ಲಕ್ಷ್ಮೇಶ್ವರ: ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೊಧ ನೀತಿ ಖಂಡಿಸಿ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ವಿವಿಧ ಕಾರ್ಮಿಕ ಹಾಗೂ ರೈತಪರ ಮತ್ತು ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪಟ್ಟದ ತಹಶಿಲ್ದಾರರ ಕಚೇರಿ ಎದುರಿಗೆ ಅಂಗನವಾಡಿ, ಬಿಸಿಯೂಟ ತಯಾರಕರು, ಅಂಚೇ ಕಚೇರಿ ಹಾಗೂ  ಪಂಚಾಯತ್ ನೌಕರರು ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯತಿ ನೌಕರರಿಗೆ ಮಾರ್ಚ 2018ರಿಂದ ವಾರ್ಷಿಕವಾಗಿ 4 ತಿಂಗಳ ವೇತನ ನೀಡುತ್ತಿಲ್ಲ. ವಾರ್ಷಿಕ ರೂ.382 ಕೋಟಿ ಬಾಕಿ ವೇತನ ಬಿಡುಗೆಗಾಗಿ ಒತ್ತಾಯಿಸಿ. ಕೇಂದ್ರ ಸರ್ಕಾರ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಶೇ.95 ರಷ್ಟು ಅನುದಾನ ಕಡಿತ ಮಾಡಿದ್ದು ಖಂಡನೀಯ ಎಂದು ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಡಿಇಒ ಗಳಿಗೆ ಬಡ್ತಿ ಮತ್ತು ಅನುಮೋದನೆಗಾಗಿ ಪಂಪ್ ಆಪರೇಟರ್ ಕೆಲಸದ ಪುನರ್ ವಿಮರ್ಶೆ ವರದಿ ರದ್ದಿಗಾಗಿದ್ದು, ಆದಾಯ ತೆರಿಗೆ ವ್ಯಾಪ್ತಿ ಹೊರಗಿರುವ ಕುಟುಂಬಗಳಿಗೆ ರೂ.7500 ನಗದು ನೀಡಬೇಕು ಎಂದು ಒತ್ತಾಯಿಸಿದರು. ಸಾವಿತ್ರಿ ಬಡ್ನಿ, ಚಂದ್ರಮತಿ ಶಿರಹಟ್ಟಿ, ದ್ಯಾಮಕ್ಕ ಹರಿಜನ, ವಿಜಯಲಕ್ಷ್ಮಿ ಬಡಿಗೇರ, ರಜಿಮಾ ನಧಾಪ, ಗಿರಿಜಾ ಗಾಡದ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 1843 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 1843 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 25317…

ನ.30ಕ್ಕೆ ಗಾಣಿಗ ಸಮುದಾಯ ಭವನದ ಲೋಕಾರ್ಪಣೆ

ಹಾತಲಗೇರಿ ನಾಕಾ ಬಳಿ ವಿವೇಕಾನಂದ ನಗರದಲ್ಲಿ ನೂತನವಾಗಿ ನಿರ್ಮಿಸಿದ ಗಾನಿಗ ಸಮಾಜದ ಸಮುದಾಯ ಭವನ ನ.30 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಗಾಣಿಗ ಸಮುದಾಯ ಭವನ ಕಟ್ಟಡ ಕಾರ್ಯಕಾರಣಿ ಸಮಿತಿ ಅಧ್ಯಕ್ಷ ನಿಂಗಪ್ಪ ಕೆಂಗಾರ ಹೇಳಿದರು.

ಸೋಂಕು ಉಲ್ಬಣ: ಬೆಂಗಳೂರಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್!

ಜುಲೈ 14ರಿಂದ 7 ದಿನ ಕಾಲ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಡಾಂಬರೀಕರಣಕ್ಕೆ ಶಾಸಕ ರಾಮಣ್ಣ ಚಾಲನೆ

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಹಾದು ಹೋಗುವ ಕಾರವಾರ-ಇಳಕಲ್ ರಾಜ್ಯ ಹೆದ್ದಾರಿ 06 ರಲ್ಲಿ ಮಳೆಯಿಂದ ಹಾನಿಗೀಡಾದ ಸುಮಾರು…