ಗಜೇಂದ್ರಗಡ: ರಾಜ್ಯದಲ್ಲಿ ಡಿ. 1 ರಿಂದ ಎಲ್ಲ ವೈದ್ಯಕೀಯ ಕಾಲೇಜುಗಳು ಮತ್ತು ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಗಳ ತರಗತಿ ಆರಂಭಕ್ಕೆ ಸರ್ಕಾರ ಅವಕಾಶ ನೀಡಿದ ಹಿನ್ನಲೆಯಲ್ಲಿ ಪಟ್ಟಣದ ಭಗವಾನ್ ಮಹಾವೀರ ಜೈನ್ ಆರ್ಯುವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಸ್ಯಾನಿಟೈಜರ ಮಾಡಲಾಯಿತು.

ರಾಷ್ಟ್ರೀಯ ವೈದ್ಯಕೀಯ ಆಯೋಗ, ಯುಜಿಸಿ ಮತ್ತು ರಾಜ್ಯ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ವೈದ್ಯಕೀಯ ಪದವಿ ಕಾಲೇಜುಗಳನ್ನು ಆರಂಭಿಸಲು ಸೂಚಿಸಿದೆ ಅದರನ್ವಯ ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿವಿ ಸುತ್ತೋಲೆ ಹೊರಡಿಸಿದ ಹಿನ್ನಲೆಯಲ್ಲಿ ಪಟ್ಟಣದ ಆರ್ಯುವೇದಿಕ್ ಕಾಲೇಜಿನ ಎಲ್ಲ ಕೊಠಡಿಗಳನ್ನು ಸ್ಯಾನಿಟೈಜರ ಮಾಡಲಾಯಿತು.

ಈಗಾಗಲೇ ಎಲ್ಲ ವೈದ್ಯಕೀಯ ವಿದ್ಯಾರ್ಥಿಗಳಿಗೆ ತರಗತಿಗೆ ನಾಳೆಯಿಂದಲೇ ಹಾಜರಾಗಲು ಸೂಚಿಸಲಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗಳ ಕೋವಿಡ್ ಪರಿಕ್ಷೆ ಕಡ್ಡಾಯವಾಗಿದೆ. ಈ ಹಿನ್ನಲೆಯಲ್ಲಿ ಪೋಷಕರ ಅನುಮತಿ ಪತ್ರ ಹಾಗೂ ಕೋವಿಡ್ ನೆಗಟಿವ್ ವರದಿ ಪ್ರಮಾಣ ತರಲು ಸೂಚಿಸಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಅಶೋಕ ಬಾಗಮಾರ ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆ ಕಾರ್ಯದರ್ಶಿ ಅಜೀತ ಬಾಗಮಾರ, ನಿರ್ದೆಶಕ ವರ್ಧಮಾನ ಬಾಗಮಾರ, ಪ್ರಾಚಾರ್ಯ ಕೆ.ಎಸ್. ಬೆಲ್ಲದ ಇದ್ದರು.

Leave a Reply

Your email address will not be published. Required fields are marked *

You May Also Like

ಟೈರ್ ಗೆ ಬೆಂಕಿ ಹಚ್ಚಲು ಪೊಲೀಸರ ವಿರೋಧ: ಕರವೇ ಕಾರ್ಯಕರ್ತರ ಆಕ್ರೊಶ

ಕರ್ನಾಟಕ ಬಂದ್ ಹಿನ್ನಲೆ, ಮುಳಗುಂದ ನಾಕಾ ಬಳಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟೈರ್ ಗೆ ಬೆಂಕಿ ಹಚ್ಚಲು ಪ್ರತಿಭಟನಾಕಾರರು ಮುಂದಾದರು.

ಇಂಧನ ಬೆಲೆ ಏರಿಕೆ ಖಂಡಿಸಿ ಕರವೇಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ದೇಶದಲ್ಲಿ ಇಂಧನ ಬೆಲೆ, ವಿದ್ಯುತ್ ಬೆಲೆ ಏರಿಕೆಯನ್ನು ಖಂಡಿಸಿ, ಶೀಘ್ರವಾಗಿ ಬೆಲೆ ಏರಿಕೆ ನಿಲ್ಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಹೆಚ್.ಶಿವರಾಮೇಗೌಡ) ಬಣದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಹಿಂದೂ ಅಂತ ಭಾರತೀಯ ಭಾಷೆಯಲ್ಲಿ ಇಲ್ಲ: ಸಾಹಿತಿ ಸೂಳಿಭಾವಿ

ಉತ್ತರಪ್ರಭ ಸುದ್ದಿಗದಗ: ಹಿಂದು ಪದ ಭಾರತೀಯದ್ದಲ್ಲ ಅದು ಪರ್ಷಿಯನ್ ನಿಂದ ಬಂದಿದೆ. ಪರ್ಷಿಯನ್ ಹಾಗೂ ಇಸ್ಲಾಂದಲ್ಲಿ…