ಲಕ್ಷ್ಮೇಶ್ವರ: ಪಟ್ಟಣದ ಅಗಸ್ತ್ಯತೀರ್ಥ ಬಾವಿಯಲ್ಲಿ ಈಜಲು ಹೋದ ಯುವಕ ನೀರುಪಾಲಾದ ಘಟನೆ ಗುರುವಾರ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿತ್ತು.

ಅಗ್ನಿಶಾಮಕ ದಳದವರು ಇಡಿ ದಿನ ಶೋಧ ಕಾರ್ಯ ನಡೆಸಿದ್ದರು. ಆದರೆ ಮೃತದೇಹ ಸಿಕ್ಕಿರಲಿಲ್ಲ. ಶುಕ್ರವಾರ ಬಾವಿಯಲ್ಲಿ ಮೃತದೇಹ ಪತ್ತೆಯಾಯಿತು. ಹರ್ಷವರ್ಧನ ನೀರು ಪಾಲಾದ ಬಾಲಕ. ದೀಪಾವಳಿಗೆ ಬ್ಯಾಡಗಿಯಿಂದ ಲಕ್ಷ್ಮೇಶ್ವರ ಪಟ್ಟಣಕ್ಕೆ ಸಂಬಂಧಿಕರ ಮನೆಗೆ ಬಂದಿದ್ದ ಹರ್ಷವರ್ಧನ, ಬಾವಿಗೆ ಈಜಲು ಹೋದಾಗ ದುರ್ಘಟನೆ ಸಂಭವಿಸಿತ್ತು.

ರಸ್ತೆಯ ಪಕ್ಕದಲ್ಲಿ ಓಡಾಡುವ ಸಾರ್ವಜನಿಕರು ಸಂಶಯಾಸ್ಪದವಾಗಿ ಬಾವಿ ಕಡೆಗೆ ಹೋದಾಗ ಘಟನೆ ಬೆಳಕಿಗೆ ಬಂದಿತ್ತು. ಬಾವಿಯ ದಡದ ಮೇಲೆ ಬಟ್ಟೆ, ಚಪ್ಪಲಿಗಳು ಕಂಡು ಬಂದ ಹಿನ್ನೆಲೆ ಬಾಲಕ ನೀರಿನಲ್ಲಿ ಮುಳಗಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆ ಗುರುವಾರ ಶೋಧ ಕಾರ್ಯ ನಡೆಸಿದರೂ, ಮೃತ ದೇಹ ಪತ್ತೆಯಾಗಿರಲಿಲ್ಲ‌. ಆದರೆ ಶುಕ್ರವಾರ ತಾನಾಗಿಯೇ ನೀರಿನಲ್ಲಿ ಮೃತದೇಹ ತೇಲುತ್ತಿರುವುದು ಕಂಡು ಬಂದಿತು. ಕುಟುಂಬಸ್ಥರು ಮತ್ತು ಸಂಬಂಧಿಕರ ರೋಧನ ಮುಗಿಲು ಮುಟ್ಟಿತ್ತು.

Leave a Reply

Your email address will not be published. Required fields are marked *

You May Also Like

ಹಾವು ರಕ್ಷಕ ಡ್ಯಾನಿಯಲ್ ಗೆ ಕಚ್ವಿದ ಹಾವು: ಆಸ್ಪತ್ರೆಗೆ ದಾಖಲು

ಬಾಗಲಕೋಟೆ: ನಗರದ ಉರಗ ಪ್ರೇಮಿ ಹಾಗೂ ಹಾವು ರಕ್ಷಕ ಡ್ಯಾನಿಯಲ್ ನ್ಯೂಟನ್ ನಿಗೆ ಹಾವು ಕಚ್ಚಿದ್ದು…

ರಾಜ್ಯದಲ್ಲಿಂದು 947 ಕೊರೊನಾ ಪಾಸಿಟಿವ್! : ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 946 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 15242…

ನೆಲೋಗಿ ಠಾಣೆ ಪೊಲೀಸರ ಭರ್ಜರಿ ಬೇಟೆ 41.8 ಕೆಜಿ ಗಾಂಜಾ ಜಪ್ತಿ

ಉತ್ತರಪ್ರಭ ನೆಲೋಗಿ: ರಾಷ್ಟೀಯ ಹೆದ್ದಾರಿ 50ರ ಕಲಬುರ್ಗಿಯಿಂದ ವಿಜಯಪುರಕ್ಕೆ ಮಾರ್ಗಮಧ್ಯದಲ್ಲಿ  ನೆಲೋಗಿ ಕಮಾನ್ ಬಸ್ ನಿಲ್ದಾಣದ…

ಗ್ರಾಪಂ ಚುನಾವಣೆ ನಾಳೆ ಚಿಹ್ನೆ ಹಂಚಿಕೆ : ಅಭ್ಯರ್ಥಿಗಳಿಗೆ ಚಿನ್ಹೆ ಹಂಚಿಕೆ ಕ್ರಮ ಹೇಗಿರುತ್ತೆ ಇಲ್ಲಿದೆ ಮಾಹಿತಿ

ಗ್ರಾಮ ಪಂಚಾಯತ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಉಮೇದುವಾರಿಕೆ ಹಿಂಪಡೆಯಲು ನೀಡಿದ ಸಮಯಾವಕಾಶ ಮುಗಿದ ನಂತರ ಸ್ಪರ್ಧೆ ಇರುವ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳಿಗೆ ಅವರ ಸಮ್ಮುಖದಲ್ಲಿ ಚುನಾವನಾ ಆಯೋಗದ ನಿಯಮಾನುಸಾರ ಡಿ.14 ರಂದು ಚುನಾವಣಾಧಿಕಾರಿಗಳು ಚುನಾವಣಾ ಚಿಹ್ನೆಗಳನ್ನು ಹಂಚಿಕೆ ಮಾಡುತ್ತಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ತಿಳಿಸಿದ್ದಾರೆ.