ಬೆಂಗಳೂರು: 450 ರೂಪಾಯಿ ಪಾವತಿಸಿದರೆ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆ ತಿರುವಾಂಕೂರು ದೇವಸ್ಥಾನ ಮಂಡಳಿಯೊಂದಿಗೆ ಈ ಬಗ್ಗೆ ಒಪ್ಪಂದ ಮಾಡಿಕೊಂಡಿದೆ. ಸ್ಪೀಡ್ ಪೋಸ್ಟ್ ಮೂಲಕ ದೇಶಾದ್ಯಂತ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಿದೆ.
ಆರವಣ, ತುಪ್ಪ, ಅರಿಶಿನ – ಕುಂಕುಮ, ವಿಭೂತಿ ಮತ್ತು ಅರ್ಚನೆಯ ಪ್ರಸಾದವನ್ನು ಒಳಗೊಂಡ ಕಿಟ್ ಗೆ 450 ರೂಪಾಯಿ ನಿಗದಿಪಡಿಸಲಾಗಿದೆ. ಭಕ್ತರು ಪೋಸ್ಟ್ ಆಫೀಸ್ ಗೆ ಭೇಟಿ ನೀಡಿ 450 ರೂಪಾಯಿ ಪಾವತಿಸಿ ಅಯ್ಯಪ್ಪ ಸ್ವಾಮಿ ಪ್ರಸಾದ ಬುಕ್ ಮಾಡಿದಲ್ಲಿ ಮನೆ ಬಾಗಿಲಿಗೆ ಪ್ರಸಾದ ತಲುಪಿಸಲಾಗುವುದು ಎಂದು ಹೇಳಲಾಗಿದೆ.
ಈ ಮೂಲಕ ಕೊರೊನಾದ ಈ ಸಮಯದಲ್ಲಿ ಈ ಬಾರಿ ಅಯ್ಯಪ್ಪಸ್ವಾಮಿ ಪ್ರಸಾದ ಸಿಗುತ್ತಿಲ್ಲವಲ್ಲಾ ಎನ್ನುವ ಕೊರಗು ದೂರವಾದಂತಾಗಿದೆ.