ಗಜೇಂದ್ರಗಡ: ರಾಜ್ಯದಲ್ಲಿ ಡಿ. 1 ರಿಂದ ಎಲ್ಲ ವೈದ್ಯಕೀಯ ಕಾಲೇಜುಗಳು ಮತ್ತು ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಗಳ ತರಗತಿ ಆರಂಭಕ್ಕೆ ಸರ್ಕಾರ ಅವಕಾಶ ನೀಡಿದ ಹಿನ್ನಲೆಯಲ್ಲಿ ಪಟ್ಟಣದ ಭಗವಾನ್ ಮಹಾವೀರ ಜೈನ್ ಆರ್ಯುವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಸ್ಯಾನಿಟೈಜರ ಮಾಡಲಾಯಿತು.

ರಾಷ್ಟ್ರೀಯ ವೈದ್ಯಕೀಯ ಆಯೋಗ, ಯುಜಿಸಿ ಮತ್ತು ರಾಜ್ಯ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ವೈದ್ಯಕೀಯ ಪದವಿ ಕಾಲೇಜುಗಳನ್ನು ಆರಂಭಿಸಲು ಸೂಚಿಸಿದೆ ಅದರನ್ವಯ ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿವಿ ಸುತ್ತೋಲೆ ಹೊರಡಿಸಿದ ಹಿನ್ನಲೆಯಲ್ಲಿ ಪಟ್ಟಣದ ಆರ್ಯುವೇದಿಕ್ ಕಾಲೇಜಿನ ಎಲ್ಲ ಕೊಠಡಿಗಳನ್ನು ಸ್ಯಾನಿಟೈಜರ ಮಾಡಲಾಯಿತು.

ಈಗಾಗಲೇ ಎಲ್ಲ ವೈದ್ಯಕೀಯ ವಿದ್ಯಾರ್ಥಿಗಳಿಗೆ ತರಗತಿಗೆ ನಾಳೆಯಿಂದಲೇ ಹಾಜರಾಗಲು ಸೂಚಿಸಲಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗಳ ಕೋವಿಡ್ ಪರಿಕ್ಷೆ ಕಡ್ಡಾಯವಾಗಿದೆ. ಈ ಹಿನ್ನಲೆಯಲ್ಲಿ ಪೋಷಕರ ಅನುಮತಿ ಪತ್ರ ಹಾಗೂ ಕೋವಿಡ್ ನೆಗಟಿವ್ ವರದಿ ಪ್ರಮಾಣ ತರಲು ಸೂಚಿಸಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಅಶೋಕ ಬಾಗಮಾರ ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆ ಕಾರ್ಯದರ್ಶಿ ಅಜೀತ ಬಾಗಮಾರ, ನಿರ್ದೆಶಕ ವರ್ಧಮಾನ ಬಾಗಮಾರ, ಪ್ರಾಚಾರ್ಯ ಕೆ.ಎಸ್. ಬೆಲ್ಲದ ಇದ್ದರು.

Leave a Reply

Your email address will not be published. Required fields are marked *

You May Also Like

ಮಕ್ಕಳಿಗೆ ಸನ್ಮಾರ್ಗದ ದಾರಿ ತೋರಿ- ತೋಂಟದ ಶ್ರೀ

ಶಿಕ್ಷಕರು ತಮ್ಮಲ್ಲಿನ ಅನುಭವದ ಪಾಠ ಕೌಶಲ್ಯ ಹದಗೊಳಿಸಿಕೊಂಡು ವಿದ್ಯಾರ್ಥಿಗಳಿಗೆ ಸನ್ಮಾರ್ಗದ ದಾರಿಯಲ್ಲಿ ಮುನ್ನಡೆಸಬೇಕು ಎಂದು ಗದುಗಿನ ತೋಂಟದ ಡಾ. ಸಿದ್ದರಾಮ ಸ್ವಾಮೀಜಿಯವರ ಹೇಳಿದರು.

ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಹಿಂಪಡೆದ ಆಯೋಗ!

ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಮುಳಗುಂದ: ಮಳೆಯಿಂದ ಬೆಳೆ ಜಲಾವೃತ

ಮುಳಗುಂದ: ಶನಿವಾರ ರಾತ್ರಿ ಪಟ್ಟಣ ಸೇರಿದಂತೆ ಚಿಂಚಲಿ, ಕಲ್ಲೂರ ಹಾಗೂ ನೀಲಗುಂದ ಗ್ರಾಮಗಳ ವ್ಯಾಪ್ತಿಯಲ್ಲಿ ಒಂದು ಗಂಟೆಗೂ ಹೆಚ್ಚುಕಾಲ ಬಿರುಸಿನ ಮಳೆ ಸುರಿದಿದೆ.

ಜಗತ್ತಿನಾದ್ಯಂತ ಮುಂದುವರೆದ ಮರಣ ಮೃದಂಗ!

ಕೊರೊನಾ ಹಾವಳಿ ದಿನದಿಂದ ದಿನಕ್ಕೆಹೆಚ್ಚಾಗುತ್ತಿದ್ದು, ಇಲ್ಲಿಯವರೆಗೂ ಜಗತ್ತಿನಲ್ಲಿ 2.48 ಲಕ್ಷ ಜನರು ಸಾವನ್ನಪ್ಪಿದ್ದಾರೆ.