ಬೆಂಗಳೂರು: ಕೋವಿಡ್ 19 ಹಿನ್ನೆಲೆ ಈಗಾಗಲೇ ಶೈಕ್ಷನಿಕ ವರ್ಷದಲ್ಲಿ ಶಾಲೆಗಳಿನ್ನು ಆರಂಭವಾಗಿಲ್ಲ. ಡಿ.17ಕ್ಕೆ ಸರ್ಕಾರ ಕೆಲವು ಮಾರ್ಗಸೂಚಿಗಳನ್ವಯ ಕಾಲೇಜು ಆರಂಭಕ್ಕೆ ಅನುಮತಿ ನೀಡಿದೆ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆರಂಭದ ಕುರಿತು ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಡಿಸೆಂಬರ್ ಅಂತ್ಯದವರೆಗೆ ಶಾಲೆಗಳನ್ನು ತೆರೆಯದಿರುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಡಿಸೆಂಬರ್ 31ರವರೆಗೂ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಮುಂದಿನ ತೀರ್ಮಾನ, ಡಿಸೆಂಬರ್ ಅಂತ್ಯದಲ್ಲಿ ಸಭೆಯನ್ನು ನಡೆಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಹೈದ್ರಾಬಾದ್ ನಲ್ಲಿರುವ ಆರೋಗ್ಯ ಸಚಿವ ಡಾ.ಸುಧಾಕರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಗೆ ಹಾಜರಾಗಿ ಡಿಸೆಂಬರ್ ತಿಂಗಳಲ್ಲಿ ಕೊರೊನಾ ಎರಡನೇ ಅಲೆ ಶುರುವಾಗುವ ಸಾಧ್ಯತೆ ಇದೆ. ಇದು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗ್ತಿದೆ. ನಮ್ಮ ರಾಜ್ಯದ ಹವಾಮಾನದಲ್ಲಿ ಬದಲಾವಣೆ ಆಗುತ್ತಿದೆ. ಈ ಕಾರಣದಿಂದ ಈಗಾಗಲೇ ಚಳಿಗಾಲ ರಂಭವಾಗಿದ್ದು, ತಜ್ಞರು ಕೂಡ ಡಿಸೆಂಬರ್ ವರೆಗೆ ಶಾಲೆ ಬೇಡ ಅಂದಿದ್ದಾರೆ. ಡಿಸೆಂಬರ್ ಕೊನೆಯವರೆಗೂ ಶಾಲಾ ಕಾಲೇಜು ಆರಂಭ ಮಾಡುವುದು ಸೂಕ್ತವಲ್ಲ ಎಂದು ಸುಧಾಕರ್ ತಿಳಿಸಿದರು.

ಆರಮಭದಲ್ಲಿ ಶಾಲೆ ಪ್ರಾರಂಭ ಕುರಿತು ಸಾರ್ವಜನಿಕ ಶಿಕ್ಷಣ ಆಯುಕ್ತ ಅನ್ಬುಕುಮಾರ್ ಸಿದ್ಧಪಡಿಸಿದ ವರದಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಎಂ ಅವರಿಗೆ ಸಲ್ಲಿಸಿದರು. ಸಭೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ಸಿಎಸ್ ವಿಜಯ್ ಭಾಸ್ಕರ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಆರೋಗ್ಯ ಇಲಾಖೆ, ಸಾರಿಗೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

You May Also Like

ಲವ್ ಜಿಹಾದ್ ತಡೆಯಲು ಸರ್ಕಾರ ಹೊಸ ಕಾನೂನು ಜಾರಿಗೊಳಿಸಲು ಮುಂದಾಗಿದೆ – ಬೊಮ್ಮಾಯಿ!

ಬೆಂಗಳೂರು : ಲವ್ ಜಿಹಾದ್ ತೆಯುವುದಕ್ಕಾಗಿ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೊಳಿಸುವ ಚಿಂತನೆ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗದಗ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು ಇಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕು ತಗುಲಿದವರ ಸಂಖ್ಯೆ…

ಏ.10 ರಿಂದ ಈ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ

ಸಾರಿಗೆ ಮುಷ್ಕರ ಹೊತ್ತಲ್ಲೇ ಸರ್ಕಾರ ನೈಟ್‍ಕರ್ಫ್ಯೂ ಜಾರಿ ಮಾಡಿದೆ. ಈ ಮೂಲಕ ಜನಸಾಮಾನ್ಯರಿಗೆ ಏಕಕಾಲಕ್ಕೆ ಎರಡು ಆಘಾತ ಕಾದಿದೆ. ಏ.10 ರಿಂದ ರಾಜ್ಯದ 8 ನಗರಗಳಲ್ಲಿ ನೈಟ್‍ಕರ್ಫ್ಯೂ ಹೇರಲಾಗಿದೆ. ಇತ್ತ ಶನಿವಾರದಿಂದ ಸತತ 4 ದಿನ ರಜೆ ಇರುತ್ತದೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತೀವ್ರ ಸಂಕಷ್ಟ ಎದುರಾಗಿದೆ.

ಕಾರ್ಮಿಕರಿಗೆ ಆಹಾರ ಸಾಮಗ್ರಿ ವಿತರಣೆ

ಲಕ್ಷ್ಮೇಶ್ವರ: ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರ…