ಮಸ್ಕಿ: ಕ್ಷೇತ್ರದ ಬಿಜೆಪಿ ಪಕ್ಷದಿಂದ ನ.30ರಂದು ಪಟ್ಟಣದಲ್ಲಿ ಗ್ರಾಮ ಸ್ವರಾಜ್ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬರಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪಗೌಡ ನಕ್ಕಲದಿನ್ನಿ ಅವರು ಹೇಳಿದರು.

ಪಟ್ಟಣದ ಬಸವೇಶ್ವರ ನಗರದಲ್ಲಿನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಗ್ರಾಮ ಸ್ವರಾಜ್ಯ ಸಮಾವೇಶ ಮಾಡಲಾಗುತ್ತಿದೆ. ಪ್ರತಿ ಬೂತ್ ನಲ್ಲಿ ಪಕ್ಷದ 5 ಜನರನ್ನು ಎಜೆಂಟ್ ರನ್ನಾಗಿ ನೇಮಕ ಮಾಡಲಾಗುವುದು. ಇದಕ್ಕೆ ಪಂಚರತ್ನ ಎಂದು ಕರೆಯಲಾಗುತ್ತದೆ. ಅಂದಿನ ದಿನ ಸಮಾವೇಶಕ್ಕೆ ಸಮಾಜ ಕಲ್ಯಾಣ ಸಚಿವ ಶ್ರೀರಾಮಲು, ಸಂಸದ ಕರಡಿ ಸಂಗಣ್ಣ, ಸಂಸದ ಪ್ರತಾಪಸಿಂಹ ಸೇರಿ ಜಿಲ್ಲೆಯ 600ಕ್ಕೂ ಹೆಚ್ಚು ಪ್ರಮುಖ ನಾಯಕರು, ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಾಣೇಶ ದೇಶಪಾಂಡೆ, ಬಿಜೆಪಿ ಮಸ್ಕಿ ಘಟಕ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ ಇದ್ದರು.

Leave a Reply

Your email address will not be published. Required fields are marked *

You May Also Like

ಕೆರೆಗೆ ಮರುಜೀವ ನೀಡಿದ ಧರ್ಮಸ್ಥಳ ಯೋಜನೆ

ಪಟ್ಟಣದ ಕಲ್ಲೂರ ರಸ್ತೆಗೆ ಹೊಂದಿಕೊAಡ ಪಟ್ಟಣಶೆಟ್ಟಿ ಕೆರೆ ಈಗ ಅಭಿವೃದ್ದಿಗೊಂಡಿದ್ದು ಕಡಿಮೆ ವೆಚ್ಚದಲ್ಲಿ ಬೃಹತ್ ಕೆರೆ ನಿರ್ಮಿಸಿದ ಅಭಿವೃದ್ದಿ ಸಮಿತಿ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತುರ್ತು ವಾಹನ ಸೇವೆ ಒದಗಿಸಿ ಜನರಿಂದ ಸೈ ಎನಿಸಿಕೊಂಡ ಗ್ರಾಪಂ ಸದಸ್ಯ ಜಹೀರ್

ಮುಂಡರಗಿ: ಕೊರೊನಾದ ಈ ಸಂಕಷ್ಟದಲ್ಲಿ ಜನಸಾಮಾನ್ಯರ ಬದುಕು ತೀರಾ ಸಂಕಷ್ಟಕ್ಕೀಡಾಗಿದೆ. ಇಂತಹ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸುವ ಮೂಲಕ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಸೇವಾ ಕಾರ್ಯಕ್ಕೆ ಅಣಿಯಾಗಿದ್ದಾರೆ. ಹೌದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತಿ ಸದಸ್ಯ ಜಹೀರುದ್ದೀನ್ ಮುಲ್ಲಾ, ಗ್ರಾಮದಲ್ಲಿ ಉಚಿತ ತುರ್ತು ಸೇವಾ ವಾಹನದ ವ್ಯವಸ್ಥೆಯನ್ನು ಮಾಡಿದ್ದಾರೆ.

ನೂರಾರು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಉತ್ತರಪ್ರಭ ಸುದ್ದಿಕೋಲಾರ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಇಂದು ಜೆಡಿಎಸ್ ಹಾಗೂ…

ಎಸ್.ಎಸ್.ಎಲ್.ಸಿ ಪರೀಕ್ಷೆ: ಗದಗನಲ್ಲಿ 3 ವಿದ್ಯಾರ್ಥಿಗಳು ಡಿಬಾರ್..!

ಗದಗ: ಇಲ್ಲಿನ ಮುನ್ಸಿಪಲ್ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ಮೂವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಡಿಬಾರ್…