ಗದಗ: ನಗರದ ಹಾತಲಗೇರಿ ನಾಕಾ ಬಳಿ ವಿವೇಕಾನಂದ ನಗರದಲ್ಲಿ ನೂತನವಾಗಿ ನಿರ್ಮಿಸಿದ ಗಾಣಿಗ ಸಮಾಜದ ಸಮುದಾಯ  ಭವನ ನ.30 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಗಾಣಿಗ ಸಮುದಾಯ ಭವನ ಕಟ್ಟಡ ಕಾರ್ಯಕಾರಣಿ ಸಮಿತಿ ಅಧ್ಯಕ್ಷ ನಿಂಗಪ್ಪ ಕೆಂಗಾರ ಹೇಳಿದರು.

ಅವರು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ರಾಜಕೀಯ ನಾಯಕರ ಹಾಗೂ ಗಾಣಿಗ ಸಮುದಾಯ ಸ್ವ ಇಚ್ಛೇಯಿಂದ ದೇಣಿಗೆ ನೀಡಿದರ ಫಲವಾಗಿ ಹಾಗೂ ಅಖಿಲ ಭಾರತ ಗಾಣಿಗ ವಿದ್ಯಾ ಹಾಗೂ ಉದ್ಯೋಗ ವರ್ಧಕ ಟ್ರಸ್ಟ್ ವತಿಯಿಂದ ನಿರ್ಮಿಸಿದ ಗಾಣಿಗ ಸಮುದಾಯ ಭವನದ ದ್ಘಾಟನೆ ನಡೆಯಲಿದೆ. ಇದೇ ವೇಳೆ ಸಮುದಾಯದ ವಾರ್ಷಿಕ ಸರ್ವ ಸಾಧಾರಣ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಕೂಡ ಜರುಗಲಿದೆ ಎಂದರು.

ನೂತನವಾಗಿ ನಿರ್ಮಿಸಿದ ಗಾಣಿಗ ಸಮಾಜದ ಸಮುದಾಯ  ಭವನ

ಜ.ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ವಿರೇಶ್ವರ ಪುಣ್ಯಾಶ್ರಮದ ಪಂ.ಕಲ್ಲಯ್ಯಜ್ಜನವರು ಸಮುದಾಯ ಭವನ ಉದ್ಘಾಟಿಸಲಿದ್ದಾರೆ. ಬೈರನಹಟ್ಟಿ ದೊರೆಸ್ವಾಮಿ ಮಠದ ಶಾಂತಲಿಂಗ ಮಹಾಸ್ವಾಮಿಗಳು, ಆಧ್ಯಾತ್ಮ ವಿದ್ಯಾಶ್ರಮದ ಡಾ. ನಿಲಮ್ಮ ತಾಯಿ ಅಸುಂಡಿ, ದೆಹಲಿಯ ತೋಂಟದಾರ್ಯ ಶಾಖಾ ಮಠದ ಮಹಾಂತ ದೇವರು, ಟ್ರಸ್ಟ್ ಗೌರವಾಧ್ಯಕ್ಷ ಸಿ.ಬಿ.ಬಡ್ನಿ ಭಾಗವಹಿಸುವವರು ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಬಸವರಾಜ ವೀರಪ್ಪ ಬಿಂಗಿ, ಮುರುಘರಾಜೇಂದ್ರ. ಎಂ ಬಡ್ನಿ, ಅಶೋಕ ಮಂದಾಲಿ, ಬಸವರಾಜಪ್ಪ ನವಲೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಒಳ್ಳೆಯ ಅವಕಾಶಗಳು ಸಿಕ್ಕರೆ ಕನ್ನಡದಲ್ಲಿಯೂ ನಟಿಸುವೆ – ಸಂಯುಕ್ತಾ!

ಬೆಂಗಳೂರು : ಲಾಕ್ ಡೌನ್ ಇದ್ದರೂ ಅಭಿಮಾನಿಗಳೊಂದಿಗೆ ತಮ್ಮ ಒಡನಾಟ ಇಟ್ಟುಕೊಂಡಿರುವ ನಟಿ ಸಂಯುಕ್ತಾ ಹೆಗ್ಡೆ…

ಸಾರಾಯಿ ಸೀಸೆಗಾಗಿ ಬಾರ್ ಮುಂದೆ ಕ್ಯೂ..!

ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ನ್ನು ಸ್ವಲ್ಪ ಮಟ್ಟಿಗೆ ಸಡಿಲಿಕೆ ಮಾಡಲಾಗಿದ್ದು, ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ, ಎಣ್ಣೆ ಹೈಕ್ಳು ಮಾತ್ರ ಬೆಳಿಗ್ಗೆಯಿಂದಲೇ ಅಂಗಡಿಗಳ ಮುಂದೆ ಕ್ಯೂ…!

ತುರ್ತು ವಾಹನ ಸೇವೆ ಒದಗಿಸಿ ಜನರಿಂದ ಸೈ ಎನಿಸಿಕೊಂಡ ಗ್ರಾಪಂ ಸದಸ್ಯ ಜಹೀರ್

ಮುಂಡರಗಿ: ಕೊರೊನಾದ ಈ ಸಂಕಷ್ಟದಲ್ಲಿ ಜನಸಾಮಾನ್ಯರ ಬದುಕು ತೀರಾ ಸಂಕಷ್ಟಕ್ಕೀಡಾಗಿದೆ. ಇಂತಹ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸುವ ಮೂಲಕ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಸೇವಾ ಕಾರ್ಯಕ್ಕೆ ಅಣಿಯಾಗಿದ್ದಾರೆ. ಹೌದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತಿ ಸದಸ್ಯ ಜಹೀರುದ್ದೀನ್ ಮುಲ್ಲಾ, ಗ್ರಾಮದಲ್ಲಿ ಉಚಿತ ತುರ್ತು ಸೇವಾ ವಾಹನದ ವ್ಯವಸ್ಥೆಯನ್ನು ಮಾಡಿದ್ದಾರೆ.

ಆನ್ ಲೈನ್ ವಂಚನೆ – ಶಿಕ್ಷಕರೇ ಇವರ ಟಾರ್ಗೆಟ್!

ಕೊಪ್ಪಳ : ಆನ್ ಲೈನ್ ವಂಚಕರು ಇಲ್ಲಿ ಶಿಕ್ಷಕರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಶಿಕ್ಷಕರ ಖಾತೆಗೆ ಕನ್ನ ಹಾಕಿ, ವಂಚಿಸುತ್ತಿರುವ ನೂರಾರು ಪ್ರಕರಣಗಳು ಜಿಲ್ಲೆಯಲ್ಲಿ ಬೆಳಕಿಗೆ ಬರುತ್ತಿವೆ.