ಗದಗ: ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಎಚ್.ವೈ.ರುದ್ರಾಕ್ಷಿ ಹಾಗೂ ಅವರ ವಾಹನ ಚಾಲಕ ಫಕ್ಕೀರಪ್ಪ ಪೂಜಾರ, ಜ್ಯೂಸ್ ಸೆಂಟರ್ ಮಾಲಿಕ ಪ್ರತೀಕ್ ಬೇವಿನಕಟ್ಟಿ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.  

ಬೆಟಗೇರಿಯ ಮಂಜುನಾಥ್ ಸಜ್ಜನ್ ಅವರ ದೂರಿನನ್ವಯ ಇಂದು ದಾಳಿ ನಡೆಸಿದ ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಟಗೇರಿಯ ಮಂಜುನಾಥ್, ತಮ್ಮ 11 ಎಕರೆ ಜಮೀನನ್ನು ನಿಗಮಕ್ಕೆ ಮಾರಾಟ ಮಾಡಿದ್ದರು. ಹೀಗಾಗಿ ನಿಗಮದಿಂದ ಮಂಜುನಾಥ್ ಅವರಿಗೆ 12,57,500 ರೂ, ಮಂಜೂರು ಮಾಡಬೇಕಿತ್ತು. ಹಣ ಮಂಜೂರು ಮಾಡಲು ಅಧಿಕಾರಿ 40,000 ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಈ ವಿಚಾರವಾಗಿ ಇಂದು 40,000 ಹಣ ಕೊಡಲು ಮಂಜುನಾಥ್ ಹೋದಾಗ ತಮ್ಮ ಕಾರು ಚಾಲಕನ ಬಳಿ ಕೊಡಲು ಹೇಳಿದ್ದಾರೆ. ಆದರೆ ಕಾರು ಚಾಲಕ ಜ್ಯೂಸ್ ಸೆಂಟರ್ ಮಾಲಿಕನ ಬಳಿ ಕೊಡಲು ಹೇಳಿದ್ದಾನೆ. ಕೊನೆಗೆ ಜ್ಯೂಸ್ ಸೆಂಟರ್ ಮಾಲಿಕ ಪ್ರತೀಕ ಹಣ ಪಡೆಯುವಾಗ ಸಿಕ್ಕಿ ಬಿದ್ದಿದ್ದಾನೆ.  

ಎಸಿಬಿ ಡಿಎಸ್ಪಿ ವಾಸುದೇವ್ ರಾಮ್ ಎನ್ ನೇತೃತ್ವದಲ್ಲಿ, ವಾಯ್.ಎಸ್.ಧರಣಾನಾಯ್ಕ್, ರವೀಂದ್ರ ಕುರಬಗಟ್ಟಿ, ಎಮ್.ಎಮ್ ಅಯ್ಯನಗೌಡರ್, ಆರ್.ಎಚ್.ಹೆಬಸೂರು, ಎನ್.ಎಸ್.ತಾಯಣ್ಣವರ, ವೀರೇಶ್ ಜೋಳದ, ಐ.ಸಿ.ಕರಿಗಾರ, ತಾರಪ್ಪ ಕಾರ್ಯಾಚರಣೆಯಲ್ಲಿದ್ದರು.

Leave a Reply

Your email address will not be published. Required fields are marked *

You May Also Like

ವಿಶಪ್ರಾಶನದಿಂದ 62 ಕುರಿಗಳ ಸಾವು

ಗದಗ: ವಿಷಪ್ರಾಶನದಿಂದ 62 ಕುರಿಗಳ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರೇಗಲ್ ನ ಸುಣಗಾರ ಕೆರೆ…

ಪಾಸಿಟಿವಿಟಿ ದರ ಹೆಚ್ಚಿದ್ದಲ್ಲಿ ವಿಶೇಷ ನಿಗಾ ವಹಿಸಿ

ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಜನರು ಸೋಂಕು ತೆಡೆಗಟ್ಟುವಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ ಕೆ ಅವರು ತಿಳಿಸಿದ್ದಾರೆ.

ರೋಜಗಾರ್ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಛಬ್ಬಿ ತಾಂಡ ಹಾಗೂ ಗುಡ್ಡದಪೂರ ಮತ್ತು ರಣತೂರ ಗ್ರಾ.ಪಂ ವ್ಯಾಪ್ತಿಯ ದೇವಿಹಾಳ ತಾಂಡಾಗಳಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ತಾಂಡಾ ರೋಜಗಾರ್ ಮಿತ್ರ ಆಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸುದ್ದಿಗೆ ತೆರಳಿದ ಪತ್ರಕರ್ತನಿಗೆ ತಹಶೀಲ್ದಾರ ಆವಾಜ್!: ಗಜೇಂದ್ರಗಡ ತಹಶೀಲ್ದಾರರಿಂದ ಮಾದ್ಯಮ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ!

ಜನರಿಗೆ ಸಮಸ್ಯೆಗಳೇನೆ ಇರಲಿ ಪತ್ರಕರ್ತ ತಹಶೀಲ್ದಾರರ ಪರ್ಮಿಷನ್ ಇಲ್ಲದೇ ಚಿತ್ರಿಕರಿಸುವ ಹಾಗಿಲ್ಲ. ಜನ ಸಮಸ್ಯೆ ಹೇಳಿಕೊಂಡು ಬಂದಾಗಲೂ ಸಾರ್ವಜನಿಕ ಸರ್ಕಾರಿ ಕಚೇರಿಯಲ್ಲಿ ಪತ್ರಕರ್ತನಿಗೆ ಪ್ರವೇಶ ಇಲ್ವಂತೆ! ಇದು ಗದಗ ಜಿಲ್ಲೆ ಗಜೇಂದ್ರಗಡ ತಹಶೀಲ್ದಾರ ಅಶೋಕ ಕಲಘಟಗಿ ಅವರ ರೂಲ್ಸ್.