ಬೆಂಗಳೂರು : ಲಾಕ್ ಡೌನ್ ಹಿನ್ನೆಲೆ ಈಗಾಗಲೇ ಅದೆಷ್ಟೋ ಜನರು ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ. ಕೆಲವರು ಆರ್ಥಿಕ ಸ್ಥಿತಿಯಿಂದ ಸರ್ಕಾರಿ ಶಾಲೆಗಳತ್ತ ಮುಖ ಮಾಡಿದರೆ ಇನ್ನು ಕೆಲವರು ಹೇಗಾದರೂ ಮಾಡಿ ಖಾಸಗಿ ಶಾಲೆಯಲ್ಲಿಯೇ ನಮ್ಮ ಮಕ್ಕಳನ್ನು ಓದಿಸಬೇಕು ಅಂತ ಮಕ್ಕಳ ಶಿಕ್ಷಣದ ಬಗ್ಗೆ ಯೋಚಿಸುತ್ತಿದ್ದಾರೆ.
ಈ ಮದ್ಯೆ ಖಾಸಗಿ ಶಾಲೆಗಳು ವರ್ಷದ ಫೀ ಕಟ್ಟುವಂತೆ ಪಾಲಕರಿಗೆ ಹೇಳುತ್ತಿವೆ. ಆದರೆ ಬಹುತೇಕ ಪಾಲಕರು ಕಾಲಾವಕಾಶ ಕೇಳುತ್ತಿದ್ದು, ಫೀ ಕಟ್ಟದಿದ್ರೆ ನಿಮ್ಮ ಮಕ್ಕಳನ್ನು ಅನುತ್ತೀರ್ಣ ಮಾಡುವುದಾಗಿ ಖಾಸಗಿ ಶಾಲಾ ಸಂಸ್ಥೆಗಳು ಹೇಳುತ್ತಿವೆ ಎನ್ನುವ ಆರೋಪ ಕೇಳಿ ಬಂದಿತ್ತು.
ಶುಲ್ಕ ಕಟ್ಟದ ಕಾರಣಕ್ಕೆ ಅನುತ್ತೀರ್ಣಗೊಳಿಸಲು ಸಾಧ್ಯವಿಲ್ಲ ಈ ಬಗ್ಗೆ ಸರ್ಕಾರ ಒಂದು ನಿರ್ಧಾರಕ್ಕೆ ಬರುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಸಚಿವರ ಈ ಹೇಳಿಕೆ ಪಾಲಕರಲ್ಲಿ ನಿರೀಕ್ಷೆ ಹಾಗೂ ಸಂತಸ ಮೂಡಿಸಿದೆ.