ಲಕ್ಷ್ಮೇಶ್ವರ: ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೊಧ ನೀತಿ ಖಂಡಿಸಿ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ವಿವಿಧ ಕಾರ್ಮಿಕ ಹಾಗೂ ರೈತಪರ ಮತ್ತು ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪಟ್ಟದ ತಹಶಿಲ್ದಾರರ ಕಚೇರಿ ಎದುರಿಗೆ ಅಂಗನವಾಡಿ, ಬಿಸಿಯೂಟ ತಯಾರಕರು, ಅಂಚೇ ಕಚೇರಿ ಹಾಗೂ  ಪಂಚಾಯತ್ ನೌಕರರು ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯತಿ ನೌಕರರಿಗೆ ಮಾರ್ಚ 2018ರಿಂದ ವಾರ್ಷಿಕವಾಗಿ 4 ತಿಂಗಳ ವೇತನ ನೀಡುತ್ತಿಲ್ಲ. ವಾರ್ಷಿಕ ರೂ.382 ಕೋಟಿ ಬಾಕಿ ವೇತನ ಬಿಡುಗೆಗಾಗಿ ಒತ್ತಾಯಿಸಿ. ಕೇಂದ್ರ ಸರ್ಕಾರ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಶೇ.95 ರಷ್ಟು ಅನುದಾನ ಕಡಿತ ಮಾಡಿದ್ದು ಖಂಡನೀಯ ಎಂದು ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಡಿಇಒ ಗಳಿಗೆ ಬಡ್ತಿ ಮತ್ತು ಅನುಮೋದನೆಗಾಗಿ ಪಂಪ್ ಆಪರೇಟರ್ ಕೆಲಸದ ಪುನರ್ ವಿಮರ್ಶೆ ವರದಿ ರದ್ದಿಗಾಗಿದ್ದು, ಆದಾಯ ತೆರಿಗೆ ವ್ಯಾಪ್ತಿ ಹೊರಗಿರುವ ಕುಟುಂಬಗಳಿಗೆ ರೂ.7500 ನಗದು ನೀಡಬೇಕು ಎಂದು ಒತ್ತಾಯಿಸಿದರು. ಸಾವಿತ್ರಿ ಬಡ್ನಿ, ಚಂದ್ರಮತಿ ಶಿರಹಟ್ಟಿ, ದ್ಯಾಮಕ್ಕ ಹರಿಜನ, ವಿಜಯಲಕ್ಷ್ಮಿ ಬಡಿಗೇರ, ರಜಿಮಾ ನಧಾಪ, ಗಿರಿಜಾ ಗಾಡದ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಭಾರತದಲ್ಲಿ ಒಂದೇ ದಿನ ಸೋಂಕು ಕಾಣಿಸಿಕೊಂಡಿದ್ದು ಎಷ್ಟು ಜನರಿಗೆ ಗೊತ್ತಾ?

ಭಾರತದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ನಿರೀಕ್ಷೆ ಮೀರಿ ದಾಖಲಾಗುತ್ತಿದೆ. ಭಾನುವಾರ ಒಂದೇ ದಿನ ದೇಶದಲ್ಲಿ 4,296 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 111 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಹೆಚ್ಚು ಮದ್ಯ ಕುಡಿದಿದ್ದಾನೆ ಎಂಬ ಕಾರಣಕ್ಕೆ ಕೊಲೆ!

ತಮಗಿಂತ ಹೆಚ್ಚು ಮದ್ಯ ಸೇವನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಗೆಳೆಯನನ್ನೇ ಕೊಲೆ ಮಾಡಿರುವ ಘಟನೆ ಇಲ್ಲಿಯ ಆರ್.ಟಿ. ನಗರದಲ್ಲಿ ನಡೆದಿದೆ.

ಗೇಮ್ಸ್ – ಗ್ರೌಂಡ್ ನಾಲೆಡ್ಜ್ ಮಕ್ಕಳಿಗೆ ಕೊಡಿ- ಎಂ.ವಿ.ಹಿರೇಮಠ

ಉತ್ತರಪ್ರಭ ಸುದ್ದಿ ಬಸವನ ಬಾಗೇವಾಡಿ: ಇಂದಿನ ಸ್ಪಧಾ೯ತ್ಮಕ ಯುಗದ ಆಟೋಟಗಳ್ಲಿ ಶಾಲಾ ಮಕ್ಕಳನ್ನು ಸಕ್ರಿಯವಾಗಿ ಭಾಗವಹಿಸುವಂತೆ…

ಗುಂಡು ಮೈ ಒಳಗೆ ಹೋದರೂ ಪ್ರಜ್ಞೆ ತಪ್ಪದ ರೈ!: ಮುತ್ತಪ್ಪ ರೈ ಬದುಕಿನ ಪ್ರಮುಖ ಘಟನೆಗಳ ಮೆಲಕು

ಭೂಗತ ಲೋಕವನ್ನಾಳಿದ ವ್ಯಕ್ತಿಯ ಕಥೆಯಿದು. ಸದ್ಯ ಭೂಗತ ಲೋಕದಿಂದ ನಿವೃತ್ತಿ ಹೊಂದಿದರೂ ಕೂಡ ಮುತ್ತಪ್ಪ ರೈ ಹೆಸರು ಮಾತ್ರ ಚಾಲ್ತಿಯಲ್ಲಿಯೇ ಇತ್ತು. ಮಾಜಿ ಡಾನ್ ಮುತ್ತಪ್ಪ ರೈ ಜೀವನದಲ್ಲಿ ನಡೆದ ಕೆಲವು ಪ್ರಮುಖ ಘಟನೆಗಳ ಮೆಲಕು ಇಲ್ಲಿದೆ ನೋಡಿ..