ಶಿರಹಟ್ಟಿ: ಸರ್ಕಾರ ಅವೈಜ್ಞಾನಿಕವಾಗಿ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮ ಎಂದು ಘೋಷಿಸಿದ್ದು, ಶಿರಹಟ್ಟಿ ತಾಲೂಕಿನ‌ ಬ್ಲಾಕ್ ನಂ 3 ಮತ್ತು 4 ರ ಅರಣ್ಯ ಕ್ಷೇತ್ರವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಅಹಿಂದ್ ಸಂಘ ಹಾಗೂ‌ ಕ್ರಷರ್ ಮತ್ತು‌ ಕಲ್ಲು ಗಣಿಗಾರಿಕೆ ಕಾರ್ಮಿಕ ಒಕ್ಕೂಟ ಸಂಘದ ವತಿಯಿಂದ ಬುಧವಾರ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ‌ ಮನವಿ‌ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಹಿಂದ ಸಂಘದ ಕಾರ್ಯದರ್ಶಿ ಸಂತೋಷ ಕುರಿ ಮಾತನಾಡಿ, ಈಗಾಗಲೇ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ನೋಟಿಸ್ ನೀಡಲಾಗಿದ್ದು, ಇದನ್ನು ಸ್ಥಗಿತಗೊಳಿಸುವುದರಿಂದ ಹಲವಾರು ವರ್ಷಗಳಿಂದ ಇಲ್ಲಿ ದುಡಿದು ನೆಮ್ಮದಿಯ ಬದುಕು ನಡೆಸುತ್ತಿದ್ದ ನಮ್ಮ ಜೀವನ‌ ನಿಜಕ್ಕೂ ಬೀದಿಪಾಲಾಗುತ್ತದೆ. ಕೂಲಿ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ಕೂಡಲೇ ಬ್ಲಾಕ್ 3 ಮತ್ತು 4 ಅರಣ್ಯ ಕ್ಷೇತ್ರ ಕೈಬಿಡುವ ಮೂಲಕ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು. ಇಲ್ಲದೆ‌ ಹೋದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಕಚೇರಿ‌‌ ಎದುರು ಸತ್ಯಾಗ್ರಹ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಚಂದ್ರಶೇಖರ ಜೋಗೇರ, ಗೂಳಪ್ಪ ಕರಿಗಾರ, ಯಲ್ಲಪ್ಪ ಪೂಜಾರ, ಶಿವು ಕಲ್ಯಾಣಿ, ಹನುಮರಡ್ಡಿ ಮದಗುಣಕಿ, ಮಹೇಶ ಡಂಬಳ, ಪರಶು ಹಾಲಪ್ಪನವರ, ಚೋಟು ಮಾರವಾಡಿ, ನೀಲಪ್ಪ ಖಾನಾಪೂರ, ಮಲ್ಲೇಶ‌ ವರವಿ, ಚನ್ನಪ್ಪ ಸ್ವಾಮಿ, ಶಿವಪ್ಪ‌ವಡ್ಡರ, ಚಂದ್ರು ಹಾಲಪ್ಪನವರ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಬೀದಿಗೆ ಬಂದ ಕಾರ್ಮಿಕರು…!

ಲಾಕ್ ಡೌನ್ ನಿಂದ ಬಡವರ ಬದುಕು ಬೀದಿಗೆ ಬಂದು ನಿಂತಿದೆ. ಸಕ್ಕರೆ ಕಾರ್ಖಾನೆಯೊಂದರ 350ಕ್ಕೂ ಹೆಚ್ಚು ಕಾರ್ಮಿಕರು ಸದ್ಯ ಇದರಿಂದಾಗಿ ಬೀದಿಗೆ ಬಂದಿದ್ದಾರೆ.

ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6041 ಕ್ಕೆ ಏರಿಕೆಯಾದಂತಾಗಿದೆ.

ನಾಪತ್ತೆಯಾಗಿದ್ದ ಸೋಂಕಿತ ವ್ಯಕ್ತಿ ಪತ್ತೆಯಾಗಿದ್ದು ಎಲ್ಲಿ ಗೊತ್ತಾ?

ಕೋಲಾರ : ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6ಕ್ಕೇರಿದೆ. ಸೋಂಕಿತ ಕೋರ್ಟ್ ಉದ್ಯೋಗಿಯ ಟ್ರಾವಲ್ ಹಿಸ್ಟರಿ ಮೂರು…