ಗದಗ: ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಎಚ್.ವೈ.ರುದ್ರಾಕ್ಷಿ ಹಾಗೂ ಅವರ ವಾಹನ ಚಾಲಕ ಫಕ್ಕೀರಪ್ಪ ಪೂಜಾರ, ಜ್ಯೂಸ್ ಸೆಂಟರ್ ಮಾಲಿಕ ಪ್ರತೀಕ್ ಬೇವಿನಕಟ್ಟಿ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.  

ಬೆಟಗೇರಿಯ ಮಂಜುನಾಥ್ ಸಜ್ಜನ್ ಅವರ ದೂರಿನನ್ವಯ ಇಂದು ದಾಳಿ ನಡೆಸಿದ ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಟಗೇರಿಯ ಮಂಜುನಾಥ್, ತಮ್ಮ 11 ಎಕರೆ ಜಮೀನನ್ನು ನಿಗಮಕ್ಕೆ ಮಾರಾಟ ಮಾಡಿದ್ದರು. ಹೀಗಾಗಿ ನಿಗಮದಿಂದ ಮಂಜುನಾಥ್ ಅವರಿಗೆ 12,57,500 ರೂ, ಮಂಜೂರು ಮಾಡಬೇಕಿತ್ತು. ಹಣ ಮಂಜೂರು ಮಾಡಲು ಅಧಿಕಾರಿ 40,000 ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಈ ವಿಚಾರವಾಗಿ ಇಂದು 40,000 ಹಣ ಕೊಡಲು ಮಂಜುನಾಥ್ ಹೋದಾಗ ತಮ್ಮ ಕಾರು ಚಾಲಕನ ಬಳಿ ಕೊಡಲು ಹೇಳಿದ್ದಾರೆ. ಆದರೆ ಕಾರು ಚಾಲಕ ಜ್ಯೂಸ್ ಸೆಂಟರ್ ಮಾಲಿಕನ ಬಳಿ ಕೊಡಲು ಹೇಳಿದ್ದಾನೆ. ಕೊನೆಗೆ ಜ್ಯೂಸ್ ಸೆಂಟರ್ ಮಾಲಿಕ ಪ್ರತೀಕ ಹಣ ಪಡೆಯುವಾಗ ಸಿಕ್ಕಿ ಬಿದ್ದಿದ್ದಾನೆ.  

ಎಸಿಬಿ ಡಿಎಸ್ಪಿ ವಾಸುದೇವ್ ರಾಮ್ ಎನ್ ನೇತೃತ್ವದಲ್ಲಿ, ವಾಯ್.ಎಸ್.ಧರಣಾನಾಯ್ಕ್, ರವೀಂದ್ರ ಕುರಬಗಟ್ಟಿ, ಎಮ್.ಎಮ್ ಅಯ್ಯನಗೌಡರ್, ಆರ್.ಎಚ್.ಹೆಬಸೂರು, ಎನ್.ಎಸ್.ತಾಯಣ್ಣವರ, ವೀರೇಶ್ ಜೋಳದ, ಐ.ಸಿ.ಕರಿಗಾರ, ತಾರಪ್ಪ ಕಾರ್ಯಾಚರಣೆಯಲ್ಲಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ

ಇಂದು ರಾಜ್ಯಾದ್ಯಂತ ವಿಧಾನಸಭಾ ಚುನಾವಣೆಗೆ ಮತದಾನ ಶರುವಾಗಿದ್ದು ಗದಗ ಜಿಲ್ವಿಲೆಯಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಶೇಕಡಾವಾರು…

ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡ ಕಿಲಾಡಿ ಮಹಿಳೆ, ಮಾಡಿದ್ದೇನು?

ಅಹಮದಾಬಾದ್ : ಸಾಮಾಜಿಕ ಜಾಲತಾಣದ ಮೂಲಕ ಉದ್ಯಮಿಯೊಬ್ಬರನ್ನು ಪರಿಚಯ ಮಾಡಿಕೊಂಡಿದ್ದ ಮಹಿಳೆಯೊಬ್ಬರು ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಹಸಿರು ಮತ್ತು ಕೆಂಪು ವರ್ಣಗಳು ಸಿಡಿದ್ದೆದ್ದರೆ ಸರ್ಕಾರಕ್ಕೆ ಉಳಿಗಾಲವಿಲ್ಲ: ಪೀರು ರಾಠೋಡ್

ರೈತರು ಮತ್ತು ಕಾರ್ಮಿಕರ ಶಕ್ತಿಯನ್ನು ಈ ಸರ್ಕಾರಕ್ಕೆ ತೋರಿಸಬೇಕಾಗುತ್ತದೆ. ಹಸಿರು ಬಣ್ಣದ ಸಂಕೇತ ಹೊಂದಿರುವ ರೈತರು, ಕೆಂಪು ಬಣ್ಣದ ಸಂಕೇತ ಹೊಂದಿರುವ ಕಾರ್ಮಿಕರ ಶಕ್ತಿ ಒಂದಾದರೆ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಕಾರ್ಮಿಕ ಮುಖಂಡ ಪೀರು ರಾಠೋಡ ಆಕ್ರೋಶ ವ್ಯಕ್ತಪಡಿಸಿದರು.