ಲಕ್ಷ್ಮೇಶ್ವರ: ಬೆಳಗಾವಿ ಜಿಲ್ಲೆ ಪೀರಣವಾಡಿ ಗ್ರಾಮದಲ್ಲಿ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣನ ಮೂರ್ತಿಗೆ ಅವಮಾನ ಮಾಡಿರುವುದನ್ನು ಖಂಡಿಸಿ ಅಖಿಲ ಕರ್ನಾಟಕ ಸಂಗೋಳ್ಳಿ ರಾಯಣ್ಣ ಯುವಶಕ್ತಿ ವೇದಿಕೆ ಲಕ್ಷ್ಮೇಶ್ವರ ತಾಲೂಕ ಘಟಕದ ವತಿಯಿಂದ ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ತಾಲೂಕು ಅಧ್ಯಕ್ಷ ಸುರೇಶ ಹಟ್ಟಿ ಮಾತನಾಡಿ, ಬೆಳಗಾವಿ ಜಿಲ್ಲೆ ಪೀರಣವಾಡಿ ಗ್ರಾಮದಲ್ಲಿ ಪ್ರಥಮ ಸ್ವಾತಂತ್ರ್ಯ ಸೇನಾನಿ ಅಪ್ಪಟ ದೇಶ ಪ್ರೇಮಿ, ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಮೂರ್ತಿಗೆ ಕೆಲ ದುಷ್ಕರ್ಮಿಗಳು ಉದ್ದೇಶ ಪೂರ್ವಕವಾಗಿ ಅವಮಾನಿಸಿ ಭಾವಚಿತ್ರ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಮುದಾಯಗಳ ನಡುವೆ ಗೊಂದಲ ಸೃಷ್ಠಿಸಿದ್ದಾರೆ. ಹೀಗಾಗಿ ಮೂರ್ತಿಗೆ ಅವಮಾನ ಮಾಡಿದ ವ್ಯಕ್ತಿಗಳ ಮೇಲೆ ಸೂಕ್ತವಾದ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಮಾನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ನೀಲಪ್ಪ ಪಡಗೇರಿ, ಮಂಜು ಮುಳಗುಂದ, ಗೋಳಪ್ಪ ಪೂಜಾರ, ಮಂಜುನಾಥ ಕಲ್ಲೂರ, ಸಿದ್ದಪ್ಪ ಕರಿಗಾರ, ಮಾಂತೇಶ ಆನಂದ ಗಡದವರ, ಗಂಗಾಧರ ಹಳ್ಳಿಕೇರಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಅತಿವೃಷ್ಟಿ ಅನಾಹುತ ನಿರ್ವಣೆಗೆ ಅನುದಾನ ಬಿಡುಗಡೆ ಮಾಡಿ: ಎಚ್.ಡಿ.ಕುಮಾರಸ್ವಾಮಿ

ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈದ್ ಮೀಲಾದ್ ಆಚರಣೆಗೆ ಸರ್ಕಾರದ ಮಾರ್ಗಸೂಚಿಗಳು

ಬೆಂಗಳೂರು: ಮುಸ್ಲೀಂ ಬಾಂಧವರು ದಿನಾಂಕ 30-10-2020 ರಂದು ರಾಜ್ಯಾದ್ಯಂತ ಈದ್ ಮೀಲಾದ್ ಹಬ್ಬವನ್ನು ಆಚರಿಸಲಿದ್ದು, ಹಬ್ಬ ಆಚರಣೆಯ ಬಗ್ಗೆ ಸರ್ಕಾರದ ಮಾರ್ಗಸೂಚಿ ಈ ಕೆಳಗಿನಂತಿದೆ.

ಆಲಮಟ್ಟಿಯ ಮರಿಮಟ್ಟಿಯಲ್ಲಿ ಜಾನಪದ ಕಲಾವಿದರಿಗೆ ಬಟ್ಟೆ ವಿತರಣಾ ಸಮಾರಂಭ ಜರುಗಿತು

ಉತ್ತರಪ್ರಭಆಲಮಟ್ಟಿ: ಜಾನಪದ ಕಲೆಗಳು ನಮ್ಮ ಪರಂಪರೆಯ ಜೀವಾಳವಾಗಿದ್ದು ಅವು ಮೌಲ್ಯಾಧಾರಿತ ಸಂಸ್ಕೃತಿಯ ಪ್ರತೀಕವಾಗಿವೆ, ಎಂದು ಕನ್ನಡ…

ಇಂದು 48 ಜನರಲ್ಲಿ ಕಂಡು ಬಂದ ಸೋಂಕು!! ಆತಂಕದಲ್ಲಿ ರಾಜ್ಯ!!

ಮಹಾಮಾರಿ ಕೊರೊನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇವತ್ತು ಒಂದೇ ದಿನ 48 ಪ್ರಕರಣಗಳು ದಾಖಲಾಗಿವೆ.