ಮುಂಡರಗಿ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಮುಂಡರಗಿ-ಬೂದಿಹಾಳ ರಸ್ತೆ ಮದ್ಯೆದಲ್ಲಿ ಅಪಘಾತ ಸಂಭವಿಸಿದ್ದು ರಾಮಚಂದ್ರ ಕಮ್ಮಾರ(36) ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ. ಮುಂಡರಗಿ ಪೊಲೀಸ್ ಠಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.
ಮುಂಡರಗಿ: ಬೈಕ್ ಅಪಘಾತ ಸವಾರ ಸ್ಥಳದಲ್ಲೆ ಸಾವು

ಮುಂಡರಗಿ: ಬೈಕ್ ಅಪಘಾತ ಸವಾರ ಸ್ಥಳದಲ್ಲೆ ಸಾವು