ಲಕ್ಷ್ಮೇಶ್ವರ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಮನೆ-ಮನೆಗೆ ತಲುಪಿಸುವ ಕಾರ್ಯ ಬಿಜೆಪಿ ಕಾರ್ಯಕರ್ತರು ಮಾಡಬೇಕು ಎಂದು ಧಾರವಾಡ ವಿಭಾಗೀಯ ಬಿಜೆಪಿ ಸಂಘಟನಾ ಪ್ರಭಾರಿ ಲಿಂಗರಾಜ್ ಪಾಟೀಲ್ ಹೇಳಿದರು.

ಅವರು ಪಟ್ಟಣದ ಬಿಸಿಎನ್ ಪಾಲಿಟೆಕ್ನಿಕ್ ನಲ್ಲಿ ನಡೆದ ಬಿಜೆಪಿ ಶಿರಹಟ್ಟಿ ಮಂಡಲದ 2 ದಿನದ ಪ್ರಶಿಕ್ಷಣ ವರ್ಗದಲ್ಲಿ ಮಾತನಾಡಿ ಪ್ರತಿ ಹಳ್ಳಿ, ಶಹರದಲ್ಲಿ ಭೂತ್ ಮಟ್ಟದಿಂದ ನಮ್ಮ ಪಕ್ಷ ಸಂಘಟನೆಯಾಗಬೇಕು ಎಂದರು.

ಎರಡು ದಿನಗಳ ಪ್ರಶಿಕ್ಷಣ ವರ್ಗದಲ್ಲಿ ಹತ್ತು ವಿಷಯಗಳ ಕುರಿತು ಪದಾಧಿಕಾರಿಗಳಿಗೆ ವಿವಿಧ ತರಬೇತಿ ನೀಡಿ, ಪಕ್ಷದ ಕಾರ್ಯಕ್ಕೆ ಸಜ್ಜುಗೊಳಿಸಲಾಯಿತು.

ಶಿರಹಟ್ಟಿ ಮಂಡಲದ ಅಧ್ಯಕ್ಷ ಫಕೀರೇಶ ರಟ್ಟಿಹಳ್ಳಿ, ವಿಭಾಗೀಯ ಪ್ರಭಾರಿ ನಾರಾಯಣ್ ಜರ್ತಾರ್ಕರ್, ಜಿಲ್ಲಾಧ್ಯಕ್ಷ ಮೋಹನ್ ಮಾಳಶೆಟ್ಟಿ, ಪ್ರಶಿಕ್ಷಣ ವರ್ಗದ ಸಂಚಾಲಕ ಶ್ರೀಪತಿ ಉಡುಪಿ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಗಂಗಾಧರ ಮೆಣಸಿನಕಾಯಿ ಪ್ರವೀಣ್ ಪಾಟೀಲ್, ನಗರ ಘಟಕದ ಅಧ್ಯಕ್ಷ ದುಂಡೇಶ ಕೊಟಗಿ, ಪರುಶುರಾಮ್ ಇಮ್ಮಡಿ, ನಾಗರಾಜ ಕುಲಕರ್ಣಿ, ವಿಜಯ ಕುಂಬಾರ, ಪ್ರಕಾಶ ಮಾದ್ನೂರ, ಅರುಣ್ ಪಾಟೀಲ್, ಸಂತೋಷ್ ಜಾವೂರ, ಉಳುವೇಶ ಬಸವರಾಜ ಚಕ್ರಸಾಲಿ, ಹಾಲಪ್ಪ ಸುರಣಗಿ, ಜಿಪಂ ಹಾಗೂ ತಾಪಂ ಸದಸ್ಯರು, ಪುರಸಭೆ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಆಸ್ಪತ್ರೆಯಲ್ಲಿಯೇ ಈ ಪರಿಸ್ಥಿತಿ ಇದ್ರೆ ರೋಗಿಗಳ ಪಾಡು ಇನ್ನೆಂಗೆ ಶಿವಾ!

ಸಾಮಾನ್ಯವಾಗಿ ಆಸ್ಪತ್ರೆಗೆ ಬರುವವರು ಆಸ್ಪತ್ರೆಯನ್ನೆ ಸಂಜೀವಿನಿ ಎಂದು ನಂಬಿರುತ್ತಾರೆ. ಆದರೆ, ಗದಗ ನಗರದಲ್ಲಿರುವ ಹೆರಿಗೆ ಆಸ್ಪತ್ರೆ ಇದಕ್ಕೆ ತದ್ವಿರುದ್ಧ ಎಂದು ಜನ ಮಾತಾಡಿಕೊಳ್ಳುವಂತಾಗಿದೆ. ಇನ್ನು ರೋಗಿಗಳು ಹಾಗು ರೋಗಿಗಳ ಸಂಬಂಧಿಕರು ಆಸ್ಪತ್ರೆಯಲ್ಲಿ ದಿನಕಳೆಯುವುದೆಂದರೆ ಹರಸಾಹಸವೇ ಸರಿ.

ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೆ ಸಿಗಲಿದೆ ಜನನ-ಮರಣ ಪ್ರಮಾಣ ಪತ್ರ

ರಾಷ್ಟ್ರೀಯ ಜನನ-ಮರಣ ಕಾಯ್ದೆ 1967ರ ಅಧ್ಯಾಯ 5ರ ಪ್ರಕರಣ 27 ರ ಅಡಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಜನನ ಮತ್ತು ಮರಣ ಪತ್ರಗಳ ವಿತರಣಾಧಿಕಾರಿ ಎಂದು ರಾಜ್ಯಪಾಲರ ಆದೇಶದ ಪ್ರಕಾರ ನೇಮಕ ಮಾಡಿ, ಸರ್ಕಾರದ ಅಧೀನ ಕಾರ್ಯದರ್ಶಿ (ಜಿಪಂ) (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಆದೇಶ ಹೊರಡಿಸಿದ್ದಾರೆ.

ಸಂತ ಶ್ರೀ ಸೇವಾಲಾಲ್ ಜಯಂತಿಯನ್ನು ಗಜೇಂದ್ರಗಡ ತಾಲೂಕು ಅಮರಗಟ್ಟಿ ತಾಂಡಾದಲ್ಲಿ ಆಚರಿಸಲಾಯಿತು

ಗದಗ: ಸೇವಾಲಾಲ್ ಮಹಾರಾಜರ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ ಹಾಗೂ ತೇರನ್ನು ಎಳೆಯುವ ಮುಖಾಂತರ ವಿಶೇಷ ಸೇವಾಲಾಲ…