ಲಕ್ಷ್ಮೇಶ್ವರ: ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೊಧ ನೀತಿ ಖಂಡಿಸಿ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ವಿವಿಧ ಕಾರ್ಮಿಕ ಹಾಗೂ ರೈತಪರ ಮತ್ತು ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪಟ್ಟದ ತಹಶಿಲ್ದಾರರ ಕಚೇರಿ ಎದುರಿಗೆ ಅಂಗನವಾಡಿ, ಬಿಸಿಯೂಟ ತಯಾರಕರು, ಅಂಚೇ ಕಚೇರಿ ಹಾಗೂ  ಪಂಚಾಯತ್ ನೌಕರರು ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯತಿ ನೌಕರರಿಗೆ ಮಾರ್ಚ 2018ರಿಂದ ವಾರ್ಷಿಕವಾಗಿ 4 ತಿಂಗಳ ವೇತನ ನೀಡುತ್ತಿಲ್ಲ. ವಾರ್ಷಿಕ ರೂ.382 ಕೋಟಿ ಬಾಕಿ ವೇತನ ಬಿಡುಗೆಗಾಗಿ ಒತ್ತಾಯಿಸಿ. ಕೇಂದ್ರ ಸರ್ಕಾರ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಶೇ.95 ರಷ್ಟು ಅನುದಾನ ಕಡಿತ ಮಾಡಿದ್ದು ಖಂಡನೀಯ ಎಂದು ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಡಿಇಒ ಗಳಿಗೆ ಬಡ್ತಿ ಮತ್ತು ಅನುಮೋದನೆಗಾಗಿ ಪಂಪ್ ಆಪರೇಟರ್ ಕೆಲಸದ ಪುನರ್ ವಿಮರ್ಶೆ ವರದಿ ರದ್ದಿಗಾಗಿದ್ದು, ಆದಾಯ ತೆರಿಗೆ ವ್ಯಾಪ್ತಿ ಹೊರಗಿರುವ ಕುಟುಂಬಗಳಿಗೆ ರೂ.7500 ನಗದು ನೀಡಬೇಕು ಎಂದು ಒತ್ತಾಯಿಸಿದರು. ಸಾವಿತ್ರಿ ಬಡ್ನಿ, ಚಂದ್ರಮತಿ ಶಿರಹಟ್ಟಿ, ದ್ಯಾಮಕ್ಕ ಹರಿಜನ, ವಿಜಯಲಕ್ಷ್ಮಿ ಬಡಿಗೇರ, ರಜಿಮಾ ನಧಾಪ, ಗಿರಿಜಾ ಗಾಡದ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಕ್ವಾರಂಟೈನ್ ನಲ್ಲಿದ್ದ ಮೂವರು ಪರಾರಿ..!

ಕ್ವಾರೆಂಟೈನಲ್ಲಿದ್ದ ಮೂವರು ಪರಾರಿಯಾದ ಘಟನೆ ಮಸ್ಕಿಯಲ್ಲಿ ನಡೆದಿದೆ. ಇಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ವಾರಂಟೈನ್ ಮಾಡಲಾಗಿದ್ದವರ ಪೈಕಿ ಮೂರು ಜನ ತಪ್ಪಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಕೊರೋನಾ ಸೋಂಕಿತರ ಸಂಖ್ಯೆ ಬಹಿರಂಗಕ್ಕೂ ಮೀನಾಮೇಷವೇ..?

ಲಾಕ್ ಡೌನ್ ಸಡಿಲಿಕೆಯಿಂದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸೋಂಕಿತರ ಸಂಖ್ಯೆಯಿಂದಾಗಿ ಕೇಂದ್ರ ಸರ್ಕಾರ ಅಂಕಿಸಂಖ್ಯೆಯನ್ನು ಬಹಿರಂಗ ಪಡಿಸಲು ಮೀನಾಮೇಷ ಎಣಿಸುತ್ತಿದೆಯೇ? ಎಂಬ ಪ್ರಶ್ನೆ ಉದ್ಭವವಾಗಿದೆ.

ಆಡಿಯೋ ಕ್ಲಿಪ್ ಲೀಕ್ ಮಾಡಿದ್ದು ನಾನಲ್ಲ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಮತ್ತು ನವರಸನಾಯಕ ಜಗ್ಗೇಶ್ ನಡುವಿನ ವಾಗ್ವಾದ ತಾರಕಕ್ಕೇರಿದೆ. ಇದಕ್ಕೆಲ್ಲ ಕಾರಣವಾಗಿದ್ದು ಒಂದು ಆಡಿಯೋ ಕ್ಲಿಪ್.

ಬೆಟ್ಟದ ಹೂವಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ

ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೊಷಿಸಿದ್ದಾರೆ.ಇಂದು ಅರಮನೆ ಮೈದಾನದಲ್ಲಿ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಈ ಘೊಷಣೆ ಮಾಡಿದ್ದಾರೆ