ವಿಷಕಾರಿ ಹಾವು ಕಚ್ಚಿ ವ್ಯಕ್ತಿ ಸಾವು

snake mulagund gadag

ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿಷಕಾರಿ ಹಾವು ಕಚ್ಚಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಮುಳಗುಂದ: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿಷಕಾರಿ ಹಾವು ಕಚ್ಚಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಮೃತ ವ್ಯಕ್ತಿ ಪಟ್ಟಣದ ಹಳೆಹುಡಾ ಓಣಿ ನಿವಾಸಿ ಬಸವರಾಜ ಫ. ಕೊಲ್ಲಾರಿ (38) ಎಂದು ಗುರುತಿಸಲಾಗಿದೆ. ನ.21 ರಂದು ಹೊಲದಲ್ಲಿ ಗೋವಿನಜೋಳ ಕಟಾವು ಮಾಡುತ್ತಿರುವಾಗ ಕಾಲಿಗೆ ಹಾವು ಕಚ್ಚಿದೆ, ತಕ್ಷಣ ಜಿಲ್ಲಾ ಆಸ್ಪತ್ರೆಯಲ್ಲಿ ಉಪಚರಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಈ ಕುರಿತು ಮುಳಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version