ಗದಗ: ಭಿನ್ನತೆ ಹಾಗೂ ವೈಶಿಷ್ಟ್ಯತೆಯಿಂದ ಕೂಡಿರುವ ಪಕ್ಷ ಬಿಜೆಪಿಯಾಗಿದೆ. ಪಕ್ಷದ ಸಿದ್ಧಾಂತ, ತತ್ವಗಳನ್ನು  ಕಾರ್ಯಕರ್ತರಿಗೆ ತಿಳಿಸಿ ಅವರಲ್ಲಿ ನಾಯಕತ್ವದ ಗುಣ ಬೆಳೆಸುವುದು  ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ್ ಹೇಳಿದರು.

ಅವರು ಸೋಮವಾರ ನಗರದ  ಕನ್ನಡ ಸಾಹಿತ್ಯ ಭವನದಲ್ಲಿ ಜರುಗಿದ ಭಾರತಿಯ ಜನತಾ ಪಕ್ಷದ ಶಹರ ಮಂಡಳದ ವತಿಯಿಂದ  ಪ. ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಉದ್ಘಾಟಿಸಿ ಅವರು  ಮಾತನಾಡಿದರು.

ಜನಸಂಘ 1951  ರಲ್ಲಿ  ಪ್ರಮುಖ ಉದ್ದೇಶಗಳನ್ನು ಇಟ್ಟುಕೊಂಡು ಪ್ರಾರಂಭವಾಯಿತು. ಕಾರ್ಯಕರ್ತರಿಗೆ  ನಾಯಕತ್ವದ ಗುಣ ಬೆಳೆಸುವುದಕ್ಕೆ ಪಕ್ಷ 1957 ಅಗಸ್ಟ್  8 ರಂದು ಪ್ರಶಿಕ್ಷಣ ವರ್ಗ ಪ್ರಾರಂಭಿದೆ‌ ಎಂದರು. ನರೇಂದ್ರ ಮೋದಿ ಅವರು ಕಾರ್ಯಕರ್ತರಾಗಿ ರಾಜಕೀಯ ಜೀವನ ಅರಂಭಿಸಿ ಇಂದು ಭಾರತದ ಪ್ರಧಾನ ಮಂತ್ರಿಯಾಗಿದ್ದಾರೆ. ಅಷ್ಟೇ ಅಲ್ಲದೇ ಅವರು ಈಗ ವಿಶ್ವದ ನಾಯಕ ಇದಕ್ಕೆ ಬಿಜೆಪಿ ಸತತ ಪ್ರೋತ್ಸಾವಿದೆ‌ ಎಂದರು.

ನೀವೂ ಸಹ  ಮುಂದೆ  ಅಂತಹ ನಾಯಕರಾಗಬೇಕು‌. ಈ ವೇದಿಕೆಯಲ್ಲಿ ಆಸಿಸನರಾಗಬೇಕು ಅದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಮೂರು ಜನ ಇದ್ದ ಜನ ಸಂಘ ಇಂದು 3೦3 ಲೋಕ ಸಭಾ ಸದಸ್ಯರನ್ನು ಗೆಲ್ಲಿಸುವ ಸಾಮರ್ಥ್ಯ  ಹೊಂದಿದೆ ಎಂದರೆ ಅದಕ್ಕೆ ಪಕ್ಷದ ನಿಲುವುಗಳು, ಜನರು ಪಕ್ಷದ ಮೇಲೆ ಹಾಗೂ ನಾಯಕರ ಮೇಲೆ ಇಟ್ಟಿರುವ   ವಿಶ್ವಾಸವೇ ಇದಕ್ಕೆ ಕಾರಣ ಎಂದರು.

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ  ಸರ್ಕಾರದ ಸೇವೆ ಸಲ್ಲಿಸಬೇಕು. ಈ ನಿಟ್ಟಿನಲ್ಲಿ ನಮ್ಮ ಪಕ್ಷ ಇರುವುದು ದೇಶದ ಅಭಿವೃದ್ಧಿಗಾಗಿ, ಹಿತಕ್ಕಾಗಿ ರಾಷ್ಟ್ರದಲ್ಲಿ  ಸು-ಶಾಸನ,  ಸ್ವ-ರಾಜ್ಯದ ಪಾರದರ್ಶಕ ಆಡಳಿತ ನಿರ್ಮಾಣವೇ ನಮ್ಮ ಗುರಿ ಎಂದರು.

ಎಸ್.ಸಿ ಮೋರ್ಚಾ ಅಧ್ಯಕ್ಷ ನಾರಾಯಣ ಸ್ವಾಮಿ, ಬಿಜೆಪಿ ಯುವ ಮುಖಂಡ ಅನಿಲ್ ಮೆಣಸಿನಕಾಯಿ, ಪ್ರವರ್ಗ  ಜಿಲ್ಲಾ ಸಂಚಾಲಕ ಎಸ್.ಜಿ.ಉಡಪಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಪ್ರವರ್ಗ ಸಹ ಸಂಚಾಲಕ ಆನಂದ್ ಶೇಠ್, ಅರವಿಂದ ಕೆಲೂರು ಉಪಸ್ಥಿತರಿದ್ದರು. ಅನೀಲ ಅಬ್ಬಿಗೇರಿ ನಿರೂಪಿಸಿ, ಮಾಂತೇಶ ನಾಲ್ಗೊಡ ಸ್ವಾಗತಿಸಿ, ರಾಘವೇಂದ್ರ ಯಳವತ್ತಿ ವಂದಿಸಿದರು.

Leave a Reply

Your email address will not be published. Required fields are marked *

You May Also Like

ಸಿಂಧನೂರು: ಬಾಬುಗೌಡ ಬಾದರ್ಲಿ ನೇತೃತ್ವದಲ್ಲಿ ಕೊರೋನ್ ಜಾಗೃತಿ

ಜಿಲ್ಲಾ ಪಂಚಾಯತ ಸದಸ್ಯ ಕಾಂಗ್ರೆಸ್ ಪಕ್ಷದ ಮುಖಂಡ ಬಾಬುಗೌಡ ಬಾದರ್ಲಿ ನೇತೃತ್ವದಲ್ಲಿ ಕೊರೋನ್ ವೈರಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾಸ್ಕ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕೋವಿಡ್ ಸೋಂಕು ನಿಯಂತ್ರಣ:ಹೆಚ್ಚುವರಿ ನಿಯಂತ್ರಣ ಕ್ರಮಗಳ ಪಾಲನೆಗೆ ಜಿಲ್ಲಾಧಿಕಾರಿಗಳ ಆದೇಶ

ಗದಗ : ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಿಲ್ಲಾದ್ಯಂತ…

21 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗಳಿಗೆ ಸಿಹಿ ಸುದ್ದಿ

ನೌಕರರ ರಾಜ್ಯ ವಿಮಾ ನಿಗಮದಡಿ ಬರುವ ನೌಕರರು ಇಎಸ್‌ಐಸಿ ಯೋಜನೆಯಡಿ ಎಲ್ಲ ಜಿಲ್ಲೆಗಳಲ್ಲಿ ಆರೋಗ್ಯ ಸೇವೆಯನ್ನು ಪಡೆಯಲಿದ್ದಾರೆ. ಫೆಬ್ರವರಿ 1ರಿಂದ ಎಲ್ಲ 735 ಜಿಲ್ಲೆಗಳಲ್ಲಿ ಆರೋಗ್ಯ ಸಂಬAಧಿ ಸೇವೆ ಸಿಗಲಿದೆ. ಸದ್ಯ 387 ಜಿಲ್ಲೆಗಳಲ್ಲಿ ಆರೋಗ್ಯ ಸೇವೆ ಲಭ್ಯವಿತ್ತು. 187 ಜಿಲ್ಲೆಗಳಲ್ಲಿ ಭಾಗಶಃ ಸೇವೆಗಳು ಲಭ್ಯವಿದ್ರೆ 161 ಜಿಲ್ಲೆಗಳಲ್ಲಿ ಇಎಸ್‌ಐಸಿ ನೌಕರರಿಗೆ ಯಾವುದೇ ಸೇವೆ ಲಭ್ಯವಿರಲಿಲ್ಲ.

ಸಿಎಂ ಯಡಿಯೂರಪ್ಪ ರಾಜಾಹುಲಿ ಅಂದ್ರು ಆರ್.ಅಶೋಕ

ಚಾಮರಾಜನಗರ:ಹುಲಿಗೆ ಹಿಂದಿನಿಂದ ಆಡಳಿತ ಮಾಡಿ ಗೊತ್ತಿಲ್ಲ. ನೇರ ಆಡಳಿತವೇ ಸಿಎಂ ಯಡಿಯೂರಪ್ಪ ಅವರ ಸ್ವಭಾವ ಹೀಗಾಗಿ ಯಡಿಯೂರಪ್ಪ ರಾಜಾಹುಲಿ ಇದ್ದಂತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.