ಧಾರವಾಡ: ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಇವತ್ತು ಕೂಡ ರಿಲೀಫ್ ಸಿಗದಂತಾಗಿದೆ.

ಇಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ವಿಡಿಯೋ ಕಾನ್ಫರನ್ಸ್ ಮೂಲಕ ವಿನಯ್ ಅವರನ್ನು ಧಾರವಾಡದ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಿದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ವಿನಯ್ ಕುಲಕರ್ಣಿ ಅವರನ್ನು ಮತ್ತೆ 14 ದಿನಗಳ ಕಾಲ ಅಂದರೆ ಡಿ.7 ರವರೆಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಅವಧಿ ವಿಸ್ತರಿಸಿದೆ. ಇದರಿಂದ ವಿನಯ್ ಅವರಿಗೆ ರಿಲೀಫ್ ಸಿಗದಂತಾಗಿದೆ.

ಯೋಗೀಶಗೌಡರ ಕೊಲೆ ತನಿಖೆ ನಡೆಯುತ್ತಿರುವುದರಿಂದ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಬೇಕು ಎಂದು ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಹೀಗಾಗಿ ಜಿಲ್ಲಾ ನ್ಯಾಯಾಲಯ ವಿನಯ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಡಿ.7ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

You May Also Like

ಮನೆ ಬಾಗಿಲಿಗೆ ಬರಲಿದೆ ಅಯ್ಯಪ್ಪಸ್ವಾಮಿ ಪ್ರಸಾದ

450 ರೂಪಾಯಿ ಪಾವತಿಸಿದರೆ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆ ತಿರುವಾಂಕೂರು ದೇವಸ್ಥಾನ ಮಂಡಳಿಯೊಂದಿಗೆ ಈ ಬಗ್ಗೆ ಒಪ್ಪಂದ ಮಾಡಿಕೊಂಡಿದೆ.

ಜಗತ್ತಿನಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ನಿನ್ನೆ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ?

ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಕಳೆದ 24 ಭಾರತ ದೇಶದಲ್ಲಿ ಸೋಂಕಿತರು ಬೇಗ ಚೇತರಿಸಿಕೊಳ್ಳುತ್ತಿದ್ದಾರೆ. ಕೊರೊನಾ ವಾರಿಯರ್ಸ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ಇದರಿಂದ ತಿಳಿದು ಬರುತ್ತಿದೆ. ಸದ್ಯ ದೇಶದಲ್ಲಿ 9,07,883 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆ ಕಂಡಿದೆ. ದೇಶದಲ್ಲಿ ಇದುವರೆಗೂ 8,22,71,657 ಜನ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದಾರೆ.ಗಂಟೆಗಳಲ್ಲಿ 72,049 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಆಕ್ಸಿಜನ್ ಬಗ್ಗೆ ಯಾರು ಭಯಪಡಬೇಡಿ: ಸಚಿವ ಪ್ರಹ್ಲಾದ್ ಜೋಷಿ

ಕೊವಿಡ್ ರೋಗಿಗಳಿಗಾಗಿ ವಿಶೇಷ ಹೆಚ್ಚುವರಿ 10 ಆ್ಯಂಬ್ಯುಲೇನ್ಸ್ ಸಿದ್ಧಪಡಿಸಲಾಗಿದೆ. ಜನರು ಜಾಗೃತರಾಗಿರಬೇಕು. ಆದರೆ ಜನರು ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಅಮೇರಿಕ ಶ್ವೇತ ಭವನಕ್ಕೂ ಎಂಟ್ರಿ ಕೊಟ್ಟ ಸೋಂಕು!

ಅಮೇರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರ ಮಾಧ್ಯಮ ಕಾರ್ಯದರ್ಶಿಗೆ ಕೊರೋನಾ ವೈರಸ್ ತಗಲಿದೆ. ಶ್ವೇತ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕು ತಗಲಿಸಿಕೊಂಡಿರುವ ಎರಡನೇ ವ್ಯಕ್ತಿ ಇವರಾಗಿದ್ದಾರೆ.