ಮುಳಗುಂದ: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿಷಕಾರಿ ಹಾವು ಕಚ್ಚಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಮೃತ ವ್ಯಕ್ತಿ ಪಟ್ಟಣದ ಹಳೆಹುಡಾ ಓಣಿ ನಿವಾಸಿ ಬಸವರಾಜ ಫ. ಕೊಲ್ಲಾರಿ (38) ಎಂದು ಗುರುತಿಸಲಾಗಿದೆ. ನ.21 ರಂದು ಹೊಲದಲ್ಲಿ ಗೋವಿನಜೋಳ ಕಟಾವು ಮಾಡುತ್ತಿರುವಾಗ ಕಾಲಿಗೆ ಹಾವು ಕಚ್ಚಿದೆ, ತಕ್ಷಣ ಜಿಲ್ಲಾ ಆಸ್ಪತ್ರೆಯಲ್ಲಿ ಉಪಚರಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಈ ಕುರಿತು ಮುಳಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ 307 ಪಾಸಿಟಿವ್: ಕೊರೊನಾದಿಂದ ಮೃತರಾದವರ ವಿವರ

ಗದಗ: ಜಿಲ್ಲೆಯಲ್ಲಿ ಶನಿವಾರ 307 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 23037 ಏರಿಕೆಯಾಗಿದೆ. ಇನ್ನು ಶನಿವಾರ ಕೊರೊನಾ ಸೋಂಕಿನಿಂದ ಐವರು ಸಾವನ್ನಪ್ಪಿದ್ದು ಈ ಮೂಲಕ ವರೆಗೆ 241 ಜನ ಜಿಲ್ಲೆಯಲ್ಲಿ ಸಾವನ್ನಪ್ಪಿದಂತಾಗಿದೆ.

ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ಅವಶ್ಯವಿದೆ: ಮೋಹನ ಮಾಳಿಶೆಟ್ಟಿ

ಪಂಚಮಸಾಲಿ 2ಎ ಮಿಸಲಾತಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಫೆ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಜಿಲ್ಲೆಯ ಸಮಾಜದ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಮೋಹನ ಮಾಳಿಶೆಟ್ಟಿ ಹೇಳಿದರು.

ಜನರಿಗೆ ‘ಕೈ’ ಕೊಡುವುದರಲ್ಲಿ ಕಾಂಗ್ರೆಸ್ ಸಿದ್ಧಹಸ್ತ : ಸಿಎಂ

ಗದಗ : ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ವಾಗಿದ್ದು, ಜನರಿಗೆ ಕೈಕೊಡುವ ಕೆಲಸದಲ್ಲಿ ಅವರು ಸಿದ್ಧಹಸ್ತರು ಎಂದು…

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆಯ ಮೇರೆಗೆ ವಿಧಾನ ಪರಿತ್ತಿಗೆ ಕಾಂಗ್ರೆಸ್ ಪಕ್ಷ…