ಕಾರ್ಮಿಕರ ಮುಷ್ಕರ ಹಿನ್ನೆಲೆ ಲಕ್ಷ್ಮೇಶ್ವರದಲ್ಲಿ ಪ್ರತಿಭಟನೆ

laxmeshwar protest labour

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೊಧ ನೀತಿ ಖಂಡಿಸಿ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ವಿವಿಧ ಕಾರ್ಮಿಕ ಹಾಗೂ ರೈತಪರ ಮತ್ತು ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಲಕ್ಷ್ಮೇಶ್ವರ: ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೊಧ ನೀತಿ ಖಂಡಿಸಿ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ವಿವಿಧ ಕಾರ್ಮಿಕ ಹಾಗೂ ರೈತಪರ ಮತ್ತು ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪಟ್ಟದ ತಹಶಿಲ್ದಾರರ ಕಚೇರಿ ಎದುರಿಗೆ ಅಂಗನವಾಡಿ, ಬಿಸಿಯೂಟ ತಯಾರಕರು, ಅಂಚೇ ಕಚೇರಿ ಹಾಗೂ  ಪಂಚಾಯತ್ ನೌಕರರು ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯತಿ ನೌಕರರಿಗೆ ಮಾರ್ಚ 2018ರಿಂದ ವಾರ್ಷಿಕವಾಗಿ 4 ತಿಂಗಳ ವೇತನ ನೀಡುತ್ತಿಲ್ಲ. ವಾರ್ಷಿಕ ರೂ.382 ಕೋಟಿ ಬಾಕಿ ವೇತನ ಬಿಡುಗೆಗಾಗಿ ಒತ್ತಾಯಿಸಿ. ಕೇಂದ್ರ ಸರ್ಕಾರ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಶೇ.95 ರಷ್ಟು ಅನುದಾನ ಕಡಿತ ಮಾಡಿದ್ದು ಖಂಡನೀಯ ಎಂದು ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಡಿಇಒ ಗಳಿಗೆ ಬಡ್ತಿ ಮತ್ತು ಅನುಮೋದನೆಗಾಗಿ ಪಂಪ್ ಆಪರೇಟರ್ ಕೆಲಸದ ಪುನರ್ ವಿಮರ್ಶೆ ವರದಿ ರದ್ದಿಗಾಗಿದ್ದು, ಆದಾಯ ತೆರಿಗೆ ವ್ಯಾಪ್ತಿ ಹೊರಗಿರುವ ಕುಟುಂಬಗಳಿಗೆ ರೂ.7500 ನಗದು ನೀಡಬೇಕು ಎಂದು ಒತ್ತಾಯಿಸಿದರು. ಸಾವಿತ್ರಿ ಬಡ್ನಿ, ಚಂದ್ರಮತಿ ಶಿರಹಟ್ಟಿ, ದ್ಯಾಮಕ್ಕ ಹರಿಜನ, ವಿಜಯಲಕ್ಷ್ಮಿ ಬಡಿಗೇರ, ರಜಿಮಾ ನಧಾಪ, ಗಿರಿಜಾ ಗಾಡದ ಸೇರಿದಂತೆ ಅನೇಕರು ಇದ್ದರು.

Exit mobile version