ಬೆಂಗಳೂರು : ಲಾಕ್ ಡೌನ್ ಹಿನ್ನೆಲೆ ಈಗಾಗಲೇ ಅದೆಷ್ಟೋ ಜನರು ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ. ಕೆಲವರು ಆರ್ಥಿಕ ಸ್ಥಿತಿಯಿಂದ ಸರ್ಕಾರಿ ಶಾಲೆಗಳತ್ತ ಮುಖ ಮಾಡಿದರೆ ಇನ್ನು ಕೆಲವರು ಹೇಗಾದರೂ ಮಾಡಿ ಖಾಸಗಿ ಶಾಲೆಯಲ್ಲಿಯೇ ನಮ್ಮ ಮಕ್ಕಳನ್ನು ಓದಿಸಬೇಕು ಅಂತ ಮಕ್ಕಳ ಶಿಕ್ಷಣದ ಬಗ್ಗೆ ಯೋಚಿಸುತ್ತಿದ್ದಾರೆ.

ಈ ಮದ್ಯೆ ಖಾಸಗಿ ಶಾಲೆಗಳು ವರ್ಷದ ಫೀ ಕಟ್ಟುವಂತೆ ಪಾಲಕರಿಗೆ ಹೇಳುತ್ತಿವೆ. ಆದರೆ ಬಹುತೇಕ ಪಾಲಕರು ಕಾಲಾವಕಾಶ ಕೇಳುತ್ತಿದ್ದು, ಫೀ ಕಟ್ಟದಿದ್ರೆ ನಿಮ್ಮ ಮಕ್ಕಳನ್ನು ಅನುತ್ತೀರ್ಣ ಮಾಡುವುದಾಗಿ ಖಾಸಗಿ ಶಾಲಾ ಸಂಸ್ಥೆಗಳು ಹೇಳುತ್ತಿವೆ ಎನ್ನುವ ಆರೋಪ ಕೇಳಿ ಬಂದಿತ್ತು.

ಶುಲ್ಕ ಕಟ್ಟದ ಕಾರಣಕ್ಕೆ ಅನುತ್ತೀರ್ಣಗೊಳಿಸಲು ಸಾಧ್ಯವಿಲ್ಲ ಈ ಬಗ್ಗೆ ಸರ್ಕಾರ ಒಂದು ನಿರ್ಧಾರಕ್ಕೆ ಬರುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸಚಿವರ ಈ ಹೇಳಿಕೆ ಪಾಲಕರಲ್ಲಿ ನಿರೀಕ್ಷೆ ಹಾಗೂ ಸಂತಸ ಮೂಡಿಸಿದೆ.

Leave a Reply

Your email address will not be published. Required fields are marked *

You May Also Like

ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಗದಗ ಆಗಮಿಸಿದ ಸಿ ಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನುಹಮ್ಮಿಕೋಂಡಿದ್ದ ಸಿ ಎಂ ಬಸವರಾಜ ಬೊಮ್ಮಾಯಿಯವರು ಇಂದು ಗದಗ…

ಪೋಲಿಸ್ ದಾಳಿ : ಕಲ್ಲುಗಣಿ ಸ್ಪೋಟಕ ವಸ್ತುಗಳು ವಶಕ್ಕೆ, ಓರ್ವನ ಬಂಧನ

ಮುಳಗುಂದ ಸಮೀಪದ ಶೀತಾಲಹರಿ ಗ್ರಾಮದ ಹೊರವಲಯದ ಶೆಡ್ಡವೊಂದರ ಮೇಲೆ ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತನವರ ನೇತೃತ್ವದ ತಂಡ ದಾಳಿ ನಡೆಸಿ ಅಪಾರ ಪ್ರಮಾಣದ ಸ್ಪೋಟಕ ವಸ್ತುಗಳು ಸೇರಿದಂತೆ ಓರ್ವ ವ್ಯಕ್ತಿಯನ್ನ ವಶಕ್ಕೆ ಪಡೆದಿರುವ ಘಟನೆ ಗುರುವಾರ ನಡೆದಿದೆ.

ಬಿಜೆಪಿ ಸರ್ಕಾರದ ವಿರುದ್ಧ ಶಾಸಕ ಎಚ್.ಕೆ.ಪಾಟೀಲ್ ಕಿಡಿ

ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಗಲಾಟೆ, ಹೊಡೆದಾಟ, ಗೊಂದಲಗಳೇ ತುಂಬಿವೆ. ಬಿಜೆಪಿ ಸರ್ಕಾರಕ್ಕೆ ಅಥವಾ ಪಕ್ಷದವರಿಗೆ ಜನರ ಹಿತದ ಕಡೆ ಗಮನವೇ ಇಲ್ಲ ಎಂಬುವುದಕ್ಕೆ ಅವರ ರಾಜಕೀಯ ಕಿತ್ತಾಟಗಳೇ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಎಚ್.ಕೆ.ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.

ಸುಕ್ಕಾ ಹೊಡದ್ ಒಂಚೂರು ಉಪ್ಪಿನಕಾಯಿ ಒಳಗೋದ ಕೂಡ್ಲೆ ಏನಾತಂತೀರಿ…!

ಹೊಗ್ಗೋ ನಿನ್ನ ತಲಿ ದಿಮ್ ಹಿಡದಂಗಾಗಿ ಹ್ಯಂಗ್ಯಂಗರ ಮಾತಾಡಾಕತ್ತಿನಿ ಅನಸಾಕತ್ತೈತಿ ನಂಗ. ಅಯ್ಯೋ ನಂಗು ಹಂಗಾ ಅನಾಸಾಕತ್ತೈತಿ. ತಲಿ ದಿಮ್ಮಿನ ವಿಷಯ ಹೋಗ್ಲಿ ಹ್ಯಾಂಗಿತ್ತು ಮೊದಲ ದಿನದ ಅನುಭವ….!