ಲಕ್ಷ್ಮೇಶ್ವರ: ಅತಿಥಿ ಸತ್ಕಾರಕ್ಕಾಗಿ ಪಟ್ಟಣದಲ್ಲಿ ನಿರ್ಮಿಸಿದ್ದ ಪ್ರವಾಸಿ ಮಂದಿರದ ಸಂರಕ್ಷಣೆಗೆ ನಿರ್ಲಕ್ಷ್ಯದಿಂದ ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ವಿಶ್ರಾಂತಿಗಾಗಿ ಬಂದೀರಿ ಜೊಕೆ ಪ್ರವಾಸಿಗರೆ ಎನ್ನುವಂತಿದೆ ಗದಗ ಜಿಲ್ಲೆ ಲಕ್ಷ್ಮೆಶ್ವರ ಪಟ್ಟಣದಲ್ಲಿ ಪ್ರವಾಸಿ ಮಂದಿರ.

ಪಟ್ಟಣದಲ್ಲಿ ಪ್ರವಾಸಿ ಮಂದಿರ ನಿರ್ಮಿಸಿ ಬಹಳಷ್ಟು ವರ್ಷಗಳೇ ಗತಿಸಿವೆ. ಈಗಲೂ ಮಂದಿರದ ಕಟ್ಟಡ ಗಟ್ಟಿಮುಟ್ಟಾಗಿದೆ. ಆದರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಮ್ಮ ಹಾಗೂ ಶಾಸಕರು ಪಟ್ಟಣದ ಪ್ರವಾಸಿ ಮಂದಿರವನ್ನು ಸಂರಕ್ಷಣೆ ಮಾಡಿಕೊಳ್ಳುವಲ್ಲಿ ವಿಫಲವಾಗಿದ್ದಾರೆ.

ಪ್ರವಾಸಿ ಮಂದಿರದ ಕಟ್ಟಡ ಸುಣ್ಣ ಬಣ್ಣ ಕಾಣದೆ ಮೂಲ ಸೌಲಭ್ಯಗಳಿಲ್ಲದೆ ಬಿಕೋ ಎನ್ನುತ್ತಿದೆ. ಈ ಕಟ್ಟಡದಲ್ಲಿ ಹೋದರೆ ಸಾಕು ಭೂತದ ಭಂಗಲೆ ಹಾಗೆ ಭಾಸವಾಗುತ್ತದೆ. ಸುಸಜ್ಜಿತ ಪ್ರವಾಸಿ ಮಂದಿರದ ಕಟ್ಟಡ ಕಾಲ ಕಾಲಕ್ಕೆ ದುರಸ್ತಿ ಕಾಣದೆ ಬಿಕೋ ಎನ್ನುತ್ತಿದೇ. ಆದರೆ ಮತ್ತೆ ಅದೆ ಖಾಲಿ ಜಾಗದಲ್ಲಿ ಸಸಿಗಳನ್ನು ನೆಟ್ಟು ಮರಗಳನ್ನು ಬೆಳೆಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರಿಂದ ಇಡೀ ಪ್ರವಾಸಿ ಮಂದಿರದ ಆವರಣ ಹಸಿರು ಕಾಣದೆ ಬಿಕೋ ಎನ್ನುತ್ತಿದೆ.

ಅಕಾರಿಗಳು ಗಮನ ಹರಿಸಬೇಕು

ಸರಿಯಾದ ನಿರ್ವಹಣೆಯಿಲ್ಲದೇ ಅತಿಥಿಗಳು ಪ್ರವಾಸಿ ಮಂದಿರಕ್ಕೆ ಬರಲು ಹಿಂದೆಟು ಹಾಕುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಗಮನ ಹರಿಸಬೇಕು. ಜೊತೆಗೆ ಜನಪ್ರತಿನಿಧಿಗಳು ಈ ಬಗ್ಗೆ ಕಾಳಜಿ ತೋರಬೇಕಿದೆ ಎಂದು ಮಹೇಶ್ ಹೊಗೆಸೊಪ್ಪಿನ್, ಮಂಜುನಾಥ ಮಾಗಡಿ, ನಾಗರಾಜ ಚಿಂಚಲಿ ಆಗ್ರಹಿಸಿದ್ದಾರೆ.

ಸೌಲಭ್ಯ ವಂಚಿತ ಮಂದಿರ
ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಅತಿಥಿಗಳ ವಿಶ್ರಾಂತಿಗೆ ಭಂಗ ತರುವಂತಿರುವ ಅಸ್ವಚ್ಛತೆ, ಸೊಳ್ಳೆಗಳ ಕಾಟ, ಸಾಕಷ್ಟು ಪಿಠೋಪಕರಣಗಳ ಕೊರತೆ, ಅಡಿಗೆ ತಯಾರಿಸುವ ಕೊಣೆ ಇಲ್ಲ, ಮಳೆಗಾಲದಲ್ಲಿ ಮಳೆ ನೀರಿನಿಂದ ಸೋರುತ್ತಿದೆ, ಇನ್ನೂ ಹಲವಾರು ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿವೆ. ಅವ್ಯವಸ್ಥೆಗಳ ಆಗರವಾಗಿರುವ ಈ ಪ್ರವಾಸಿ ಮಂದಿರಕ್ಕೆ ಪ್ರವಾಸಿಗರು ಬಂದರೆ ಪರದಾಟ ನಿಶ್ಚಿತ ಎನ್ನುವಂತಿದೆ.

Leave a Reply

Your email address will not be published. Required fields are marked *

You May Also Like

ಇಬ್ರಾಹಿಂ ಸುತಾರ ಅವರಿಗೆ ಶ್ರದ್ಧಾಂಜಲಿ

ಮುಳಗುಂದ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಕನ್ನಡದ ಕಬೀರ ಎಂದೆ ಖ್ಯಾತರಾಗಿದ್ದ ಇಬ್ರಾಹಿಂ ಸುತಾರ ಅವರು…

ಗಂಗಾಮತ ಸಮಾಜದ ವಧು-ವರರ ಸಮಾವೇಶ

ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದಿಂದ ವಧು-ವರರ ಸಮಾವೇಶ ಜ.31 ರಂದು ಶ್ರೀ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಪೂಜ್ಯಶ್ರೀ ಷ.ಬ್ರ. ಫಕೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜರುಗಲಿದೆ.

ಕೊಡಗಾನೂರ ವೀರಭದ್ರೇಶ್ವರ ರಥೋತ್ಸವ

ಸಮೀಪದ ಕೊಡಗಾನೂರ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಭಕ್ತರ ಹರ್ಷೊದ್ಘಾರದ ಮಧ್ಯೆ ಶನಿವಾರ ಸಂಜೆ ಸಂಭ್ರಮದಿಂದ ನಡೆಯಿತು.

ಕಳಸಾಪೂರ ಬಸವಕೇಂದ್ರ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಅವರಿಂದ ಉಪಹಾರ ಸೇವೆ

ಕಳೆದ 50 ದಿನಗಳಿಂದ ರಾಜ್ಯಾದ್ಯಂತ ಲಾಕ್‌ಡೌನ ಕಾರಣ ದಿನಗೂಲಿ ಕಾರ್ಮಿಕರು, ಬಡವರು, ನಿರ್ಗತಿಕರು ತುಂಬಾ ಸಂಕಷ್ಟದಲ್ಲಿದ್ದು ಈ ಕಾರಣದಿಂದ ಕಳಸಾಪೂರ ಬಸವಕೇಂದ್ರ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಗ. ಖಂಡಮ್ಮನವರ ವತಿಯಿಂದ ನಗರದ ಹೆರಿಗೆ ಆಸ್ಪತ್ರೆ ಆವರಣ, ಬೆಟಗೇರಿ ರಂಗಪ್ಪಜ್ಜನ ಮಠದ ಆವರಣ, ನಗರಸಭೆ ಹತ್ತಿರ, ಹೆಲ್ಥಕ್ಯಾಂಪ್‌ನಲ್ಲಿ ಉಪಹಾರ ಸೇವೆ ಮಾಡಲಾಯಿತು.