ಲಕ್ಷ್ಮೇಶ್ವರ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ಖಂಡಿಸಿ ಜಯ ಕರ್ನಾಟಕ ಜನಪರ ವೇದಿಕೆ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಲಕ್ಷ್ಮೇಶ್ವರ ತಾಲೂಕ ಘಟಕ ಅಧ್ಯಕ್ಷ ಸದಾನಂದ ನಂದೆಣ್ಣವರ ಮಾತನಾಡಿ, ರಾಜ್ಯದಲ್ಲಿ ಮರಾಠ ಸಮುದಾಯದವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಅಭಿವೃದ್ದಿಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಕ್ರಮ ಕೈಗೊಂಡು ಜನತೆ 50 ಕೋಟಿ ಅನುದಾನ ಮೀಸಲಿಡಬೇಕು ಎಂದು ಸರ್ಕಾರದ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಕರ್ನಾಟಕ ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಅವೈಜ್ಞಾನಿಕ ಇಂತಹ ಅವೈಜ್ಞಾನಿಕ ಸಲಹೆಯನ್ನು ಮುಖ್ಯಮಂತ್ರಿಗಳಿಗೆ ಯಾರು ನೀಡಿದ್ದಾರೋ ತಿಳಿದಿಲ್ಲ ಎಂದು ಹೇಳಿದರು.

ಮರಾಠ ಪ್ರಾಧಿಕಾರವನ್ನು ಕೈಬಿಡಬೇಕು ಇಲ್ಲವಾದಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕುಮಾರ ಬೇಟಗೇರಿ, ಶಿವರಾಜ ಹರಿಜನ, ಪ್ರವೀಣ ಆಚಾರಿ, ಮಂಜುನಾಥ ಗೌರಿ, ಮಹಾಂತೇಶ ಗುಡಿಸಲಮನಿ, ಮಂಜುನಾಥ ಕೊಡಳ್ಳಿ, ಮಹಾತೇಶ ಕುಂಬಾರ, ರವಿ ಸವದತ್ತಿ, ಗಣೇಶ ಭಜಕ್ಕನವರ, ಹುಲ್ಲೇಶ ಗಡದವರ, ರಾಕೇಶ ಭೀಮಣ್ಣವರ ಸೇರಿ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಮಾಲ್, ಹೋಟೆಲ್ ಜೂ. 21 ರಿಂದ ತೆರೆಯಲು ತಾಂತ್ರಿಕ ಸಮಿತಿ ಸಲಹೆ ಒಪ್ಪಿಗೆ? ಸಲಹೆಗಳೇನ್ನು

ಕೊರೊನಾ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಜನರು ಗುಂಪು ಗುಂಪು ಸೇರದಂತೆ ಮಾಲ್, ಹೋಟೆಲ್, ಇನ್ನಿತರ ಆರ್ಥಿಕ ಚಟುವಟಿಗಳನ್ನು ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಸಲಹೆ ನೀಡಿದೆ.

ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಮಾ.31ರ ವರೆಗೆ ವಿಸ್ತರಣೆ

ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ. 2019-20 ನೇ ಸಾಲಿನ ಪಾಸ್ ತೋರಿಸಿ ಮಾ.31 ರವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ಕಾಲವಶ

ಬೆಂಗಳೂರು: ಕನ್ನಡ, ತಮಿಳು ಮತ್ತಿತರ ಭಾಷೆಗಳ 650ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಾಸ್ಯ ನಟ ಮಿಮಿಕ್ರಿ…

ಕೊರೊನಾ ಎರಡನೇ ಅಲೆ: ಅಧಿಕಾರಿಗಳ ಸಭೆ ಬಳಿಕೆ ಸಿಎಂ ಹೇಳಿದ್ದೇನು?

ಕೊರೊನಾ ಎರಡನೇ ಅಲೆ ಹಿನ್ನೆಲೆ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.