ಮಸ್ಕಿ: ತಾಲೂಕ ಬಂಜಾರ ಭವನ ನಿರ್ಮಾಣಕ್ಕೆ 2ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್ ಭರವಸೆ ನೀಡಿದರು.

ಪಟ್ಟಣದ ಭ್ರಮರಾಂಭ ದೇವಸ್ಥಾನದಲ್ಲಿ ನಡೆದ ಬಂಜಾರ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ಷೇತ್ರದ ಉಪ ಚುನಾವಣೆ ಘೋಷಣೆ ಆಗುವ ಮುನ್ನ ಮಸ್ಕಿ ಪಟ್ಟಣದಲ್ಲಿ ಬಂಜಾರ ಭವನ ನಿರ್ಮಿಸಲು 2ಕೋಟಿ ಅನುದಾನ ಮಂಜೂರ ಮಾಡಲಾಗುವುದು. ಮಂಜೂರು ಮಾಡಿದ ಬಳಿಕ ಮತವನ್ನು ಹಾಕಿ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನೂ ಕ್ಷೇತ್ರದ ವ್ಯಾಪ್ತಿಯಲ್ಲಿನ ನಿರುದ್ಯೋಗ ಯುವಕರಿಗಾಗಿ ಕೌಶಲ್ಯ ತರಬೇತಿ ಆರಂಭ ಮಾಡಲಾಗುವುದು. ಈ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಪ್ರತಾಪಗೌಡ ಪಾಟೀಲ ಅವರು ಕೈ ಜೋಡಿಸಿದ್ದಾರೆ ಉಪ ಚುನಾವಣೆಯಲ್ಲಿ ಅವರಿಗೆ ಬೆಂಬಲಿಸಬೇಕೆಂದು ಹೇಳಿದರು.  ನಿಮ್ಮ ಒಂದು ಮತ ಪ್ರತಾಪಗೌಡ ಪಾಟೀಲ ಬರಿ ಶಾಸಕನಾಗಿ ಮಾಡುವುದಿಲ್ಲ ಬದಲಾಗಿ ಮಂತ್ರಿಯನ್ನಾಗಿಸುತ್ತದೆ. ಪ್ರತಿಯೊಬ್ಬರು ಬಿಜೆಪಿಗೆ ಮತ ಹಾಕಬೇಕೆಂದು ಬಂಜಾರ ಸಮಾಜದ ಜನರಿಗೆ ಮನವಿ ಮಾಡಿದರು.

ಮುದಗಲ್ಲ ರಸ್ತೆಯಲ್ಲಿನ ಸಂತ ಸೇವಾಲಾಲ್ ವೃತ್ತಕ್ಕೆ ಹೂವಿನಹಾರ ಅರ್ಪಿಸಿ ಬಳಿಕ ಎತ್ತಿನಬಂಡಿ ಮೂಲಕ ಮೆರವಣಿಗೆ ನಡೆಸಿ ಭ್ರಮರಾಂಭ ದೇವಸ್ಥಾನಕ್ಕೆ ತಲುಪಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ಬಂಜಾರ ಸಮಾಜದ ಮುಖಂಡ ಪಾಂಡುರಂಗ ಪಮ್ಮಾರ, ಅಮರೇಶ ರೈತನಗರ, ಅಮರೇಶ ರಾಠೋಡ್, ಅಮರೇಶ ಅಂತರಗಂಗಿ, ಹರಿಶ್ಚಂದ್ರ ರಾಠೋಡ್, ಲಿಂಗಪ್ಪ ಚವ್ಹಾಣ, ಬಿಜೆಪಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಸೇರಿದಂತೆ ಸಮಾಜದ ಮುಖಂಡರು ಇದ್ದರು.

Leave a Reply

Your email address will not be published. Required fields are marked *

You May Also Like

ಭಟ್ಕಳದಲ್ಲಿ ಈಗ ಕೊರೊನಾದ್ದೇ ಆಟ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಒಂದೇ ದಿನ ಬರೋಬ್ಬರಿ 12 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬ ಸೋಂಕಿಗೆ ಬಲಿಯಾಗಿದ್ದು, ಇಡೀ ಜಿಲ್ಲೆಯ ಜನರೇ ಬೆಚ್ಚಿ ಬೀಳುವಂತೆ ಮಾಡಿದೆ.

ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹ: ಒಂದು ವರ್ಷ ಕಾಲ ಕುಡಿಯುವ ನೀರಿಗೆ ಸಮಸ್ಯೆ ಅಗದು- ಸಚಿವ ಸಿ.ಸಿ.ಪಾಟೀಲ

ಆಲಮಟ್ಟಿ: ಆಲಮಟ್ಟಿ ಜಲಾಶಯದಲ್ಲಿಗ ಕಳೆದ ವರ್ಷಕ್ಕಿಂತಲೂ ಈ ಬಾರಿ ಈ ವೇಳೆ ಗರಿಷ್ಠ ಮಟ್ಟದಲ್ಲಿ ನೀರು…

ಲಾಕ್ ಡೌನ್ ಅವಧಿ ವಿಸ್ತರಣೆ: ಜೂ.7ರವರೆಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆ

ಜೂನ್ ಒಂದರವರೆಗೂ ಇದ್ದ ಲಾಕ್ ಡೌನ್ 7 ನೇ ತಾರೀಖಿನವರೆಗೂ ಮುಂದುವರಿಸಲಾಗುವುದು. ಕೆಲ ಸಡಿಲಿಕೆಯೊಂದಿಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಆಲಮಟ್ಟಿ: ಬಸವಭೂಮಿ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತಾತೀಥ್ಯ

ಆಲಮಟ್ಟಿ : ಆಲಮಟ್ಟಿಗೆ ಆಗಮಿಸಿದ್ದ ಬಸವಭೂಮಿ ಯಾತ್ರೆಯ ಸಹಸ್ರಾರು ಬಸವಭಕ್ತ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತದೊಂದಿಗೆ ಬರಮಾಡಿಕೊಂಡು…