ಲಕ್ಷ್ಮೇಶ್ವರ : ದೀಪಾವಳಿ ಹಬ್ಬಕ್ಕೆಂದು ಸಂಬಂಧಿಕರ ಊರಿಗೆ ಬಂದಿದ್ದ ಯುವಕ ನೀರುಪಾಲಾಗಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಗಸ್ತ್ಯತೀರ್ಥ ಬಾವಿಯಲ್ಲಿ ಯುವಕನೋರ್ವ ನೀರು ಪಾಲಾಗಿದ್ದಾನೆ ಎಂಬ ಶಂಕೆ ಇದೆ. ನಾಲ್ಕು ಜನರು ಈಜಲು ಬಂದಿದ್ದು, ಇದರಲ್ಲಿ ಓರ್ವ ನೀರು ಪಾಲಾಗಿದ್ದಾನೆ ಎನ್ನಲಾಗಿದ್ದು, ಹರ್ಷವರ್ಧನ ಎನ್ನುವ ಯುವಕ ನೀರು ಪಾಲಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. 

ಹರ್ಷವರ್ಧನ ಗೆಳೆಯರ ಜೊತೆಯಲ್ಲಿ ಈಜಲು ಬಂದಿದ್ದು, ಈ ವೇಳೆ ಬಾವಿಯಲ್ಲಿ ಮುಳಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಇದನ್ನು ಕಂಡು ಜೊತೆಗೆ ಬಂದಿದ್ದ ಗೆಳೆಯರು ಗಾಬರಿಯಿಂದ ಓಡಿದರು. ಹುಡುಗುರು ಓಡುವುದನ್ನು ಕಂಡ ಸಾರ್ವಜನಿಕರು ಬಾವಿಯ ಬಳಿಗೆ ಬಂದು ನೋಡಿದ್ದಾರೆ. ದಡದ ಮೇಲೆ ಬಟ್ಟೆ ಮತ್ತು ಚಪ್ಪಲಿಗಳು ಕಂಡ ಸಾರ್ವಜನಿಕರು ಯುವಕ ನೀರಿನಲ್ಲಿ ಮುಳಗಿರುವ ಸಂಶಯ ವ್ಯಕ್ತಪಡಿಸಿದ್ದಾರೆ. ಅಗಸ್ತ್ಯತೀರ್ಥ ಬಾವಿಗೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗಾಯನ ನಿಲ್ಲಿಸಿದ ಎಸ್ ಪಿಗೆ ಗಣ್ಯರಿಂದ ಸಂತಾಪ!

ಬೆಂಗಳೂರು : ಉಸಿರು ಚೆಲ್ಲಿದ ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಸಿಎಂ ಬಿ.ಎಸ್.…

ಮೇವುಂಡಿ: ಈಜಲು ಹೋದ ಬಾಲಕ ನೀರು ಪಾಲು

ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಬಾಲಕ ಚನ್ನವೀರಗೌಡ ಮೃತ ಬಾಲಕ. ಗೆಳೆಯರೊಂದಿಗೆ ಬುಧವಾರ ಈಜಲ ಹೋದಾಗ ಇಲ್ಲಿನ ಹಿರೇಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಕಳ್ಳತನ ಪ್ರಕರಣ ಇಬ್ಬರ ಬಂಧನ.

ಜಿಲ್ಲೆಯಲ್ಲಿ ಈಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 5.18 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ

ರೋಣ ತಾಲೂಕು ಗ್ರಾಪಂ ಅಧ್ಯಕ್ಷ- ಉಪಾಧ್ಯಕ್ಷ ಮೀಸಲಾತಿ ಪ್ರಕಟ

ರೋಣ: ತಾಲೂಕಿನ 24 ಗ್ರಾಮ ಪಂಚಾಯತಿಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಆಯ್ಕೆ ಪ್ರಕ್ರಿಯೆ ವೀರಭದ್ರೇಶ್ವರ ಕಲ್ಯಾಣ…