ಮಸ್ಕಿ: ತಾಲೂಕಿನ ಉಪ್ಪಾರ ಬುದ್ದಿನಿ ಗ್ರಾಮದಲ್ಲಿ ನಮ್ಮ ಕರವೇ ಗ್ರಾಮ ಘಟಕ ಉದ್ಘಾಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಸ್ಕಿ ತಾಲೂಕ ಘಟಕ ನಮ್ಮ ಕರವೇ ಅಧ್ಯಕ್ಷ ಬಸವರಾಜ ಉದ್ಬಾಳ ಅವರು ಮಾತನಾಡಿ, ನಾಡು ನುಡಿ, ಜಲ, ಭಾಷೆ ರಕ್ಷಣೆಗೆ ನಮ್ಮ ಕರವೇ ಕಾರ್ಯಕರ್ತರು ಬದ್ದರಾಗಿರಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ರಾಮಣ್ಣ ಜಿ ಉದ್ಬಾಳ, ಪ್ರಶಾಂತ ಎಮ್ ಕೂಠಾರಿ, ಉಪ್ಪಾರ ಬುದ್ದಿನ್ನಿ, ಗ್ರಾಮ ಘಟಕ ಅಧ್ಯಕ್ಷ ಹನುಮೇಶ ಗೌಡ, ಉಪಾಧ್ಯಕ್ಷ ಮಂಜುನಾಥ ಎಮ್, ಗ್ರಾಮದ ಮುಖಂಡರಾದ ವೆಂಕಟೇಶ ಜಾನೇಕಲ್ಲ, ರಂಗನಾಥ ಗೌಡ, ನಾಗರಾಜ ಜಾನೇಕಲ್ಲ, ಪ್ರದೀಪ್ ಸಾಗರ, ಮಲ್ಲನಗೌಡ ಮಾಲಿಪಾಟೀಲ್ ಸೇರಿದಂತೆ ಇನ್ನಿತರಿದ್ದರು.