ಲಕ್ಷ್ಮೇಶ್ವರ: ಪಟ್ಟಣದ ಪುರಾತನ ಪುಣ್ಯ ಕ್ಷೇತ್ರವಾದ ಅಗಸ್ತ್ಯ ತೀರ್ಥದಲ್ಲಿ ಸಪ್ತಮುನಿಗಳಲ್ಲಿ ಒಬ್ಬರಾದ ಅಗಸ್ತ್ಯ ಮುನಿಗಳು ತಪಸ್ಸು ಮಾಡಿರುವ ಪವಿತ್ರ ಸ್ಥಳವನ್ನು ಮುಜುರಾಯಿ ಮತ್ತು ಪ್ರಾಚ್ಛವಸ್ತು ಇಲಾಖೆಗೆ ಸೆರಿಸಬೇಕೆಂದು ವಿಶ್ವ ಹಿಂದೂ ಪರಿಷತ್ತು ಹಾಗೂ ಭಜರಂಗದಳ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

   ಅಗಸ್ತ್ಯ ಮುನಿಗಳಿ ತಪಸ್ಸು ಗೈದ ಅಗಸ್ತ್ಯ ತೀರ್ಥವನ್ನು ಸ್ವಚ್ಛಗೊಳಿಸಿ ಅಲ್ಲಿರುವ ಪುರಾತನ ಹೊಂಡಗಳಾದ ಗಂಗೆ  ಮತ್ತು ಗೌರಿ ಸ್ನಾನ ಮಾಡಿದರೆ ಗಂಗೆಯಲ್ಲಿಯೇ ಸ್ನಾನ ಮಾಡಬೇಕು ಅಂದರೆ ಪುಣ್ಯ ಬರುತ್ತದೆ ಎನ್ನುವ ಪ್ರತೀತ ಇದೆ ಇವುಗಳನ್ನು ಸ್ವಚ್ಛಗೊಳಿಸಲು ವಿವಿಧ ಸಂಘಟನೆಗಳು ಮುಂದೆ ಬಂದಿದ್ದು ಅವರೊಂದಿಗೆ ಇಲಾಖೆಯವರು ಕೈಜೊಡಿಸಬೇಕು ಹಾಗೂ ಪುನರುಜ್ಜೀವನ ಗೊಳಿಸಲು ಮುಜರಾಯಿ ಹಾಗೂ ಪ್ರಾಚ್ಯವಸ್ತು ಇಲಾಖೆಗಳ ಗಮನ ಸೆಳೆಯಬೇಕು ಹಾಗೂ ಇಲ್ಲಿ ಈಗಾಗಲೇ ಮಲಮೂತ್ರ ವಿಸರ್ಜನೆ ಮಾಡುತ್ತಿದ್ದು ಅದನ್ನು ತಡೆಯಲು ಸೂಕ್ತ ಕ್ರಮ ಜೊತೆಗೆ ಸುತ್ತಲೂ ತಂತಿಬೇಲಿಯನ್ನು ನಿರ್ಮಿಸಬೇಕೆಂದು ಮನವಿ ಮಾಡಿಕೊಂಡರು.

   ಈ ಸಂದರ್ಭದಲ್ಲಿ ಸೋಮೇಶ ಜಗದೀಶ ಉಪನಾಳ, ವಿನೋದ ಉಪ್ಪಾರ,ಮೌನೇಶ ಬಡಿಗೇರ, ವಿರೂಪಾಕ್ಷ ಬೆಳವಿಗಿ, ಅಮರೇಶ ಗಾಂಜಿ, ಗಿರೀಶ ನಾಗಸಮುದ್ರ ,ಚಂದ್ರು ಮುಳಗುಂದ, ಮಂಜು ಬೂದಿಹಾಳ, ಮಲಕಾಜಪ್ಪ ಓಂಕಾರಿ, ಸದಾನಂದ ನಂದೆಣ್ಣವರ, ಪ್ರದೀಪ ಮುಳಗುಂದ, ಬಸವರಾಜ ಚಕ್ರಸಾಲಿ, ಮೈಲಾರಪ್ಪ ಹೆಗೆಣ್ಣವರ, ಪ್ರವೀಣ ಆಚಾರಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಬೀದರ್: ಅನಾವಶ್ಯಕ ವಾಹನಗಳೊಂದಿಗೆ ರಸ್ತೆಗಿಳಿದಿರಾ.. ಹುಷಾರ್..!

ಬೀದರ್: ಈಗಾಗಲೇ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿದ್ದರಿಂದ ಬೀದರ್ ಜಿಲ್ಲೆಯನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ.…

ನಾಳೆ ನಡೆಯುವ ಜನಸಂಪರ್ಕ ಯಾತ್ರೆಗೆ ಬಿಎಸ್‌ವೈ, ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸೇರಿದಂತೆ ಅನೇಕ…

ಉತ್ತರಪ್ರಭ ಫಲಶೃತಿ: ಏನರಾ ಆಗ್ಲಿ ಧೂಳಿಗೆ ತೆರಿಗೆ ಕಟ್ಟೊ ಕಾಟ ತಪ್ಪಿದ್ರ ಸಾಕು..!

ಮನೆ, ಜಾಗೆ, ನೀರು, ಕಟ್ಟಡ ಹೀಗಿಲ್ಲ ತೆರಿಗೆ ಕಟ್ಟುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಅಷ್ಟೆ ಏಕೆ ಸ್ವತಃ ಕಟ್ಟಿದ್ದೇವೆ. ಆದರೆ ಇದ್ಯಾವುದಿದು ಧೂಳಿಗೆ ಕರ ಕಟ್ಟುವುದು ಅಂದ್ಕೊಂಡ್ರಾ?

ನಗರ ಸಭೆ ಚುನಾವಣೆ: 4ನೇ ವಾರ್ಡಿನಲ್ಲಿ ಕಾಂಗ್ರೇಸ್   ಮತ್ತು 28ನೇ ವಾರ್ಡಿನಲ್ಲಿ ಬಿಜೆಪಿ

ಗದಗ ಬೇಟಗೇರಿ:ನಗರ ಸಭೆ 4 ಮತ್ತು  28 ನೇ ವಾರ್ಡನ ಮತ  ಎಣಿಕೆ ಮುಕ್ತಾಯ ,…