ಲಕ್ಷ್ಮೇಶ್ವರ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ಖಂಡಿಸಿ ಜಯ ಕರ್ನಾಟಕ ಜನಪರ ವೇದಿಕೆ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಲಕ್ಷ್ಮೇಶ್ವರ ತಾಲೂಕ ಘಟಕ ಅಧ್ಯಕ್ಷ ಸದಾನಂದ ನಂದೆಣ್ಣವರ ಮಾತನಾಡಿ, ರಾಜ್ಯದಲ್ಲಿ ಮರಾಠ ಸಮುದಾಯದವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಅಭಿವೃದ್ದಿಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಕ್ರಮ ಕೈಗೊಂಡು ಜನತೆ 50 ಕೋಟಿ ಅನುದಾನ ಮೀಸಲಿಡಬೇಕು ಎಂದು ಸರ್ಕಾರದ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಕರ್ನಾಟಕ ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಅವೈಜ್ಞಾನಿಕ ಇಂತಹ ಅವೈಜ್ಞಾನಿಕ ಸಲಹೆಯನ್ನು ಮುಖ್ಯಮಂತ್ರಿಗಳಿಗೆ ಯಾರು ನೀಡಿದ್ದಾರೋ ತಿಳಿದಿಲ್ಲ ಎಂದು ಹೇಳಿದರು.

ಮರಾಠ ಪ್ರಾಧಿಕಾರವನ್ನು ಕೈಬಿಡಬೇಕು ಇಲ್ಲವಾದಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕುಮಾರ ಬೇಟಗೇರಿ, ಶಿವರಾಜ ಹರಿಜನ, ಪ್ರವೀಣ ಆಚಾರಿ, ಮಂಜುನಾಥ ಗೌರಿ, ಮಹಾಂತೇಶ ಗುಡಿಸಲಮನಿ, ಮಂಜುನಾಥ ಕೊಡಳ್ಳಿ, ಮಹಾತೇಶ ಕುಂಬಾರ, ರವಿ ಸವದತ್ತಿ, ಗಣೇಶ ಭಜಕ್ಕನವರ, ಹುಲ್ಲೇಶ ಗಡದವರ, ರಾಕೇಶ ಭೀಮಣ್ಣವರ ಸೇರಿ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಕೊರೋನಾ ಸೋಂಕಿತರ ಚಿಕಿತ್ಸೆಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚುಎಷ್ಟು ಗೊತ್ತಾ?

ಕೊರೋನಾ ಸೋಂಕಿತರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇನ್ನು ಇಡೀ ದೇಶದ ಆರ್ಥಿಕ ಸ್ಥಿತಿ ಅಷ್ಟಕ್ಕಷ್ಟೆ. ಆದರೆ ಒಬ್ಬ ಕೊರೋನಾ ಸೋಂಕಿತರಿಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚು ಎಷ್ಟು ಎಂದು ನೋಡುವುದಾದರೆ ನಿಜಕ್ಕೂ ಆಶ್ಚರ್ಯ.

ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ: ಸಿದ್ದರಾಮಯ್ಯ

ಕೊಪ್ಪಳ: ಸಚಿವ ಸೋಮಣ್ಣ ಅವರ ಹೇಳಿಕೆ ಆರ್ಥಿಕತೆಯ ಬಗ್ಗೆ ಅವರಿಗಿರುವ ಅಜ್ಞಾನವನ್ನು ತೋರಿಸುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತಿನಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿತ್ತು. ಈಗ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ರಾಜ್ಯ ಮಾತ್ರವಲ್ಲ ಇಡೀ ದೇಶವೇ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಜುಲೈನಲ್ಲಿ ಪಿಯುಸಿ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸದ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಜುಲೈನಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ…

ಹೆಲ್ತ್ ರಿಜಿಸ್ಟರ್ ಗೆ ಸರ್ಕಾರದ ಮುನ್ನುಡಿ: ತಜ್ಞರ ಜತೆ ಸಚಿವ ಸುಧಾಕರ್ ಸಮಾಲೋಚನೆ

ಆರೋಗ್ಯ ಕರ್ನಾಟಕ’ಕ್ಕೆ ವೇದಿಕೆ ಕಲ್ಪಿಸಲಿರುವ “ಹೆಲ್ತ್ ರಿಜಿಸ್ಟರ್’ ಯೋಜನೆ ಅನುಷ್ಠಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮುನ್ನುಡಿ ಬರೆದರು.