ಧಾರವಾಡ: ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಇವತ್ತು ಕೂಡ ರಿಲೀಫ್ ಸಿಗದಂತಾಗಿದೆ.

ಇಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ವಿಡಿಯೋ ಕಾನ್ಫರನ್ಸ್ ಮೂಲಕ ವಿನಯ್ ಅವರನ್ನು ಧಾರವಾಡದ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಿದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ವಿನಯ್ ಕುಲಕರ್ಣಿ ಅವರನ್ನು ಮತ್ತೆ 14 ದಿನಗಳ ಕಾಲ ಅಂದರೆ ಡಿ.7 ರವರೆಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಅವಧಿ ವಿಸ್ತರಿಸಿದೆ. ಇದರಿಂದ ವಿನಯ್ ಅವರಿಗೆ ರಿಲೀಫ್ ಸಿಗದಂತಾಗಿದೆ.

ಯೋಗೀಶಗೌಡರ ಕೊಲೆ ತನಿಖೆ ನಡೆಯುತ್ತಿರುವುದರಿಂದ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಬೇಕು ಎಂದು ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಹೀಗಾಗಿ ಜಿಲ್ಲಾ ನ್ಯಾಯಾಲಯ ವಿನಯ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಡಿ.7ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ರೋಗಿಗಳಿಗೆ ಔಷಧಿ, ಆಹಾರ ತಲುಪಿಸಲು ಹೊಸ ಐಡಿಯಾ!

ಹುಬ್ಬಳ್ಳಿ : ಸೋಂಕಿತರಿಗೆ ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಸಂದರ್ಭದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ವಾರ್ಡ್ ಗೆ ತೆರಳುತ್ತಿರುವ ಸಂದರ್ಭದಲ್ಲಿ ಪ್ರತಿ ಬಾರಿಯೂ ಪಿಪಿಇ ಕಿಟ್ ಧರಿಸಲೇಬೇಕು.

ನಿಗದಿತ ದಿನಾಂಕದಂದೇ ನಡೆಯಲಿದೆ ಎಸ್ಎಸ್ಎಲ್ಸಿ ಪರೀಕ್ಷೆ: ಸುಪ್ರೀಂ ಹಸಿರು ನಿಶಾನೆ

ದೆಹಲಿ/ಬೆಂಗಳೂರು: ಜೂ. 25 ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ SSLC ಪರೀಕ್ಷೆ ನಿಗದಿಯಂತೆ ನಡೆಯಲಿದೆ. ಕೊರೋನಾ…

ಶಾಸಕ ಡಾ: ವೀರಣ್ಣ ಚರಂತಿಮಠ ಇವರಿಂದ 10ಕೋಟಿ.17ಲಕ್ಷ ರೂ ಗಳ ಕಾಮಗಾರಿ ಚಾಲನೆ

ಬಾಗಲಕೋಟೆ: ಕ್ಷೇತ್ರದ ಶಾಸಕ ಡಾ:ವೀರಣ್ಣ ಚರಂತಿಮಠ ತಾಲ್ಲೂಕಿನ ಬೇವೂರು ಹಾಗೂ ಬೆನಕಟ್ಟಿ ಗ್ರಾಮಗಳಲ್ಲಿ ಸೋಮವಾರ 10 ಕೋಟಿ, 17 ಲಕ್ಷ ರೂ.ಗಳ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಗಳಿಗೆ ಚಾಲನೆ ನೀಡಿದರು.

ಗದಗ ಜಿಲ್ಲೆಯಲ್ಲಿಂದು 10 ಕೊರೊನಾ ಪಾಸಿಟಿವ್: ಶತಕ ದಾಟಿದ ಸೋಂಕಿತರ ಸಂಖ್ಯೆ!

ಜಿಲ್ಲೆಯಲ್ಲಿಂದು ಮತ್ತೆ 7 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಈವರೆಗೆ ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಇದರಲ್ಲಿ ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 2 ಕೇಸ್ ಗಳು ಮೃತ ಪಟ್ಟಿವೆ.