ನ.30ಕ್ಕೆ ಗಾಣಿಗ ಸಮುದಾಯ ಭವನದ ಲೋಕಾರ್ಪಣೆ

ganiga samaj gadaga

ಗದಗ: ನಗರದ ಹಾತಲಗೇರಿ ನಾಕಾ ಬಳಿ ವಿವೇಕಾನಂದ ನಗರದಲ್ಲಿ ನೂತನವಾಗಿ ನಿರ್ಮಿಸಿದ ಗಾಣಿಗ ಸಮಾಜದ ಸಮುದಾಯ  ಭವನ ನ.30 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಗಾಣಿಗ ಸಮುದಾಯ ಭವನ ಕಟ್ಟಡ ಕಾರ್ಯಕಾರಣಿ ಸಮಿತಿ ಅಧ್ಯಕ್ಷ ನಿಂಗಪ್ಪ ಕೆಂಗಾರ ಹೇಳಿದರು.

ಅವರು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ರಾಜಕೀಯ ನಾಯಕರ ಹಾಗೂ ಗಾಣಿಗ ಸಮುದಾಯ ಸ್ವ ಇಚ್ಛೇಯಿಂದ ದೇಣಿಗೆ ನೀಡಿದರ ಫಲವಾಗಿ ಹಾಗೂ ಅಖಿಲ ಭಾರತ ಗಾಣಿಗ ವಿದ್ಯಾ ಹಾಗೂ ಉದ್ಯೋಗ ವರ್ಧಕ ಟ್ರಸ್ಟ್ ವತಿಯಿಂದ ನಿರ್ಮಿಸಿದ ಗಾಣಿಗ ಸಮುದಾಯ ಭವನದ ದ್ಘಾಟನೆ ನಡೆಯಲಿದೆ. ಇದೇ ವೇಳೆ ಸಮುದಾಯದ ವಾರ್ಷಿಕ ಸರ್ವ ಸಾಧಾರಣ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಕೂಡ ಜರುಗಲಿದೆ ಎಂದರು.

ನೂತನವಾಗಿ ನಿರ್ಮಿಸಿದ ಗಾಣಿಗ ಸಮಾಜದ ಸಮುದಾಯ  ಭವನ

ಜ.ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ವಿರೇಶ್ವರ ಪುಣ್ಯಾಶ್ರಮದ ಪಂ.ಕಲ್ಲಯ್ಯಜ್ಜನವರು ಸಮುದಾಯ ಭವನ ಉದ್ಘಾಟಿಸಲಿದ್ದಾರೆ. ಬೈರನಹಟ್ಟಿ ದೊರೆಸ್ವಾಮಿ ಮಠದ ಶಾಂತಲಿಂಗ ಮಹಾಸ್ವಾಮಿಗಳು, ಆಧ್ಯಾತ್ಮ ವಿದ್ಯಾಶ್ರಮದ ಡಾ. ನಿಲಮ್ಮ ತಾಯಿ ಅಸುಂಡಿ, ದೆಹಲಿಯ ತೋಂಟದಾರ್ಯ ಶಾಖಾ ಮಠದ ಮಹಾಂತ ದೇವರು, ಟ್ರಸ್ಟ್ ಗೌರವಾಧ್ಯಕ್ಷ ಸಿ.ಬಿ.ಬಡ್ನಿ ಭಾಗವಹಿಸುವವರು ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಬಸವರಾಜ ವೀರಪ್ಪ ಬಿಂಗಿ, ಮುರುಘರಾಜೇಂದ್ರ. ಎಂ ಬಡ್ನಿ, ಅಶೋಕ ಮಂದಾಲಿ, ಬಸವರಾಜಪ್ಪ ನವಲೆ ಉಪಸ್ಥಿತರಿದ್ದರು.

Exit mobile version