ಲಕ್ಷ್ಮೇಶ್ವರ: ಪಟ್ಟಣದ ಪುರಾತನ ಪುಣ್ಯ ಕ್ಷೇತ್ರವಾದ ಅಗಸ್ತ್ಯ ತೀರ್ಥದಲ್ಲಿ ಸಪ್ತಮುನಿಗಳಲ್ಲಿ ಒಬ್ಬರಾದ ಅಗಸ್ತ್ಯ ಮುನಿಗಳು ತಪಸ್ಸು ಮಾಡಿರುವ ಪವಿತ್ರ ಸ್ಥಳವನ್ನು ಮುಜುರಾಯಿ ಮತ್ತು ಪ್ರಾಚ್ಛವಸ್ತು ಇಲಾಖೆಗೆ ಸೆರಿಸಬೇಕೆಂದು ವಿಶ್ವ ಹಿಂದೂ ಪರಿಷತ್ತು ಹಾಗೂ ಭಜರಂಗದಳ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

   ಅಗಸ್ತ್ಯ ಮುನಿಗಳಿ ತಪಸ್ಸು ಗೈದ ಅಗಸ್ತ್ಯ ತೀರ್ಥವನ್ನು ಸ್ವಚ್ಛಗೊಳಿಸಿ ಅಲ್ಲಿರುವ ಪುರಾತನ ಹೊಂಡಗಳಾದ ಗಂಗೆ  ಮತ್ತು ಗೌರಿ ಸ್ನಾನ ಮಾಡಿದರೆ ಗಂಗೆಯಲ್ಲಿಯೇ ಸ್ನಾನ ಮಾಡಬೇಕು ಅಂದರೆ ಪುಣ್ಯ ಬರುತ್ತದೆ ಎನ್ನುವ ಪ್ರತೀತ ಇದೆ ಇವುಗಳನ್ನು ಸ್ವಚ್ಛಗೊಳಿಸಲು ವಿವಿಧ ಸಂಘಟನೆಗಳು ಮುಂದೆ ಬಂದಿದ್ದು ಅವರೊಂದಿಗೆ ಇಲಾಖೆಯವರು ಕೈಜೊಡಿಸಬೇಕು ಹಾಗೂ ಪುನರುಜ್ಜೀವನ ಗೊಳಿಸಲು ಮುಜರಾಯಿ ಹಾಗೂ ಪ್ರಾಚ್ಯವಸ್ತು ಇಲಾಖೆಗಳ ಗಮನ ಸೆಳೆಯಬೇಕು ಹಾಗೂ ಇಲ್ಲಿ ಈಗಾಗಲೇ ಮಲಮೂತ್ರ ವಿಸರ್ಜನೆ ಮಾಡುತ್ತಿದ್ದು ಅದನ್ನು ತಡೆಯಲು ಸೂಕ್ತ ಕ್ರಮ ಜೊತೆಗೆ ಸುತ್ತಲೂ ತಂತಿಬೇಲಿಯನ್ನು ನಿರ್ಮಿಸಬೇಕೆಂದು ಮನವಿ ಮಾಡಿಕೊಂಡರು.

   ಈ ಸಂದರ್ಭದಲ್ಲಿ ಸೋಮೇಶ ಜಗದೀಶ ಉಪನಾಳ, ವಿನೋದ ಉಪ್ಪಾರ,ಮೌನೇಶ ಬಡಿಗೇರ, ವಿರೂಪಾಕ್ಷ ಬೆಳವಿಗಿ, ಅಮರೇಶ ಗಾಂಜಿ, ಗಿರೀಶ ನಾಗಸಮುದ್ರ ,ಚಂದ್ರು ಮುಳಗುಂದ, ಮಂಜು ಬೂದಿಹಾಳ, ಮಲಕಾಜಪ್ಪ ಓಂಕಾರಿ, ಸದಾನಂದ ನಂದೆಣ್ಣವರ, ಪ್ರದೀಪ ಮುಳಗುಂದ, ಬಸವರಾಜ ಚಕ್ರಸಾಲಿ, ಮೈಲಾರಪ್ಪ ಹೆಗೆಣ್ಣವರ, ಪ್ರವೀಣ ಆಚಾರಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಬಸ್ ನಿಲ್ದಾಣದಲ್ಲಿ ಶೌಚಾಲಯ ಅವ್ಯವಸ್ಥೆ ಸಾರಿಗೆ ಅಧಿಕಾರಿ ತರಾಟೆಗೆ

ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಅವ್ಯವಸ್ಥೆಯನ್ನು ಸಾರಿಗೆ ಇಲಾಖೆ ಸಂಚಾರಿ ನಿರೀಕ್ಷಕರಿಗೆ ತೋರಿಸುವ ಮೂಲತ ಜೈ ಭೀಮ ಆರ್ಮಿ ಸಂಘಟನೆ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ನಡೆದಿದೆ.

ಮೆಕ್ಕೆಜೋಳ ರೈತರಿಗೆ ಪರಿಹಾರ: ಇದರಲ್ಲಿ ಸಂಶಯ ಬೇಡ

ಕೊಪ್ಪಳ: ಸರ್ಕಾರ ಇಟ್ಟ ಹೆಜ್ಜೆ ಹಿಂದೆ ಇಡುವುದಿಲ್ಲ. ರೈತರನ್ನು ಎಂದಿಗೂ ಕೈಬಿಡುವುದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರ…

ಗದಗ ಜಿಲ್ಲೆಯಲ್ಲಿ ವಿವಿದೆಡೆ 66400 ರೂ, ಮೌಲ್ಯದ ಅಕ್ರಮ ಮದ್ಯ ವಶ: ಆರೋಪಿಗಳ ಬಂಧನ

ಗದಗ: ಕೋವಿಡ್ 19 ಮಾರ್ಗಸೂಚಿಗಳನ್ನು ಹಾಗೂ ಕಾನೂನು ಉಲ್ಲಂಘನೆ ಮಾಡಿ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದ 15 ಜನ ಆರೋಪಿತರಿಗಳನ್ನು ಬಂಧಿಸಿ , ಅವರ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಿ, ಬಂಧಿತರಿಂದ 66400 ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ

ಬಾಲ್ಯ ವಿವಾಹ ಮದುವೆಯಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತಿನ ಕ್ರಮ

ಮಕ್ಕಳ ರಕ್ಷಣೆ, ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆಗೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಆಂಟೋನಿ ಸೆಬಾಸ್ಟಿನ್ ಸೂಚನೆ ನೀಡಿದರು.