ಮಸ್ಕಿ: ಎನ್ ಆರ್ ಬಿ ಸಿ 5ಎ ನಾಲಾ ಯೋಜನೆ ಜಾರಿಗಾಗಿ  ಕಳೆದ 9 ದಿನಗಳಿಂದ ಪಾಮನಕೆಲ್ಲೂರಿನಲ್ಲಿ  ನಡೆದ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ರೈತರು ತರಾಟೆಗೆ ತಗೆದುಕೊಂಡ ಘಟನೆ ನಡೆಯಿತು.

ಶನಿವಾರ ಭೇಟಿ ನೀಡಿದ ವೇಳೆ ನೀರಾವರಿ ಯೊಜನೆಗಾಗಿ ಕಳೆದ 9 ದಿನಗಳಿಂದ ಹೋರಾಟ ಮಾಡುತ್ತಿದ್ದೇವೆ. ಒಂದು ದಿನವಾದರು ಕೆಬಿಜೆಎನ್ಎಲ್ ಅಧಿಕಾರಿಗಳು ಭೇಟಿ ನೀಡಲಿಲ್ಲ. ತಾಲೂಕ ಆಡಳಿತದ ವೈಫಲ್ಯವೇ ಇದಕ್ಕೆ ಕಾರವಾಗಿದೆ ಎಂದು ಅಸಮಾಧಾನ ಹೊರ ಹಾಕಿದರು. ಈ ವೇಳೆ ಆಕ್ರೋಶಗೊಂಡ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಕಂದಾಯ ಇಲಾಖೆ ಅಧಿಕಾರಿಗಳ ಮೂಲಕ ಪ್ರತಿ ದಿನದ ಮಾಹಿತಿ ಪಡೆದುಕೊಂಡು ಸಹಾಯಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಗಮನಕ್ಕೆ ತಂದಿದ್ದೇನೆ. ಈ ಹೋರಾಟದ ಬಗ್ಗೆ  ಈಗಾಗಲೇ ಸರ್ಕಾರದ ಗಮನಕ್ಕೂ ಇದೆ ಎಂದು ಸಮಜಾಯಿಷಿ ನೀಡಿದರು.

ಈ ಸಂದರ್ಭದಲ್ಲಿ ನಾಗರೆಡ್ಡಪ್ಪ ದೇವರಮನಿ,  ಶಿವನಗೌಡ ವಟಗಲ್, ಬಸವರಾಜಪ್ಪಗೌಡ ವಟಗಲ್, ಶಿವನಗೌಡ ಮಾಲಿಪಾಟೀಲ್, ಪರ್ವತರೆಡ್ಡಿ ಹತ್ತಿಗುಡ್ಡ ಸೇರಿದಂತೆ ಅನೇಕ ರೈತರು ಮಾತನಾಡಿದರು.

ಅಧ್ಯಕ್ಷ ಬಸವರಾಜಪ್ಪಗೌಡ ಹರ್ವಾಪುರ, ಹುಚ್ಚಬುಡ್ಡಪ್ಪ ಅಮೀನಗಡ, ಮಂಜೂರ ಪಾಷ ಅಮೀನಗಡ, ಮೌನೇಶ ಬುದ್ದಿನ್ನಿ, ಯಮನಪ್ಪ ಮುದಬಾಳ, ಬುದ್ದಿನ್ನಿ ಎಸ್, ನೆಲ ಕೊಳ್ಳ, ಅಮೀನಗಡ, ವಟಗಲ್, ಚಿಲ್ಕರಾಗಿ, ಅನಂದಗಲ್, ಪಾಮನಕೆಲ್ಲೂರು ಸೇರಿದಂತೆ ಇನ್ನಿತರ ಗ್ರಾಮದ ರೈತರಿದ್ದರು.

Leave a Reply

Your email address will not be published. Required fields are marked *

You May Also Like

ಬ್ಲೇಡ್‌ನಿಂದ ಇರಿದುಕೊಂಡು ಅತ್ಮಹತ್ಯೆಗೆ ಯತ್ನ

ಓರ್ವ ವ್ಯಕ್ತಿ ದೇಹಕ್ಕೆ ಎಲ್ಲೆಂದರಲ್ಲಿ ಬ್ಲೇಡ್‌ನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ಆಸ್ಪತ್ರೆಯಲ್ಲಿಯೇ ಈ ಪರಿಸ್ಥಿತಿ ಇದ್ರೆ ರೋಗಿಗಳ ಪಾಡು ಇನ್ನೆಂಗೆ ಶಿವಾ!

ಸಾಮಾನ್ಯವಾಗಿ ಆಸ್ಪತ್ರೆಗೆ ಬರುವವರು ಆಸ್ಪತ್ರೆಯನ್ನೆ ಸಂಜೀವಿನಿ ಎಂದು ನಂಬಿರುತ್ತಾರೆ. ಆದರೆ, ಗದಗ ನಗರದಲ್ಲಿರುವ ಹೆರಿಗೆ ಆಸ್ಪತ್ರೆ ಇದಕ್ಕೆ ತದ್ವಿರುದ್ಧ ಎಂದು ಜನ ಮಾತಾಡಿಕೊಳ್ಳುವಂತಾಗಿದೆ. ಇನ್ನು ರೋಗಿಗಳು ಹಾಗು ರೋಗಿಗಳ ಸಂಬಂಧಿಕರು ಆಸ್ಪತ್ರೆಯಲ್ಲಿ ದಿನಕಳೆಯುವುದೆಂದರೆ ಹರಸಾಹಸವೇ ಸರಿ.

ದೇಶದ ಪ್ರಗತಿಗೆ ವಿಪಕ್ಷಗಳು ಅಡ್ಡಗಾಲು ಹಾಕುತ್ತಿವೆ – ಮೋದಿ!

ಭಗಲ್ ಪುರ : ರಾಷ್ಟ್ರದ ಹಿತಾಸಕ್ತಿ ಮನದಲ್ಲಿಟ್ಟು ಎನ್ ಡಿಎ ಕೆಲಸ ಮಾಡುತ್ತಿದ್ದರೆ ವಿಪಕ್ಷಗಳು ವಿರೋಧಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಗದಗ ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯಗಳಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೇ ಜಯಂತಿಯ ಆಚರಣೆ

ಗದಗ:PPG SC/ST ವಸತಿ ನಿಲಯ ಗದಗದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ…