ಶಿರಹಟ್ಟಿ: ಸರ್ಕಾರ ಅವೈಜ್ಞಾನಿಕವಾಗಿ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮ ಎಂದು ಘೋಷಿಸಿದ್ದು, ಶಿರಹಟ್ಟಿ ತಾಲೂಕಿನ‌ ಬ್ಲಾಕ್ ನಂ 3 ಮತ್ತು 4 ರ ಅರಣ್ಯ ಕ್ಷೇತ್ರವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಅಹಿಂದ್ ಸಂಘ ಹಾಗೂ‌ ಕ್ರಷರ್ ಮತ್ತು‌ ಕಲ್ಲು ಗಣಿಗಾರಿಕೆ ಕಾರ್ಮಿಕ ಒಕ್ಕೂಟ ಸಂಘದ ವತಿಯಿಂದ ಬುಧವಾರ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ‌ ಮನವಿ‌ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಹಿಂದ ಸಂಘದ ಕಾರ್ಯದರ್ಶಿ ಸಂತೋಷ ಕುರಿ ಮಾತನಾಡಿ, ಈಗಾಗಲೇ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ನೋಟಿಸ್ ನೀಡಲಾಗಿದ್ದು, ಇದನ್ನು ಸ್ಥಗಿತಗೊಳಿಸುವುದರಿಂದ ಹಲವಾರು ವರ್ಷಗಳಿಂದ ಇಲ್ಲಿ ದುಡಿದು ನೆಮ್ಮದಿಯ ಬದುಕು ನಡೆಸುತ್ತಿದ್ದ ನಮ್ಮ ಜೀವನ‌ ನಿಜಕ್ಕೂ ಬೀದಿಪಾಲಾಗುತ್ತದೆ. ಕೂಲಿ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ಕೂಡಲೇ ಬ್ಲಾಕ್ 3 ಮತ್ತು 4 ಅರಣ್ಯ ಕ್ಷೇತ್ರ ಕೈಬಿಡುವ ಮೂಲಕ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು. ಇಲ್ಲದೆ‌ ಹೋದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಕಚೇರಿ‌‌ ಎದುರು ಸತ್ಯಾಗ್ರಹ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಚಂದ್ರಶೇಖರ ಜೋಗೇರ, ಗೂಳಪ್ಪ ಕರಿಗಾರ, ಯಲ್ಲಪ್ಪ ಪೂಜಾರ, ಶಿವು ಕಲ್ಯಾಣಿ, ಹನುಮರಡ್ಡಿ ಮದಗುಣಕಿ, ಮಹೇಶ ಡಂಬಳ, ಪರಶು ಹಾಲಪ್ಪನವರ, ಚೋಟು ಮಾರವಾಡಿ, ನೀಲಪ್ಪ ಖಾನಾಪೂರ, ಮಲ್ಲೇಶ‌ ವರವಿ, ಚನ್ನಪ್ಪ ಸ್ವಾಮಿ, ಶಿವಪ್ಪ‌ವಡ್ಡರ, ಚಂದ್ರು ಹಾಲಪ್ಪನವರ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಬಿಂಕದಕಟ್ಟಿ ಮೃಗಾಲಯದಲ್ಲಿ ಧರ್ಮಾರ್ಜುನರ ಘರ್ಜನೆ

ಬಿಂಕದಕಟ್ಟಿ ಮೃಗಾಲಯಕ್ಕೆ ಗುರುವಾರ ತಡರಾತ್ರಿ 11 ವರ್ಷದ ಧರ್ಮ ಮತ್ತು ಅರ್ಜುನ ಹೆಸರಿನ ಗಂಡು ಸಿಂಹಗಳು ಗುರುವಾರ ತಡರಾತ್ರಿ ಆಗಮಿಸಿವೆ.

ಗದಗ ಜಿಲ್ಲೆಯಲ್ಲಿ ಸೋಂಕಿನ ಸರಣಿ ಸ್ಪೋಟ!: ಇಂದು 40 ಪಾಸಿಟಿವ್..!

ದಿನಕ್ಕೆ ಗದಗ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ನಗರಕ್ಕೆ ಸೀಮಿತವಾಗಿದ್ದ ಸೋಂಕು ಗ್ರಾಮೀಣ ಭಾಗಕ್ಕೂ ವ್ಯಾಪಿಸಿದ್ದು ತೀವ್ರ ಆತಂಕ ಸೃಷ್ಟಿಸಿದೆ.

ಕೋರಿಯಾದಿಂದ ಕೋಲಾರಕ್ಕೂ ಬಂದಿವೆ ಸೋಂಕು ಟೆಸ್ಟ್ ಕಿಟ್ ಗಳು

ಕೊರೋನಾ ಸೋಂಕು ತುರ್ತಾಗಿ ಪತ್ತೆ ಹಚ್ಚಲು ಕೋರಿಯಾದಿಂದ ಕೋಲಾರ ಜಿಲ್ಲೆಯ ಆರೋಗ್ಯ ಇಲಾಖೆಗೆ ರ್ಯಾಪಿಡ್ ಆಂಟಿ ಬಾಡಿ ಟೆಸ್ಟಿಂಗ್ ಕಿಟ್ ಗಳು ಬಂದಿವೆ. ಈ ಮೂಲಕ ಇಪ್ಪತ್ತು ನಿಮಿಷದೊಳಗಾಗಿ ಕೊರೋನಾ ಸೇರಿ ಯಾವುದೇ ಸೋಂಕಿದ್ದರೂ ಪತ್ತೆ ಹಚ್ಚಬಹುದಾಗಿದೆ. ಇದು ದೇಶದಲ್ಲಿ ಮೊದಲ ಪ್ರಯತ್ನ ಎಂದು ಹೇಳಲಾಗುತ್ತಿದೆ.

ಎಸಿಬಿ ಬಲೆಗೆ ಗದಗ ಕಾರ್ಮಿಕ ನಿರೀಕ್ಷಕಿ

ಕಾರ್ಮಿಕ ಇಲಾಖೆ ಮೇಲೆ ಬುಧವಾರ ಎಸಿಬಿ ದಾಳಿ ನಡೆಸಿದ್ದು, ಕಾರ್ಮಿಕ ಇಲಾಖೆ ನಿರೀಕ್ಷಕಿ ಎಸಿಬಿ ಬಲೆಗೆ ಬಿದ್ದಿದ್ದಾರೆ.