ಲಕ್ಷ್ಮೇಶ್ವರ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ಖಂಡಿಸಿ ಜಯ ಕರ್ನಾಟಕ ಜನಪರ ವೇದಿಕೆ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಲಕ್ಷ್ಮೇಶ್ವರ ತಾಲೂಕ ಘಟಕ ಅಧ್ಯಕ್ಷ ಸದಾನಂದ ನಂದೆಣ್ಣವರ ಮಾತನಾಡಿ, ರಾಜ್ಯದಲ್ಲಿ ಮರಾಠ ಸಮುದಾಯದವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಅಭಿವೃದ್ದಿಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಕ್ರಮ ಕೈಗೊಂಡು ಜನತೆ 50 ಕೋಟಿ ಅನುದಾನ ಮೀಸಲಿಡಬೇಕು ಎಂದು ಸರ್ಕಾರದ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಕರ್ನಾಟಕ ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಅವೈಜ್ಞಾನಿಕ ಇಂತಹ ಅವೈಜ್ಞಾನಿಕ ಸಲಹೆಯನ್ನು ಮುಖ್ಯಮಂತ್ರಿಗಳಿಗೆ ಯಾರು ನೀಡಿದ್ದಾರೋ ತಿಳಿದಿಲ್ಲ ಎಂದು ಹೇಳಿದರು.

ಮರಾಠ ಪ್ರಾಧಿಕಾರವನ್ನು ಕೈಬಿಡಬೇಕು ಇಲ್ಲವಾದಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕುಮಾರ ಬೇಟಗೇರಿ, ಶಿವರಾಜ ಹರಿಜನ, ಪ್ರವೀಣ ಆಚಾರಿ, ಮಂಜುನಾಥ ಗೌರಿ, ಮಹಾಂತೇಶ ಗುಡಿಸಲಮನಿ, ಮಂಜುನಾಥ ಕೊಡಳ್ಳಿ, ಮಹಾತೇಶ ಕುಂಬಾರ, ರವಿ ಸವದತ್ತಿ, ಗಣೇಶ ಭಜಕ್ಕನವರ, ಹುಲ್ಲೇಶ ಗಡದವರ, ರಾಕೇಶ ಭೀಮಣ್ಣವರ ಸೇರಿ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ಯಾಕೇಜ್: ಸಿಎಂಗೆ ಜೊಲ್ಲೆ ಅಭಿನಂದನೆ

ರಾಜ್ಯದಲ್ಲಿ ಕೊರೊನಾ ಮುಂಚೂಣಿ ವಾರಿಯರ್ಸ್ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪರಿಗಣಿಸಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2000 ರೂ. ನೆರವು ಘೋಷಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿನ ಬಹುತೇಕ ಸಿಬ್ಬಂದಿಗೆ ಕೊರೊನಾ!

ಮುಂಬಯಿ: ಇಲ್ಲಿಯ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಲ್ಲಿಯ ಸಾಯನ್‌ ತಿಲಕ್‌ ಆಸ್ಪತ್ರೆಯ 92 ಜನ ವೈದ್ಯರು ಹಾಗೂ ಏಳು ಜನ ತರಬೇತಿ ಪಡೆಯುತ್ತಿದ್ದ ವೈದ್ಯರಿಗೆ ಸೋಂಕು ತಗುಲಿದೆ.

ಕೋವಿಡ್: ಬಿಗಡಾಯಿಸುತ್ತಿದೆ ಬೆಂಗಳೂರು :25 ದಿನದಲ್ಲಿ 38,213 ಪಾಸಿಟಿವ್, 765 ಸಾವು

ಜುಲೈ 1 ರಿಂದ ಜುಲೈ 25ರ ಅವಧಿಯಲ್ಲಿ ಬೆಂಗಳೂರಿನಲ್ಲಿ ಪಾಸಿಟಿವ್ ಸಂಖ್ಯೆ 8 ಪಟ್ಟು ಹೆಚ್ಚಿದ್ದು, ಔಷಧಿ, ವೈದ್ಯರು ಮತ್ತು ಇತರ ಸಿಬ್ಬಂದಿಯ ಕೊರತೆಯಿದೆ.

ಸಚಿವ ಸುಧಾಕರ್ ಪತ್ನಿ, ಪುತ್ರಿಗೂ ಕೊರೊನಾ ಪಾಸಿಟಿವ್..!

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಪತ್ನಿ ಹಾಗೂ ಪುತ್ರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ…