ರೋಣ: ಇದೇ 26 ಮತ್ತು 27 ರಂದು ಜನಪರ, ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಇಂದು ರೈತ ಸಂಘ ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಿತು.
ರೋಣ ತಾಲೂಕಿನ ಸವಡಿ ಗ್ರಾಮದಲ್ಲಿ ರೈತರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯ ಖಂಡಿಸಿ ಹಮ್ಮಿಕೊಂಡ ಪ್ರತಿಭಟನೆ ಹಿನ್ನೆಲೆ ರೈತರಿಗೆ ಜಾಗೃತಿ ಮೂಡಿಸಲಾಯಿತು. ಸವಡಿ ಗ್ರಾಮದ ಸಂಗಮೇಶ್ವರ ದೇವಸ್ಥಾನದಿಂದ ಜಾಗೃತಿ ಜಾಥ ಹಮ್ಮಿಕೊಂಡು ಗ್ರಾಮದಲ್ಲಿ ಮನನೆಗೆ ಕರಪತ್ರ ವಿತರಿಸಿ ಜಾಗೃತಿ ಮೂಡಿಸಲಾಯಿತು.
ಎಪಿಎಂಸಿ, ಭೂಸುಧಾರಣೆ, ವಿದ್ಯುತ್ ಕಾಯ್ದೆ ಸೇರಿದಂತೆ ಹಲವು ಕಾಯ್ದೆ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದ್ದು ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ನ.26 ಮತ್ತು 27 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಹೋರಾಟಕ್ಕೆ ಬೆಂಬಲ ಸೂಚಿಸಲು ಮನವಿ ಮಾಡಿಕೊಳ್ಳಲಾಯಿತು. ಈ ವೇಳೆ ಸರ್ಕಾರದ ರೈತ ವಿರೋಧಿ ನಡೆ ಬಗ್ಗೆ ರೈತಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ನವ್ಹಂಬರ್ 26, 27 ರಂದು ನಡೆಯಲಿರು ಪ್ರತಿಭಟನೆಗೆ ಬೆಂಬಲ ಸೂಚಿಸಲು ಮನವಿ ಮಾಡಿದರು.
ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಮುತ್ತನಗೌಡ ಚೇಗರಡ್ಡಿ, ಮೇಘರಾಜ್ ಭಾವಿ, ವೀರೇಶ ಚಿತ್ರಗಾರ, ಉಮೇಶ್ ಸಾಲಿಮಠ, ಕೊಟ್ರೇಶ್, ಬಸಣ್ಣ ಗೆದಿಗೇರಿ ಸೇರಿ ಇತರರು ಇದ್ದರು.