ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಹಳ್ಳಿ ಫೈಟ್ ಗೆ ದಿನಾಂಕ ಯಾವಾಗ ಎನ್ನುವ ಕುತೂಹಲ ಬಹುತೇಕರಲ್ಲಿತ್ತು. ಆದರೆ ಇಂದು ಕೊನೆಗೂ  ಚುನಾವಣಾ ಆಯೋಗ ಮೂಹುರ್ತ ಫಿಕ್ಸ್ ಮಾಡಿದ್ದು, ಚುನಾವಣೆ ದಿನಾಂಕಕ್ಕೆ ಎದುರು ನೋಡುತ್ತಿದ್ದವರ ಸಂತಸಕ್ಕೆ ಕಾರಣವಾಗಿದೆ

ಡಿಸೆಂಬರ್ ಅಂತ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. 113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ಡಿ. 22ರಂದು ನಡೆಯಲಿದೆ. ಡಿ. 27ರಂದು ಉಳಿದ ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 7ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.

ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳ 45128 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕೆಲವು ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ. ನ.30 ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ, ಡಿ. 11 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿ. 14 ನಾಮಪತ್ರ ವಾಪಸ್‌ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಡಿ. 30ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

Leave a Reply

Your email address will not be published. Required fields are marked *

You May Also Like

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಮಗುಚಿ ಬಿದ್ದು ಸ್ಥಳದಲ್ಲಿ ಓರ್ವ ವ್ಯಕ್ತಿ ಸಾವನ್ನಪಿದ್ದು, ಐವರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂಧ ರಸ್ತೆಯಲ್ಲಿ ನಡೆದಿದೆ.

ಮಾ.11 ರಿಂದ ದ್ವಾದಶ ಜ್ಯೋತಿರ್ಲಿಂಗ ದರ್ಶನ

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಸಹಯೋಗದಲ್ಲಿ ಮಾ.11 ರಿಂದ 13ರ ವರೆಗೆ ಸಂಜೆ 4 ರಿಂದ ರಾತ್ರಿ 10ರ ವರೆಗೆ ನಗರದ ಮುನ್ಸಿಪಲ್ ಪದವಿ ಪೂರ್ವ ಕಾಲೇಜ ಮೈದಾನದಲ್ಲಿ ದಿನಗಳಲ್ಲಿ ವಿಶ್ವದಲ್ಲಿ ಅವತರಿಸಿದ ವಿಶ್ವೇಶ್ವರನ ದರ್ಶನ, ಸಹಸ್ರಲಿಂಗ ದರ್ಶನ ಮತ್ತು ದ್ವಾದಶ ಜ್ಯೋತಿರ್ಲಿಂಗ ದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ರಹ್ಮಕುಮಾರಿ ಬಿ.ಕೆ.ಜಯಂತಿಅಕ್ಕ ಹೇಳಿದರು.

ಬೈಕ ಕಳ್ಳನನ್ನು ಬಂದನ ಮಾಡಿದ ಪೊಲೀಸರು

ಲಕ್ಷ್ಮೇಶ್ವರ.ಬೈಕ್ ಕಳ್ಳನನ್ನು ಪತ್ತೆ ಹಚ್ಚುವಲ್ಲಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಠಾಣೆ ಪೊಲೀಸರು ಯಶಸ್ಸಿಯಾಗಿದ್ದಾರೆ.ನಾಲ್ಕು ಬೈಕಗಳನ್ನು ಕಳ್ಳತನ…

ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಆಕ್ರೋಶ: ಸರ್ಕಾರದ ಕೆಟ್ಟ ಧೋರಣೆ ನಿಲ್ಲುವವರೆಗೂ ನಮ್ಮ ಹೋರಾಟ ನಿಲ್ಲದು

ಸರ್ಕಾರದ ಕೆಟ್ಟ ಧೋರಣೆಗಳು ಎಲ್ಲಿಯವರೆಗೆ ನಡೆಯುತ್ತವೇಯೋ ಅಲ್ಲಿಯವರೆಗೆ ನಮ್ಮ ಹೋರಾಟ ನಿಲ್ಲುವದಿಲ್ಲ ನಮ್ಮ ಕಾರ್ಮಿಕ ವರ್ಗದವರು ಅನುಭವಿಸುವ ನೋವು ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ ಎಂದು ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಸರ್ಕಾರದ ವಿರುದ್ಧ ಕಿಡಿಕಾರಿದರು.