ಬೆಂಗಳೂರು: 450 ರೂಪಾಯಿ ಪಾವತಿಸಿದರೆ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆ ತಿರುವಾಂಕೂರು ದೇವಸ್ಥಾನ ಮಂಡಳಿಯೊಂದಿಗೆ ಈ ಬಗ್ಗೆ ಒಪ್ಪಂದ ಮಾಡಿಕೊಂಡಿದೆ. ಸ್ಪೀಡ್ ಪೋಸ್ಟ್ ಮೂಲಕ ದೇಶಾದ್ಯಂತ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಿದೆ.

ಆರವಣ, ತುಪ್ಪ, ಅರಿಶಿನ – ಕುಂಕುಮ, ವಿಭೂತಿ ಮತ್ತು ಅರ್ಚನೆಯ ಪ್ರಸಾದವನ್ನು ಒಳಗೊಂಡ ಕಿಟ್ ಗೆ 450 ರೂಪಾಯಿ ನಿಗದಿಪಡಿಸಲಾಗಿದೆ. ಭಕ್ತರು ಪೋಸ್ಟ್ ಆಫೀಸ್ ಗೆ ಭೇಟಿ ನೀಡಿ 450 ರೂಪಾಯಿ ಪಾವತಿಸಿ ಅಯ್ಯಪ್ಪ ಸ್ವಾಮಿ ಪ್ರಸಾದ ಬುಕ್ ಮಾಡಿದಲ್ಲಿ ಮನೆ ಬಾಗಿಲಿಗೆ ಪ್ರಸಾದ ತಲುಪಿಸಲಾಗುವುದು ಎಂದು ಹೇಳಲಾಗಿದೆ.

ಈ ಮೂಲಕ ಕೊರೊನಾದ ಈ ಸಮಯದಲ್ಲಿ ಈ ಬಾರಿ ಅಯ್ಯಪ್ಪಸ್ವಾಮಿ ಪ್ರಸಾದ ಸಿಗುತ್ತಿಲ್ಲವಲ್ಲಾ ಎನ್ನುವ ಕೊರಗು ದೂರವಾದಂತಾಗಿದೆ.

Leave a Reply

Your email address will not be published. Required fields are marked *

You May Also Like

ಶನಿವಾರವೂ ಶಿಕ್ಷಣ ಇಲಾಖೆಗೆ ರಜೆ

ಎರಡು ಮತ್ತು ನಾಲ್ಕನೇ ಶನಿವಾರ ಮಾತ್ರ ಶಿಕ್ಷಣ ಇಲಾಖೆ ನೌಕರರಿಗೆ ರಜೆ ಘೋಶಿಸಲಾಗಿತ್ತು. ಆದರೆ ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ತಿಂಗಳ ಎಲ್ಲ ಶನಿವಾರವೂ ರಜೆ ಘೋಷಣೆ ಮಾಡಿದೆ.

ಬೀದಿ ಬದಿ ವ್ಯಾಪಾರಸ್ಥರು ಕಡ್ಡಾಯವಾಗಿ ಲಸಿಕೆ ಪಡೆಯಲು ಮುಂದಾಗಬೇಕು : ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ

ಮಹಾಮಾರಿ ಕೊರೊನಾ ಹೊಡೆದೊಡಿಸುವ ಉದ್ದೇಶದಿಂದ ಬೀದಿ ಬದಿ ವ್ಯಾಪಾರಸ್ಥರು ಕಡ್ಡಾಯವಾಗಿ ಲಸಿಕೆ ಪಡೆಯಲು ಮುಂದಾಗಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಅಸಮರ್ಪಕ ಬಸ್ ಸೌಲಭ್ಯ: ವಿದ್ಯಾರ್ಥಿಗಳ ಪ್ರತಿಭಟನೆ

ಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ಹೋಗಲು ಬಸ್ ಸರಿಯಾದ ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಕಂಗಾಲಾಗಿದ್ದು, ಸಮಪರ್ಕಕ ಸಾರಿಗೆ ಕಲ್ಪಿಸುವಂತೆ‌ ಒತ್ತಾಯಿಸಿ ಸ್ಥಳೀಯ ಬಸ್ ನಿಲ್ದಾಣದಲ್ಲಿ ಶುಕ್ರವಾರ ಮುಂಜಾನೆ ಬಸ್ ಗಳನ್ನು ತಡೆದು ದಿಢೀರ್ ಪ್ರತಿಭಟನೆ ಕೈಗೊಂಡ ಘಟನೆ ನಡೆಯಿತು.

ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್!

ಕಾಂಗ್ರೆಸ್ ಮುಖಂಡ, ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಲಕ್ಷಣ ರಹಿತ ಸೋಂಕಾಗಿದ್ದು, ಇದರಿಂದ ನಾನು ಹೋಂ ಕ್ವಾರಂಟೈನ್ ಆಗಿದ್ದೇನೆ. ನಾನೀಗ ಆರೋಗ್ಯವಾಗಿದ್ದೇನೆ. 10 ದಿನಗಳ ಕಾಲ ಕ್ವಾರೈಂಟೈನ್ ನಲ್ಲಿರಲಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿರುವವರು ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆಗೊಳಗಾಗಲು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.