ಗದಗ: ಟಿಪ್ಪು ಜಯಂತಿ ಆಚರಿಸುವ ಮೂಲಕ ಅವರ ಸಾಧನೆ, ರಾಜಕೀಯ ನಿಲುವುಗಳು, ದೇಶಪ್ರೇಮವನ್ನು ಇಂದಿನ ಯುವ ಸಮುದಾಯಕ್ಕೆ ಸಾರಬೇಕು ಎಂದು ದಲಿತ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಹೋರಾಟ ಸಮಿತಿಯ ಮುಖಂಡ ಶರೀಫ್ ಬಿಳೆಯಲಿ ಹೇಳಿದರು.

ನಾಡ ಪ್ರೇಮಿ ಟಿಪ್ಪು ಸುಲ್ತಾನ್ ಅವರ 270ನೇ ಟಿಪ್ಪು ಜಯಂತಿ ಆಚರಣೆಯ ಪ್ರಯುಕ್ತ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಜಯಂತಿಗೆ ಜಿಲ್ಲಾಡಳಿತ ಹಾಗೂ ಪೋಲಿಸ್ ಇಲಾಖೆ ಅನುಮತಿ ನೀಡಲು ಮಲತಾಯಿ ಧೊರಣೆ ತೋರುತ್ತಿದೆ. ಸರ್ಕಾರ ಈ ಆಚರಣೆ ರದ್ದು ಮಾಡಿರುವುದರಿಂದ ಅನುಮತಿ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಕೊರೋನ ನೆಪ ಹೇಳಿ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕಾರ್ಯಕ್ರಮ ಸರ್ಕಾರದ ಆಯೋಜನೆ ಮಾಡಿರುವುದಲ್ಲ. ನಮ್ಮೊಂದಿಗೆ 35ಕ್ಕೂ ಹೆಚ್ಚಿನ ವಿವಿಧ ಸಂಘಟನೆಗಳು ಹಾಗು ಪ್ರಗತಿಪರ ಚಿಂತಕರು ಭಾಗವಹಿಸಲಿದ್ದಾರೆ. ಜಯಂತಿಯ ಪ್ರಯುಕ್ತ ಎಲ್ಲ ಧರ್ಮ ಮುಖಂಡರು ಟಿಪ್ಪು ಸುಲ್ತಾನ ಅವರ ಸಿದ್ಧಾಂತ, ಅವರ ಸಾಧನೆ ಹಾಗೂ ಅವರ ದೇಶಪ್ರೇಮದ ಬಗ್ಗೆ ಅವರು ದೃಷ್ಠಿಕೋನದಲ್ಲಿ ಅವರು ವಿಚಾರ ಸಂಕಿರ್ಣ ನಡೆಸಲಾಗುವುದು. ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಅನುಮತಿ ನೀಡಲಿ ಬಿಡಲಿ ನಾವು ಟಿಪ್ಪು ಜಯಂತಿಗೆ ಆಚರಣೆಗೆ ನಮ್ಮ ಸಂಘಟನೆಗಳು ಸಿದ್ಧ ಎಂದು ಹೇಳಿದರು.
ಸಂಜೆ ನಗರಸಭೆಯಲ್ಲಿನ ಮಹತ್ಮಾಗಾಂಧಿ ಪ್ರತಿಮೆಯಿಂದ ಆರಂಭವಾಗಿ ನಗದರ ಹತ್ತಿಕಾಳ್ ಕೂಟದಲ್ಲಿ ಜಯಂತಿ ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ ಕೊವಿಡ್ ಮಾರ್ಗಸೂಚಿಗಳನ್ನು ಪಾಲಿಸಲಾಗುವುದು ಎಂದರು.

ಇಶಾಪ್ ನಮಾಜಿ, ಇಮ್ತಿಯಾಜ್ ಮಾನ್ವಿ, ಯಲ್ಲಪ್ಪ ರಾಮಗೇರಿ, ವಿಜಯ್ ಕಲ್ಮನಿ, ಮುತ್ತು ಬಿಳೆಯಲಿ, ಶಿವಾನಂದ ತಮ್ಮನ್ನವರ ಸೆರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಹಾನಗಲ್ ಬೈ ಎಲಕ್ಷನ್ ನಲ್ಲಿ ಕಾಂಗ್ರಸ್ ಗೆ ಜಯ

ಹಾನಗಲ್: ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 7598 ಮತಗಳ ಅಂತರದಿಂದ ಗೆಲುವು.ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ…

ಆಸ್ತಿ ಕಲಹ: ಪತ್ನಿ ಎದುರೆ ಪತಿಯ ಹತ್ಯೆ!

ಆಸ್ತಿ ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಮೇ. 15ರಂದು ಈ ಕೊಲೆ ನಡೆದಿದ್ದು, ಕೊಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಉಮೇಶ್ ಬಾಳಗಿ (39) ಕೊಲೆಯಾದ ವ್ಯಕ್ತಿ. ಚೆನ್ನಬಸಪ್ಪ ಬಾಳಗಿ ಮತ್ತು ಬಸಪ್ಪ ಬಾಳಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅಂತರಾಜ್ಯ ಪ್ರಯಾಣಿಕರಿಗೆ ಸರ್ಕಾರದ ಮಾರ್ಗಸೂಚಿ

ಬೆಂಗಳೂರು: ಅಂತರಾಜ್ಯದಿಂದ ಬರುವ ಪ್ರಯಾಣಿಕರಿಗೆ ಸರ್ಕಾರ ಕೆಲವು ಸೂಚನೆಗಳನ್ನು ನೀಡಿದೆ. ಸರ್ಕಾರ ನೀಡಿದ ಸೂಚನೆಗಳು ಈ…

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6245…