ಗದಗ: ಟಿಪ್ಪು ಜಯಂತಿ ಆಚರಿಸುವ ಮೂಲಕ ಅವರ ಸಾಧನೆ, ರಾಜಕೀಯ ನಿಲುವುಗಳು, ದೇಶಪ್ರೇಮವನ್ನು ಇಂದಿನ ಯುವ ಸಮುದಾಯಕ್ಕೆ ಸಾರಬೇಕು ಎಂದು ದಲಿತ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಹೋರಾಟ ಸಮಿತಿಯ ಮುಖಂಡ ಶರೀಫ್ ಬಿಳೆಯಲಿ ಹೇಳಿದರು.

ನಾಡ ಪ್ರೇಮಿ ಟಿಪ್ಪು ಸುಲ್ತಾನ್ ಅವರ 270ನೇ ಟಿಪ್ಪು ಜಯಂತಿ ಆಚರಣೆಯ ಪ್ರಯುಕ್ತ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಜಯಂತಿಗೆ ಜಿಲ್ಲಾಡಳಿತ ಹಾಗೂ ಪೋಲಿಸ್ ಇಲಾಖೆ ಅನುಮತಿ ನೀಡಲು ಮಲತಾಯಿ ಧೊರಣೆ ತೋರುತ್ತಿದೆ. ಸರ್ಕಾರ ಈ ಆಚರಣೆ ರದ್ದು ಮಾಡಿರುವುದರಿಂದ ಅನುಮತಿ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಕೊರೋನ ನೆಪ ಹೇಳಿ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕಾರ್ಯಕ್ರಮ ಸರ್ಕಾರದ ಆಯೋಜನೆ ಮಾಡಿರುವುದಲ್ಲ. ನಮ್ಮೊಂದಿಗೆ 35ಕ್ಕೂ ಹೆಚ್ಚಿನ ವಿವಿಧ ಸಂಘಟನೆಗಳು ಹಾಗು ಪ್ರಗತಿಪರ ಚಿಂತಕರು ಭಾಗವಹಿಸಲಿದ್ದಾರೆ. ಜಯಂತಿಯ ಪ್ರಯುಕ್ತ ಎಲ್ಲ ಧರ್ಮ ಮುಖಂಡರು ಟಿಪ್ಪು ಸುಲ್ತಾನ ಅವರ ಸಿದ್ಧಾಂತ, ಅವರ ಸಾಧನೆ ಹಾಗೂ ಅವರ ದೇಶಪ್ರೇಮದ ಬಗ್ಗೆ ಅವರು ದೃಷ್ಠಿಕೋನದಲ್ಲಿ ಅವರು ವಿಚಾರ ಸಂಕಿರ್ಣ ನಡೆಸಲಾಗುವುದು. ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಅನುಮತಿ ನೀಡಲಿ ಬಿಡಲಿ ನಾವು ಟಿಪ್ಪು ಜಯಂತಿಗೆ ಆಚರಣೆಗೆ ನಮ್ಮ ಸಂಘಟನೆಗಳು ಸಿದ್ಧ ಎಂದು ಹೇಳಿದರು.
ಸಂಜೆ ನಗರಸಭೆಯಲ್ಲಿನ ಮಹತ್ಮಾಗಾಂಧಿ ಪ್ರತಿಮೆಯಿಂದ ಆರಂಭವಾಗಿ ನಗದರ ಹತ್ತಿಕಾಳ್ ಕೂಟದಲ್ಲಿ ಜಯಂತಿ ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ ಕೊವಿಡ್ ಮಾರ್ಗಸೂಚಿಗಳನ್ನು ಪಾಲಿಸಲಾಗುವುದು ಎಂದರು.

ಇಶಾಪ್ ನಮಾಜಿ, ಇಮ್ತಿಯಾಜ್ ಮಾನ್ವಿ, ಯಲ್ಲಪ್ಪ ರಾಮಗೇರಿ, ವಿಜಯ್ ಕಲ್ಮನಿ, ಮುತ್ತು ಬಿಳೆಯಲಿ, ಶಿವಾನಂದ ತಮ್ಮನ್ನವರ ಸೆರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಪೊಲೀಸ್ ಠಾಣೆಯೇ ದೇವಸ್ಥಾನವಿದ್ದಂತೆ : ಪೂಜೆ ಸಲ್ಲಿಸಿ ಗೌರವ

ಪೊಲೀಸರೆ ದೇವರು, ಪೊಲೀಸ್ ಠಾಣೆಯೇ ದೇವಸ್ಥಾನ ಎನ್ನುವ ಕಲ್ಪನೆಯೊಂದಿದೆ ಪೊಲೀಸ್ ಠಾಣೆಗೆ ಪೂಜೆ ಸಲ್ಲಿಸಿ ಈ ಮೂಲಕ ಕೊರೋನಾ ವಾರಿಯರ್ಸ್ ಗೆ ಗೌರವ ಸಲ್ಲಿಸಲಾಯಿತು.

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಾವಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಸುಮಾ ಜೋಶಿ (35) ಮೃತಪಟ್ಟ ಮಹಿಳೆ ಯಾಗಿದ್ದಾಳೆ.

ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕಾರ: ಖಂಡನೆ

ಉತ್ತರಪ್ರಭ ಸುದ್ದಿಶಿರಹಟ್ಟಿ: ಜನೆವರಿ 26 ರಂದು ಗಣರಾಜ್ಯೋತ್ಸವ ಪರೇಡ್ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು…

ಎಷ್ಟು ವಿರೋಧಿಸುತ್ತಾರೋ ಅಷ್ಟು ಗಟ್ಟಿಯಾಗುತ್ತೇನೆ

ರಮೇಶ್ ಜಾರಕಿಹೊಳಿ ಅವರನ್ನು ನಾವೇ ಮಂತ್ರಿ ಮಾಡಿದ್ದೇವೆ. ಹೈಕಮಾಂಡ್ ಗೆ ನಾವೇ ಶಿಫಾರಸು ಮಾಡಿದ್ದೇವೆ. ನಾನು ನನ್ನಿಂದ ಅಂದವರೆಲ್ಲ ಹೆಸರು ಇಲ್ಲದಂಗೆ ಹೋಗಿದ್ದಾರೆ. ಅವರು ಎಷ್ಟು ವಿರೋಧಿಸುತ್ತಾರೆಯೋ ನಾನು ಅಷ್ಟು ಗಟ್ಟಿಯಾಗುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.