ಗದಗ: ಆಕಸ್ಮಿಕ ಬೆಂಕಿಗೆ ಮೆಕ್ಕೆಜೋಳ ಸುಟ್ಟು ಭಸ್ಮಗೊಂಡ ಘಟನೆ ಗದಗ ಜಿಲ್ಲೆಯ ನಾಗಾವಿ ತಾಂಡಾದಲ್ಲಿ ನಡೆದಿದೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ನಾಶವಾಗಿದೆ.

ಲಕ್ಷ್ಮಣ್ ಪವಾರ್ ಎಂಬುವರಿಗೆ ಸೇರಿದ 11 ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಂದಾಜು 2.5 ಲಕ್ಷ ರೂ. ಮೌಲ್ಯದ ಬೆಳೆ ನಾಶವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿದಿಸಲು ಪ್ರಯತ್ನಿಸಿದರು.

ರೈತ ಲಕ್ಷ್ಮಣ್ ಒಂದು ತಿಂಗಳ ಹಿಂದೆ ಮೆಕ್ಕೆ ಜೋಳ ಮುರಿದು ಕೂಡಿಹಾಕಿದ್ದ. ಆದರೆ ಇದೀಗ ಬೆಳೆದ ಬೆಳೆ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಪೊಲೀಸ್ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ ಬಳಿ ಬೈಕ್, ಬಸ್ ಡಿಕ್ಕಿ; ಇರ್ವರ ಸಾವು

ಆಲಮಟ್ಟಿ; ಬೈಕ್ ಹಾಗು ಖಾಸಗಿ ಬಸ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಾಣ…

ಗದಗ ಜಿಲ್ಲೆಯಲ್ಲಿಂದು 44 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 44 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 414 ಕ್ಕೆ…

ಹದಗೆಟ್ಟ ಸೊರಟೂರ – ಮುಳಗುಂದ ರಸ್ತೆ: ದಶಕ ಗತಿಸಿದರೂ ದುರಸ್ಥಿ ಭಾಗ್ಯ ಕಾಣದ ರಸ್ತೆ!

ಮುಳಗುಂದ: ಸಮೀಪದ ಸೊರಟೂರ ಗ್ರಾಮದಿಂದ ಮುಳಗುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಾಕಷ್ಟು ಪ್ರಮಾಣದಲ್ಲಿ ಹಾಳಾಗಿದ್ದು ದುರಸ್ಥಿ ಕಾಮಗಾರಿ ಕೈಗೊಳ್ಳಬೇಕಿದೆ.

ಬಸವ ವಸತಿ ಯೋಜನೆ ಮನೆ ಮಂಜೂರು: ಪಿಡಿಒ ತಿಮ್ಮಣ್ಣ ಭೋವಿ

ವರದಿ: ವಿಠಲ ಕೆಳೂತ್ ಮಸ್ಕಿ: ಬಸವ ವಸತಿ ಯೋಜನೆ‌ ಹಾಗೂ ಡಾ.‌ಬಿ.ಆರ್ ಅಂಬೇಡ್ಕರ್ ಯೋಜನೆಯಡಿಯಲ್ಲಿ 30…