗ್ಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಔರಾದ್…

ಎರಡು ತಲೆ ಹಾವು ವಶಕ್ಕೆ – ಐವರ ಬಂಧನ!

ಮೈಸೂರು : ಎರಡು ತಲೆ ಹಾವಿನೊಂದಿಗೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಆಲಮಟ್ಟಿ 26 ಗೇಟ್ ಓಪನ್ – ಅಪಾರ ನೀರು ಹೊರಕ್ಕೆ

ಉತ್ತರಪ್ರಭ ಸುದ್ದಿಆಲಮಟ್ಟಿ: ನೆರೆಯ ಮಹಾರಾಷ್ಟ್ರ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಕೃಷ್ಣಾ ನದಿ ಹರಿವಿನಲ್ಲಿ…

ಸಿಎಂಗೆ ಕೊರೊನಾ ಪಾಸಿಟಿವ್ ದೃಢ!

ಸಿಎಂ ಬಿ.ಎಸ್​. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.