ಲಕ್ಷ್ಮೇಶ್ವರ: ಅತಿಥಿ ಸತ್ಕಾರಕ್ಕಾಗಿ ಪಟ್ಟಣದಲ್ಲಿ ನಿರ್ಮಿಸಿದ್ದ ಪ್ರವಾಸಿ ಮಂದಿರದ ಸಂರಕ್ಷಣೆಗೆ ನಿರ್ಲಕ್ಷ್ಯದಿಂದ ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ವಿಶ್ರಾಂತಿಗಾಗಿ ಬಂದೀರಿ ಜೊಕೆ ಪ್ರವಾಸಿಗರೆ ಎನ್ನುವಂತಿದೆ ಗದಗ ಜಿಲ್ಲೆ ಲಕ್ಷ್ಮೆಶ್ವರ ಪಟ್ಟಣದಲ್ಲಿ ಪ್ರವಾಸಿ ಮಂದಿರ.

ಪಟ್ಟಣದಲ್ಲಿ ಪ್ರವಾಸಿ ಮಂದಿರ ನಿರ್ಮಿಸಿ ಬಹಳಷ್ಟು ವರ್ಷಗಳೇ ಗತಿಸಿವೆ. ಈಗಲೂ ಮಂದಿರದ ಕಟ್ಟಡ ಗಟ್ಟಿಮುಟ್ಟಾಗಿದೆ. ಆದರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಮ್ಮ ಹಾಗೂ ಶಾಸಕರು ಪಟ್ಟಣದ ಪ್ರವಾಸಿ ಮಂದಿರವನ್ನು ಸಂರಕ್ಷಣೆ ಮಾಡಿಕೊಳ್ಳುವಲ್ಲಿ ವಿಫಲವಾಗಿದ್ದಾರೆ.

ಪ್ರವಾಸಿ ಮಂದಿರದ ಕಟ್ಟಡ ಸುಣ್ಣ ಬಣ್ಣ ಕಾಣದೆ ಮೂಲ ಸೌಲಭ್ಯಗಳಿಲ್ಲದೆ ಬಿಕೋ ಎನ್ನುತ್ತಿದೆ. ಈ ಕಟ್ಟಡದಲ್ಲಿ ಹೋದರೆ ಸಾಕು ಭೂತದ ಭಂಗಲೆ ಹಾಗೆ ಭಾಸವಾಗುತ್ತದೆ. ಸುಸಜ್ಜಿತ ಪ್ರವಾಸಿ ಮಂದಿರದ ಕಟ್ಟಡ ಕಾಲ ಕಾಲಕ್ಕೆ ದುರಸ್ತಿ ಕಾಣದೆ ಬಿಕೋ ಎನ್ನುತ್ತಿದೇ. ಆದರೆ ಮತ್ತೆ ಅದೆ ಖಾಲಿ ಜಾಗದಲ್ಲಿ ಸಸಿಗಳನ್ನು ನೆಟ್ಟು ಮರಗಳನ್ನು ಬೆಳೆಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರಿಂದ ಇಡೀ ಪ್ರವಾಸಿ ಮಂದಿರದ ಆವರಣ ಹಸಿರು ಕಾಣದೆ ಬಿಕೋ ಎನ್ನುತ್ತಿದೆ.

ಅಕಾರಿಗಳು ಗಮನ ಹರಿಸಬೇಕು

ಸರಿಯಾದ ನಿರ್ವಹಣೆಯಿಲ್ಲದೇ ಅತಿಥಿಗಳು ಪ್ರವಾಸಿ ಮಂದಿರಕ್ಕೆ ಬರಲು ಹಿಂದೆಟು ಹಾಕುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಗಮನ ಹರಿಸಬೇಕು. ಜೊತೆಗೆ ಜನಪ್ರತಿನಿಧಿಗಳು ಈ ಬಗ್ಗೆ ಕಾಳಜಿ ತೋರಬೇಕಿದೆ ಎಂದು ಮಹೇಶ್ ಹೊಗೆಸೊಪ್ಪಿನ್, ಮಂಜುನಾಥ ಮಾಗಡಿ, ನಾಗರಾಜ ಚಿಂಚಲಿ ಆಗ್ರಹಿಸಿದ್ದಾರೆ.

ಸೌಲಭ್ಯ ವಂಚಿತ ಮಂದಿರ
ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಅತಿಥಿಗಳ ವಿಶ್ರಾಂತಿಗೆ ಭಂಗ ತರುವಂತಿರುವ ಅಸ್ವಚ್ಛತೆ, ಸೊಳ್ಳೆಗಳ ಕಾಟ, ಸಾಕಷ್ಟು ಪಿಠೋಪಕರಣಗಳ ಕೊರತೆ, ಅಡಿಗೆ ತಯಾರಿಸುವ ಕೊಣೆ ಇಲ್ಲ, ಮಳೆಗಾಲದಲ್ಲಿ ಮಳೆ ನೀರಿನಿಂದ ಸೋರುತ್ತಿದೆ, ಇನ್ನೂ ಹಲವಾರು ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿವೆ. ಅವ್ಯವಸ್ಥೆಗಳ ಆಗರವಾಗಿರುವ ಈ ಪ್ರವಾಸಿ ಮಂದಿರಕ್ಕೆ ಪ್ರವಾಸಿಗರು ಬಂದರೆ ಪರದಾಟ ನಿಶ್ಚಿತ ಎನ್ನುವಂತಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ನಿಯಮ ಉಲ್ಲಂಘಿಸಿ ಬರ್ತ್ ಡೇ ಪಾರ್ಟಿ: ಶ್ರೀರಾಮುಲು ಆಪ್ತನಿಗೆ ಬಿಜೆಪಿ ಗೇಟ್ಪಾಸ್

ಕೋವಿಡ್ ನಿಯಮ ಉಲ್ಲಂಘಿಸಿ ಭರ್ಜರಿ ಪಾರ್ಟಿ ಆಚರಿಸಿಕೊಂಡಿದ್ದ ಶ್ರೀರಾಮುಲು ಆಪ್ತ ಎಚ್.ಎಸ್. ಶಿವನಗೌಡರನ್ನು ಜಿಲ್ಲಾ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಪೊಲೀಸರು ಪಾರ್ಟಿ ಕುರಿತಂತೆ ಕೋರ್ಟಿನಲ್ಲಿ ಸ್ವಯಂ ದೂರು ದಾಖಲಿಸಿದ್ದು ಇಂದು ಸೋಮವಾರ ಶಿವನಗೌಡರು ಕೋರ್ಟಿಗೆ ಹಾಜರಾಗಬಹುದು ಎನ್ನಲಾಗಿದೆ.

ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರ ಶಾಸಕ ಎಚ್ಕೆ ಪಾಟೀಲ್ ಪತ್ರ

ವೈದ್ಯಕೀಯ ಉಪಕರಣಗಳ ಖರೀದಿ ಸಮಯದಲ್ಲಿ ನಡೆದಿರಬಹುದಾದಂತಹ ಅವ್ಯವಹಾರದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಶಾಸಕ ಎಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ.

ಪತ್ನಿ ಕೊಂದ ಸೈಕೋ ಪತಿ..!!

ಬೆಂಗಳೂರು: ಪತ್ನಿಯನ್ನು ಕೊಂದು ಎರಡು ದಿನಗಳ ಕಾಲ ಹೆಣವನ್ನು ಮನೆಯಲ್ಲಿಯೇ ಇಟ್ಟುಕೊಂಡು, ಆ ನಂತರ ಪತಿ…

ಒತ್ತುವರಿ ತೆರವು ಜಿಲ್ಲಾಧಿಕಾರಿ ಗಡುವು

ನಗರದಲ್ಲಿ ರಸ್ತೆಗಳು, ಚರಂಡಿ ಒತ್ತುವರಿ ಆಗುವುದನ್ನು ತಡೆಯಬೇಕು. ಒತ್ತುವರಿ ಮಾಡಿಕೊಂಡಿರುವವರು ಎಂತಹ ಪ್ರಭಾವಿಗಳೇ ಆದರೂ ತೆರವುಗೊಳಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೂಚಿಸಿದರು.